ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಹಾಸನದ ಕೆರೆಗಳಿಗೆ ನೀರು ತುಂಬಲು 330 ಕೋಟಿ ರು ಯೋಜನೆ'

|
Google Oneindia Kannada News

ಹಾಸನ, ಅಕ್ಟೋಬರ್ 25: ದುದ್ದ ಮತ್ತು ಶಾಂತಿಗ್ರಾಮ ಹೋಬಳಿಗಳಿಗೆ 195 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆ ಶೀಘ್ರದಲ್ಲೇ ಅನುಷ್ಟಾನಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಡಿ ರೇವಣ್ಣ ಘೋಷಿಸಿದ್ದಾರೆ.

ಇದೇ ರೀತಿ 330 ಕೋಟಿ ರೂಪಾಯಿಗಳ ವೆಚ್ಚದಲ್ಲಿ ದುದ್ದ, ಶಾಂತಿಗ್ರಾಮ, ಹಳೇಕೋಟೆ ಭಾಗದ ಕೆರೆಗಳ ತುಂಬುವ ಕೆಲಸವೂ ಚಾಲನೆಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಹಲವು ನೀರಾವರಿ ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದರು.

ಹಾಸನ : 10 ವರ್ಷದ ರೈಲ್ವೇ ಮೇಲ್ಸೇತುವೆ ಯೋಜನೆಗೆ ಮರುಜೀವಹಾಸನ : 10 ವರ್ಷದ ರೈಲ್ವೇ ಮೇಲ್ಸೇತುವೆ ಯೋಜನೆಗೆ ಮರುಜೀವ

ಗ್ರಾಮೀಣ ಪ್ರದೇಶದ ಜನರಿಗೆ ನೆರವು: ಭೂ ದಾಖಲೆಗಳು ಸರಿಯಿಲ್ಲದೆ ಗ್ರಾಮೀಣ ಪ್ರದೇಶದ ಜನರು ಪರದಾಡುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ದರಖಾಸ್ತು ಪೋಡಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವ ರೇವಣ್ಣ ರವರು ತಿಳಿಸಿದರು.

HD Revanna on Drinking water and Lakes development

ಭೂಮಾಪನ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ತಾಲ್ಲೂಕಿನ ಶಾಂತಿಗ್ರಾಮ ಹೋಬಳಿ - ಮಾರೇನಹಳ್ಳಿ ಏರ್ಪಡಿಸಿದ್ದ ದರಖಾಸ್ತು ಪೋಡಿ ಆಂದೋಲನ ಉದ್ಘಾಟಿಸಿ ಮಾತನಾಡಿದ ಸಚಿವರು, ಭೂ ದಾಖಲೆಗಳ ಸಮಸ್ಯೆ ಮುಕ್ತಗೊಳಿಸಲು ಸರ್ಕಾರದಿಂದ ಈ ಆಂದೋಲನಕ್ಕೆ ವಿಶೇಷ ಆದೇಶ ಹೊರಡಿಸಲಾಗಿದ್ದು, ಶೀಘ್ರದಲ್ಲೇ ಹಾಸನ ಜಿಲ್ಲೆ ಪೋಡಿ ತೊಂದರೆಗಳಿಂದ ಮುಕ್ತಗೊಳ್ಳಲಿದೆ ಎಂದರು.

ಉದ್ಘಾಟನೆಗೂ ಮೊದಲೇ 3ನೇ ಬಾರಿಗೆ ಕುಸಿದ ಬಿದ್ದ ಸೇತುವೆಉದ್ಘಾಟನೆಗೂ ಮೊದಲೇ 3ನೇ ಬಾರಿಗೆ ಕುಸಿದ ಬಿದ್ದ ಸೇತುವೆ

ಬೆಲೆ ಕುಸಿತದ ಹಿನ್ನಲೆಯಲ್ಲಿ ಸರ್ಕಾರದಿಂದಲೇ ಬೆಂಬಲ ಬೆಲೆಯೊಂದಿಗೆ ಜೋಳ ಖರೀದಿಸಬೇಕಿದೆ. ಡೈರಿ ಮೂಲಕ ಇದನ್ನು ನೇರವಾಗಿ ಕೊಂಡು ರೈತರಿಗೆ ಅನುಕೂಲ ಮಾಡಿಕೊಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದ ಸಚಿವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ತಮ್ಮ ಆಧ್ಯತೆಯಾಗಿದ್ದು, ಅದಕ್ಕಾಗಿ ಶ್ರಮಿಸಲಾಗುತ್ತಿದೆ ಎಂದರು.

HD Revanna on Drinking water and Lakes development

ಉಪವಿಭಾಗಾಧಿಕಾರಿಗಳಾದ ಡಾ.ಎಚ್.ಎಲ್ ನಾಗರಾಜ್ ರವರು ಮಾತನಾಡಿ ವಿವಾದ ಮುಕ್ತ, ದೋಷ ಮುಕ್ತ, ಪಹಣಿ ನೀಡಲು ಈ ಆಂದೋಲನ ಜಾರಿಗೆ ತರಲಾಗಿದೆ. ಜನ ಸಾಮಾನ್ಯರು ಪ್ರತಿನಿತ್ಯ ಕಂದಾಯ ಇಲಾಖೆ ಕಚೇರಿಗಳಿಗೆ ಅಲೆದಾಡುತ್ತಿರುವುದನ್ನು ಗಮನಿಸಿ ಜಿಲ್ಲಾ ಉಸ್ತುವಾರಿ ಸಚಿವರು ಈ ಯೋಜನೆ ರೂಪಿಸಿದ್ದಾರೆ ಎಂದರು.

ದೇವೇಗೌಡರ ಕುಟುಂಬದ ಮೇಲೆ ಭೂಕಬಳಿಕೆ ಆರೋಪ ಮಾಡಿದ ಕಾಂಗ್ರೆಸ್‌ ಮಾಜಿ ಸಚಿವ ಎ.ಮಂಜುದೇವೇಗೌಡರ ಕುಟುಂಬದ ಮೇಲೆ ಭೂಕಬಳಿಕೆ ಆರೋಪ ಮಾಡಿದ ಕಾಂಗ್ರೆಸ್‌ ಮಾಜಿ ಸಚಿವ ಎ.ಮಂಜು

ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ ಸತೀಶ್, ಭೂಮಾಪನ ಇಲಾಖೆ ಉಪನಿರ್ದೇಶಕರಾದ ಕೃಷ್ಣಕುಮಾರ್ ಮತ್ತಿತರರು ಹಾಜರಿದ್ದರು

English summary
Hassan district in charge Minister HD Revanna said fill up water would by released for Drinking water requirement and also fill up lakes in Hassan district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X