ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ: ಮಾಜಿ ಸಚಿವ ಎಚ್. ಡಿ. ರೇವಣ್ಣ ಹೇಳುವುದೇನು?
ಹಾಸನ, ಡಿಸೆಂಬರ್ 04: ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ 'ಸ್ವಾಭಿಮಾನಿ ಸಮಾವೇಶ' ಎಂದು ಇದನ್ನು ಕರೆಯಲಾಗಿತ್ತು. ಬಳಿಕ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಇದನ್ನು 'ಜನಕಲ್ಯಾಣ ಸಮಾವೇಶ' ಎಂದು ಬದಲಾಯಿಸಿದ್ದಾರೆ. ಇದು ಪಕ್ಷದ ಕಾರ್ಯಕ್ರಮ ಎಂದು ಘೋಷಣೆ ಮಾಡಿದ್ದಾರೆ.
ಗುರುವಾರ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್ ನಾಯಕರ ದಂಡು ಸೇರಲಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಮನಗರ ಜಿಲ್ಲೆಯನ್ನು ಜೆಡಿಎಸ್ ಮುಕ್ತ ಮಾಡಿದೆ ಕಾಂಗ್ರೆಸ್. ಈಗ ಏಕೆ ಹಾಸನದಲ್ಲಿ ಸಮಾವೇಶ ಮಾಡಲಾಗುತ್ತಿದೆ?. ಈ ಮೂಲಕ ಜೆಡಿಎಸ್ಗೆ ನೀಡಲಿರುವ ಸಂದೇಶ ಏನು? ಎಂಬುದು ಚರ್ಚೆಯ ವಿಚಾರ.

ಎಚ್. ಡಿ. ರೇವಣ್ಣ ಪ್ರತಿಕ್ರಿಯೆ: ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಗುರುವಾರ ಹಾಸನದಲ್ಲಿ ನಡೆಯಲಿರುವ 'ಜನಕಲ್ಯಾಣ ಸಮಾವೇಶ'ದ ಕುರಿತು ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಅದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಮಾಡಲಿ ಜಿಲ್ಲೆಯ ಅಭಿವೃದ್ಧಿ ಮಾಡಲಿ" ಎಂದು ಹೇಳಿದರು.
"ಸಮಾವೇಶದ ಬಗ್ಗೆ ಗಾಬರಿ ಆಗುವ ಸನ್ನಿವೇಶ ಇಲ್ಲ. ಮುಗಿಸುವುದು ದೇವರಿಗೆ ಸಂಬಂಧಪಟ್ಟಿದ್ದು, ವಿಧಾನಸಭೆ ಚುನಾವಣೆ ನಡೆದ ಒಂದೇ ವರ್ಷಕ್ಕೆ ಲೋಕಸಭೆ ಚುನಾವಣೆ ನಡೆಯಿತು, ಏನಾಯಿತು?" ಎಂದು ಎಚ್. ಡಿ. ರೇವಣ್ಣ ಪ್ರಶ್ನೆ ಮಾಡಿದರು.
"ನಾವೆಲ್ಲ ಸೋಲು ಗೆಲುವು ನೋಡಿರುವವರು. ಸಮಾವೇಶಕ್ಕೆಲ್ಲ ದೃತಿಗೆಡುವುದಿಲ್ಲ" ಎಂದು ಹೊಳೆನರಸೀಪುರದ ಶಾಸಕರಾದ ಎಚ್. ಡಿ. ರೇವಣ್ಣ ಸ್ಪಷ್ಟಪಡಿಸಿದರು.
ಜೆಡಿಎಸ್ ಭದ್ರಕೋಟೆ ಛಿದ್ರ: ಹಾಸನ ಜಿಲ್ಲೆಯ ಜೆಡಿಎಸ್ ಭದ್ರಕೋಟೆ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದಾರೆ. ಈ ಮೂಲಕ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ವಶಕ್ಕೆ ಪಡೆದುಕೊಂಡಿದೆ.
ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷವಾದ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲು ವಿಫಲವಾಗಿದೆ. ಆದರೆ ಹಾಸನದಲ್ಲಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್ಗೆ ಬಿಸಿ ಮುಟ್ಟಿಸಿದೆ.
ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ 6,72,988 ಮತಗಳನ್ನು ಪಡೆದು 42,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾಗಿದ್ದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 6,30,339 ಮತಗಳನ್ನು ಪಡೆದು ಸೋಲು ಕಂಡರು. ಈ ಮೂಲಕ 2019ರ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರವನ್ನು 2024ರಲ್ಲಿ ಕಾಂಗ್ರೆಸ್ಗೆ ಜೆಡಿಎಸ್ ಬಿಟ್ಟುಕೊಟ್ಟಿದೆ.
ಹಾಸನ ಸಮಾವೇಶವನ್ನು ಮೊದಲು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಬಿಂಬಿಸಲಾಗಿತ್ತು. ಸಿದ್ದರಾಮಯ್ಯ ಆಪ್ತರಾದ ಕೆಲವು ಸಚಿವರು ಈ ಸಮಾವೇಶದ ಸಿದ್ಧತೆಯನ್ನು ಪ್ರಾರಂಭಿಸಿದ್ದರು. ಆದರೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ದೆಹಲಿ ಭೇಟಿ ಬಳಿಕ ಸಮಾವೇಶದ ಚಿತ್ರಣ ಬದಲಾಯಿತು. ಈಗ ಪಕ್ಷದ ಕಾರ್ಯಕ್ರಮವಾಗಿ ಸಮಾವೇಶನ್ನು ನಡೆಸಲಾಗುತ್ತಿದ್ದು, ರಾಷ್ಟ್ರೀಯ ನಾಯಕರಿಗೆ ಸಹ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications