ಹಾಸನ: ದೇವಸ್ಥಾನಕ್ಕೆ ತೆರಳಿದ್ದ ವೈದ್ಯ: ಹೇಮಾವತಿ ಹಿನ್ನೀರಿನಲ್ಲಿ ಶವವಾಗಿ ಪತ್ತೆ
ಹಾಸನ, ಸೆಪ್ಟೆಂಬರ್ 16: ಹೇಮಾವತಿ ಹಿನ್ನೀರಿಗೆ ಸ್ನಾನಮಾಡಲು ಹೋಗಿದ್ದ ವೈದ್ಯ ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೊರೂರು ಸಮೀಪ ನಡೆದಿದೆ. ಚಂದ್ರಶೇಖರ್ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಅರಕಲಗೂಡು ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ವಾಸವಿದ್ದ ಚಂದ್ರಶೇಖರ್ ಹೊಳೆನರಸೀಪುರ ತಾಲೂಕಿನ ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೆಪ್ಟೆಂಬರ್ 14 ರಂದು ಹೇಮಾವತಿ ಹಿನ್ನೀರಿನಲ್ಲಿರುವ ದೇವಾಲಯಕ್ಕೆ ತೆರಳಿದ್ದರು. ಕೋನಾಪುರ ಐಲ್ಯಾಂಡ್ನ ರಂಗನಾಥಸ್ವಾಮಿ ದೇವಾಲಯಕ್ಕೆ ಹೋಗಿ ಬರುವುದಾಗಿ ಆಪ್ತರಿಗೆ ತಿಳಿಸಿ ಹೋಗಿದ್ದರು.

ಬೆಳಗ್ಗೆ ದೇವಸ್ಥಾನಕ್ಕೆ ತೆರಳಿದ್ದ ಚಂದ್ರಶೇಖರ್ ಸಂಜೆ 5 ಗಂಟೆಯಾದರೂ ಬಾರದೇ ಇದ್ದಾಗ ಗೊರೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರು ಹಾಗೂ ಬಟ್ಟೆ ಪತ್ತೆಯಾಗಿದೆ. ಸೆಪ್ಟೆಂಬರ್ 15 ರಂದು ಶವ ನೀರಿನಲ್ಲಿ ತೇಲಿ ಬಂದಿದ್ದು, ಅರಕಲಗೂಡು ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾರ್ಮಾಡಿ ಘಾಟ್: 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ, ಕ್ಲೀನರ್ ಪಾರು
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನೂರು ಅಡಿ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮುಡಿ ಘಾಟಿ ಪ್ರದೇಶದಲ್ಲಿನ ಸೋಮನ ಕಾಡು ಬಳಿ ನಡೆದಿದೆ.
ಘಾಟಿ ಪ್ರದೇಶದಲ್ಲಿ ದಟ್ಟ ಮಂಜು ಹಾಗೂ ಮಳೆಯ ಪರಿಣಾಮ ಲಾರಿ ಚಾಲಕನಿಗೆ ರಸ್ತೆ ಕಾಣದೆ ಘಟನೆ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಲಾರಿ ಪುತ್ತೂರಿನಿಂದ ಚಿತ್ರದುರ್ಗ ಜಿಲ್ಲೆಗೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿತ್ತು, ಈ ವೇಳೆ ಲಾರಿ ಪ್ರಪಾತಕ್ಕೆ ಬಿದ್ದು ಮರಕ್ಕೆ ಸಿಲುಕಿ ಹಾಕಿಕೊಂಡಿದೆ. ಈ ವೇಳೆ ಸ್ಥಳೀಯರು ಲಾರಿ ಚಾಲಕ ಮತ್ತು ಕ್ಲೀನರ್ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಬಣಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications