ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ರೇವಣ್ಣ ಎಚ್ಚರಿಕೆ
ಹಾಸನ, ಜೂನ್ 27: ಮುಖ್ಯಮಂತ್ರಿ ಯಡಿಯೂರಪ್ಪ ಇಳಿವಯಸ್ಸಿನಲ್ಲಿ ದ್ವೇಷದ ರಾಜಕಾರಣ ಮಾಡಬಾರದು ಎಂದು ಮಾಜಿ ಸಚಿವ ರೇವಣ್ಣ ಹೇಳಿಕೆ ನೀಡಿದ್ದಾರೆ. ಮೊಸಳೆ ಹೊಸಹಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಕುರಿತು ಹಾಸನದಲ್ಲಿ ಮಾತನಾಡುವ ಸಂದರ್ಭ ರೇವಣ್ಣ ಸರ್ಕಾರದ ನಿಯಮವನ್ನು ವಿರೋಧಿಸಿದ್ದಾರೆ.
Recommended Video
''ಸರ್ಕಾರ ತಾಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಹಾಸನದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ವರ್ಗಾಯಿಸುವಂತೆ ಆದೇಶ ನೀಡಿದೆ. ದ್ವೇಷದ ರಾಜಕಾರಣದಿಂದ ಕಾಲೇಜನ್ನು ಹಾಸನದ ಎಂಜಿನಿಯರ್ ಕಾಲೇಜಿಗೆ ವಿಲೀನಗೊಳಿಸಲು ಹುನ್ನಾರ ನಡೆಸಿದೆ'' ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ಹದಿಮೂರು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಇದ್ದು, ಮೊಸಳೆ ಹೊಸಹಳ್ಳಿ ಕಾಲೇಜಿನಲ್ಲಿ 173 ವಿದ್ಯಾರ್ಥಿಗಳು ಇದ್ದಾರೆ. ಇಲ್ಲಿಗಿಂತ ಬೇರೆ ಬೇರೆ ಕಾಲೇಜಿನಲ್ಲಿ ಕಡಿಮೆ ವಿದ್ಯಾರ್ಥಿಗಳು ಇದ್ದಾರೆ. ಆದರೂ, ಆ ಕಾಲೇಜುಗಳನ್ನು ಬಿಟ್ಟು ಇದನ್ನು ಮಾತ್ರ ಮುಚ್ಚುತ್ತಿದ್ದಾರೆ ಎನ್ನುವುದು ರೇವಣ್ಣ ಆರೋಪವಾಗಿದೆ.

ಗ್ರಾಮೀಣ ಭಾಗದ ಸಾಕಷ್ಟು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊಸಳೆ ಹೊಸಹಳ್ಳಿ ಕಾಲೇಜಿನಿಂದ ಅನುಕೂಲವಾಗಿದೆ. ಯಾವುದೇ ಕಾರಣಕ್ಕೂ ಕಾಲೇಜು ಇಲ್ಲಿಂದ ಸ್ಥಳಾಂತರ ಆಗಲು ಬಿಡುವುದಿಲ್ಲ. ಕಾಲೇಜು ಮುಚ್ಚಿದರೆ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ. ಬಿಜೆಪಿ ಸರ್ಕಾರ ಶಾಶ್ವತವಾಗಿ ಇರುವುದಿಲ್ಲ. ನಮಗೂ ಕಾಲ ಬರಲಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications