ಸಮಸ್ಯೆ ರೇವಣ್ಣನೇ ಆಗಿದ್ದರೆ ರಾಜೀನಾಮೆ ಕೊಡಿಸಲು ಪ್ರಯತ್ನಿಸ್ತೇನೆ: ಎಟಿ ರಾಮಸ್ವಾಮಿ
ಹೊಳೆನರಸೀಪುರ (ಹಾಸನ), ಜುಲೈ 16: "ರಾಜೀನಾಮೆ ಸಲ್ಲಿಸಿರುವ ಹತ್ತಕ್ಕೂ ಹೆಚ್ಚು ಶಾಸಕರು (ಜೆಡಿಎಸ್- ಕಾಂಗ್ರೆಸ್ ಶಾಸಕರು) ವಾಪಸ್ ಬಂದು, ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವ ಮೈತ್ರಿ ಸರಕಾರದ ಉಳಿವಿಗೆ ಸಹಕಾರ ನೀಡುವುದಾದರೆ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ.ರೇವಣ್ಣ ಅವರಿಂದ ರಾಜೀನಾಮೆ ಕೊಡಿಸುವುದಕ್ಕೆ ಪ್ರಯತ್ನ ಮಾಡುತ್ತೇನೆ".
- ಹೀಗೆ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ. ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನಲ್ಲಿ ಸೋಮವಾರದಂದು ಮಾಧ್ಯಮದವರ ಜತೆಗೆ ಮಾತನಾಡಿದ ಎ.ಟಿ.ರಾಮಸ್ವಾಮಿ, ಸರಕಾರದ ಇಂದಿನ ಅನಿಶ್ಚಿತತೆಗೆ ಎಚ್.ಡಿ.ರೇವಣ್ಣ ಒಬ್ಬರೇ ಕಾರಣರಲ್ಲ ಎಂದು ಸಮರ್ಥಿಸಿಕೊಂಡರು.
ಕೆಲಸ ಮಾಡುವ ಉತ್ಸಾಹದಲ್ಲಿ ಕೆಲ ತಪ್ಪುಗಳು ಆಗಿರಬಹುದು. ಆದರೆ ಇಂದಿನ ಪರಿಸ್ಥಿತಿಗೆ ಅವರೇ ಕಾರಣ ಎಂದು ಶಾಸಕರೇನಾದರೂ ಅಂದುಕೊಂಡಿದ್ದರೆ ರೇವಣ್ಣ ಅವರಿಂದ ರಾಜೀನಾಮೆ ಕೊಡಿಸುವುದಕ್ಕೆ ನಾನು ಪ್ರಯತ್ನ ಮಾಡುತ್ತೇನೆ ಎಂದು ಎ.ಟಿ.ರಾಮಸ್ವಾಮಿ ಅವರು ಹೇಳಿದ್ದಾರೆ.

ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವುದೇನೆಂದರೆ, ಲೋಕೋಪಯೋಗಿ ಸಚಿವ ಹಾಗೂ ಮುಖ್ಯಮಂತ್ರಿಗಳ ಸೋದರ ಎಚ್.ಡಿ.ರೇವಣ್ಣ ಎಲ್ಲ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುತ್ತಾರೆ. ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಬಿಡುವುದಿಲ್ಲ ಎಂದಿದ್ದಾರೆ. ರೇವಣ್ಣ ಅವರ ಮೇಲೆ ಮಾತ್ರವಲ್ಲ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಇತರ ಸದಸ್ಯರ ಬಗ್ಗೆಯೂ ಅಸಮಾಧಾನ ತೋಡಿಕೊಂಡಿದ್ದಾರೆ.
ಆದರೆ, ಶಾಸಕ ಎ.ಟಿ.ರಾಮಸ್ವಾಮಿ ಅಂಥವರಿಂದ ರೇವಣ್ಣ ಅವರ ಮನವೊಲಿಸಿ ಇಂಥ ತ್ಯಾಗಕ್ಕೆ ಸಿದ್ಧಗೊಳಿಸಲು ಸಾಧ್ಯವಿದೆಯಾ? ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಇದಕ್ಕೆ ಉತ್ತರ ಇರಬಹುದು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications