ಹಾಸನ: ಟೋಲ್ ಹೆಸರಿನಲ್ಲಿ ಸಿಬ್ಬಂದಿಯಿಂದ ಅಕ್ರಮ ಹಣ ವಸೂಲಿ; ಸ್ಥಳೀಯರ ಆಕ್ರೋಶ
ಹಾಸನ, ಅಕ್ಟೋಬರ್ 19: ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75ರ ಟೋಲ್ಗಳಲ್ಲಿ ಸ್ಥಳೀಯರಿಗಿರುವ ವಿನಾಯಿತಿಯನ್ನೂ ಲೆಕ್ಕಿಸದೆ ಅಕ್ರಮ ಹಣ ವಸೂಲಿ ಮಾಡಿ ಸುಲಿಗೆ ಮಾಡಲಾಗುತ್ತಿದೆ ಅನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ಎಂಟು ಕಿಲೋಮೀಟರ್ ವ್ಯಾಪ್ತಿಯ ಸ್ಥಳೀಯರಿಗೆ ಟೋಲ್ ಫೀ ವಿನಾಯಿತಿ ಇದ್ದರೂ ನಿಯಮವನ್ನೂ ಗಾಳಿಗೆ ತೂರಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದು ಸ್ಥಳೀಯರಿಗೆ ಕೋಪ ತರಿಸಿದೆ. ಸಣ್ಣ ಪುಟ್ಟ ಖರೀದಿಗೆ ಹೋಗಿಬರಲೂ ನೂರಾರು ರೂ. ಟೋಲ್ ಕಟ್ಟಬೇಕಾದ ಇಕ್ಕಟ್ಟಿಗೆ ಸಿಲುಕಿರುವ ಸ್ಥಳೀಯ ಜನರು ಕ್ರಮಕ್ಕಾಗಿ ಹಾಸನ ಜಿಲ್ಲಾಡಳಿತಕ್ಕೆ ಮೊರೆ ಹೋಗಿದ್ದಾರೆ.

ವಸೂಲಿ ಕೇಂದ್ರಗಳಾಗಿ ಬದಲಾದ ಟೋಲ್ಗೇಟ್
ಹಾಸನದ ಮೂಲಕ ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಟೋಲ್ಗೇಟ್ಗಳಲ್ಲಿ ಈಗ ಅಕ್ಷರಶಃ ವಸೂಲಿ ಕೇಂದ್ರಗಳಾಗಿ ಬದಲಾಗಿವೆ. ಅದೂ ಟೋಲ್ ವ್ಯಾಪ್ತಿಗೆ ಬರುವ 8 ಕಿಲೋಮೀಟರ್ ಪ್ರದೇಶದ ಗ್ರಾಮಗಳ ಜನರಿಗೆ ಟೋಲ್ ಶುಲ್ಕ ವಿನಾಯಿತಿ ಇದೆ ಎಂಬ ನಿಯಮವನ್ನು ಗಾಳಿಗೆ ತೂರಿ ಹಳ್ಳಿಗರಿಂದ ಅಕ್ರಮವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ.
ಪ್ರಶ್ನೆ ಮಾಡಿದರೆ ಟೋಲ್ ಸಿಬ್ಬಂದಿ ಗೂಂಡಾಗಿರಿ ಪ್ರದರ್ಶನ ಮಾಡುತ್ತಾರೆ ಎಂದು ಜನರು ಅಸಮಾಧಾನ ಹೊರ ಹಾಕಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮ ಸಮೀಪ ಇರುವ ದೇವಿಹಳ್ಳಿಯ ಮುಖ್ಯ ಟೋಲ್ನಲ್ಲಿ ಸುತ್ತಮುತ್ತ ಬರುವ ಎಚ್. ಆಲದಹಳ್ಳಿ, ಕೆ. ಆಲದಹಳ್ಳಿ, ಸಾರಾಪುರ, ಬ್ಯಾಡರಹಳ್ಳಿ ಹೀಗೆ ಕೇವಲ ಮೂರ್ನಾಲ್ಕು ಕಿಲೋಮೀಟರ್ ಅಂತರದಲ್ಲಿ ಹತ್ತಾರು ಹಳ್ಳಿಗಳಿವೆ.

100 ರೂ. ಪೆಟ್ರೋಲ್ ಹಾಕಿಸಲು 180 ರೂ. ಟೋಲ್
ಸಣ್ಣ ಪುಟ್ಟ ದಿನಸಿ ಖರೀದಿಗೂ ಜನರು ಶಾಂತಿಗ್ರಾಮಕ್ಕೆ ಹೋಗಿ ಬರಬೇಕು. ಪೆಟ್ರೋಲ್ ಹಾಕಿಸಲು ಟೋಲ್ಗೇಟ್ ದಾಟಿಯೇ ಹೋಗಬೇಕು. ಆದರೆ ಸ್ಥಳೀಯ ಐಡಿ ಕಾರ್ಡ್ ಜೊತೆಗೆ ವಾಹನದ ರಿಜಿಸ್ಟರ್ ಸರ್ಟಿಫಿಕೇಟ್ ಕೂಡ ಅವರದೇ ಹೆಸರಿನಲ್ಲಿರಬೇಕು ಅನ್ನುವ ಇಲ್ಲದ ನಿಮಯ ಮಾಡಿರುವ ಟೋಲ್ ಮ್ಯಾನೇಜರ್ ಅಕ್ರಮ ಸುಲಿಗೆ ಮಾಡುತ್ತಿದ್ದಾರೆ.
ಇದರಿಂದ 40 ರೂ.ನ ಒಂದು ಕೆಜಿ ಸಕ್ಕರೆ ಖರೀದಿಗೆ 180 ರೂ. ಟೋಲ್ ಕಟ್ಟಿ ಹೋಗಿ ಬರಬೇಕು. 100 ರೂ. ಪೆಟ್ರೋಲ್ ಹಾಕಿಸಲು 180 ರೂ. ಟೋಲ್ ಕಟ್ಟಬೇಕು. ಇಷ್ಟೆಲ್ಲಾ ಸಮಸ್ಯೆ ಆಗುತ್ತಿದೆ ಎಂದು ಹಾಸನ ಜಿಲ್ಲಾಧಿಕಾರಿಗೆ ಮನವಿ ಮಾಡಿದ ನೂರಾರು ಜನರು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿಗೆ ದೂರು ನೀಡಿದ ಸ್ಥಳೀಯರು
ಕಳೆದ ಆರು ವರ್ಷಗಳಿಂದಲೂ ಇಲ್ಲಿ ಟೋಲ್ ಇದೆ. ಹಿಂದೆ ಇದ್ದ ಟೋಲ್ ಮುಖ್ಯಸ್ಥರು ಸ್ಥಳೀಯರು ಆಧಾರ್ ಕಾರ್ಡ್ ಕೊಟ್ಟರೆ ಸಾಕು ಅವರಿಗೆ ಟೋಲ್ ಶುಲ್ಕ ವಿನಾಯಿತಿ ಕೊಡುತ್ತಿದ್ದರು. ಈಗ ಆಡಳಿತ ಸಿಬ್ಬಂದಿಗಳು ಯಾರ ಮಾತನ್ನೂ ಕೇಳುತ್ತಿಲ್ಲ ಎಂದು ಹಾಸನ ಡಿಸಿಗೆ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ, ಸ್ಥಳೀಯರಿಗೆ ವಿನಾಯಿತಿ ಕೊಡಬೇಕಾಗುತ್ತದೆ. ಸ್ಥಳೀಯರು ತಮಗಾಗುತ್ತಿರುವ ಸಮಸ್ಯೆ ಬಗ್ಗೆ ಮನವಿ ಮಾಡಿದ್ದಾರೆ. ಕೂಡಲೆ ಹೆದ್ದಾರಿ ಅಧಿಕಾರಿಗಳು ಹಾಗು ಟೋಲ್ ಉಸ್ತುವಾರಿಗಳನ್ನು ಕರೆದು ಮಾತನಾಡುತ್ತೇನೆ. ಸ್ಥಳೀಯ ರೈತರಿಗೆ ಆಗುತ್ತಿರುವ ಅನಾನುಕೂಲ ಸರಿಪಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನೆರವಾದ ರೈತರು
ಒಟ್ಟಿನಲ್ಲಿ ಉತ್ತಮ ಗುಣಮಟ್ಟದ ರಸ್ತೆ ಬೇಕು ಎಂದು ತಮ್ಮದೇ ಜಮೀನು ಕೊಟ್ಟು ಉತ್ತಮ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನೆರವಾದ ರೈತರಿಗೆ ಸಹಾಯ ಆಗಲಿ ಎಂದು ಕೇಂದ್ರ ಸರ್ಕಾರವೇ ಸ್ಥಳೀಯರಿಗೆ ಟೋಲ್ ಶುಲ್ಕ ವಿನಾಯಿತಿ ನೀಡಿದೆ. ಆದರೆ ಇರುವ ನಿಯಮವನ್ನೇ ಉಲ್ಟಾ ಮಾಡುತ್ತಿರುವ ಟೋಲ್ ಅಧಿಕಾರಿಗಳ ದುರಾಸೆಯಿಂದ ಜನರು ದುಪ್ಪಟ್ಟು ಶುಲ್ಕ ತೆರಬೇಕಾಗಿ ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿ ಎನ್ನುವುದು ಜನರ ಆಗ್ರಹವಾಗಿದೆ.
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications