ಹಾಸನ; ಅಕ್ರಮ ಅಕ್ಕಿ ಸಾಗಾಟ, 471 ಚೀಲ ವಶಕ್ಕೆ
ಹಾಸನ, ಮೇ 10: ಹಾಸನ ನಗರದ ಕೈಗಾರಿಕಾ ಪ್ರದೇಶದ ಗೋದಾಮಿಗೆ ಅಕ್ರಮವಾಗಿ 471 ಚೀಲ ಅಕ್ಕಿ ದಾಸ್ತಾನು ಮಾಡಲಾಗುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಸಿಬಿಐ ಪೊಲೀಸರು ದಾಳಿ ಮಾಡಿದರು.
ಜಿಲ್ಲೆಯಲ್ಲಿ ಬಡವರಿಗೆ ವಿತರಣೆ ಆಗಬೇಕಿದ್ದ 471 ಚೀಲ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ದಂಧೆ ಬಯಲಾಗಿದೆ. ಅಕ್ರಮವಾಗಿ ಅಕ್ಕಿ ತಂದು ಖಾಸಗಿ ಗೋಡೌನ್ನಲ್ಲಿ ದಾಸ್ತಾನು ಮಾಡುವ ವೇಳೆ ದಾಳಿ ಮಾಡಲಾಗಿದೆ.
ಹಾಸನದ ಎಂಪಿಎಂಸಿ ಗೋಡೌನ್ನಿಂದ ಒಂದು ಲೋಡ್ ಪಡಿತರ ಅಕ್ಕಿಯನ್ನು ಸಾಗಟ ಮಾಡುತ್ತಿದ್ದರು. ಪಂಜಾಬ್ನಿಂದ ಕರ್ನಾಟಕಕ್ಕೆ ಅಕ್ಕಿಯನ್ನು ತಂದು ದಾಸ್ತಾನು ಮಾಡಲಾಗುತ್ತಿತ್ತು.

ಚಾಲಕನ ಸಮೇತ ಲಾರಿ ಹಾಗೂ 471 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
23 ಟನ್ ಅಕ್ಕಿ ಕಳ್ಳ ಸಾಗಾಣೆ ಪತ್ತೆ: ಶನಿವಾರ ಹಾಸನದ ಎಪಿಎಂಸಿಯಲ್ಲಿ ಅಕ್ರಮವಾಗಿ ಲೋಡ್ ಮಾಡಲಾಗುತ್ತಿದ್ದ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ವಸಂತ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

23 ಟನ್ ಅಕ್ಕಿ ಕಳ್ಳ ಸಾಗಾಣೆ ಪತ್ತೆಯಾಗಿತ್ತು. ಸ್ಥಳದಲ್ಲಿದ್ದ ಲಾರಿ ಚಾಲಕ ನಿಜಾಂ ಪಾಷಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಲಾರಿ ಭದ್ರಾವತಿ ಮೂಲದ ಅಶೋಕ್ ಎಂಬುವವರಿಗೆ ಸೇರಿದ್ದು ಎಂಬುದು ತಿಳಿದುಬಂದಿತ್ತು.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications