ನಾನು ಪೆನ್ಡ್ರೈವ್ ಹಂಚಿ ಎಂಎಲ್ಸಿ ಆಗಿಲ್ಲ: ಸೂರಜ್ ರೇವಣ್ಣ ಹೇಳಿದ್ದು ಯಾರಿಗೆ?
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹಾಸನದಲ್ಲಿ ಅಬ್ಬರಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿರುವ ಸೂರಜ್, ನಾನು ನೆನ್ನೆ ಮೊನ್ನೆ ಪೆನ್ಡ್ರೈವ್ ಹಂಚಿ ಎಂಎಲ್ಸಿ ಆದವನಲ್ಲ ಎಂದು ತೊಡೆತಟ್ಟಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಈ ರೀತಿ ಗುಡುಗಿದ್ದಾರೆ.
ನಾನು ನಿಮ್ಮ ತಾತನಂತೆ ಕುತಂತ್ರ ಮಾಡಿ ಎಂಎಲ್ಸಿ ಆದವನ್ನಲ್ಲ. ಇಂದು ಅಚಾನಕ್ಕಾಗಿ ಎಂಪಿ ಆಗಿರುವರರ ತಾತ 25 ವರ್ಷದ ಹಿಂದೆ ನಮ್ಮಜ್ಜಿ, ತಾಯಿ ಮೇಲೆ ಆಸಿಡ್ ದಾಳಿ ಮಾಡಿದ್ದನ್ನು ಯಾರೂ ಮರೆತಿಲ್ಲ. ಈ ಘಟನೆ ಇಲ್ಲಿರೋ ಹಿರಿಯರಿಗೆ ಚೆನ್ನಾಗಿ ಗೊತ್ತಿರುತ್ತೆ. ಇವರು ದೇವೇಗೌಡರ ಕುಟುಂಬವನ್ನ ಮುಗಿಸ್ತಾರಂತೆ ಎಂದು ತಿರುಗೇಟು ನೀಡಿದ್ದಾರೆ.

ಈ ರೀತಿ ಕುತಂತ್ರ, ಒಳಸಂಚಿನಿಂದ ನಮ್ಮಜ್ಜಿ ಹಾಗೂ ಅಮ್ಮನ ಮೇಲೆ ಶಿವನ ದೇವಾಲಯ ಬಳಿಯೇ ಆಸಿಡ್ ದಾಳಿ ಮಾಡಿಸಿದ್ದರು. ಆಗಲೂ ಕಾಂಗ್ರೆಸ್ ಸರ್ಕಾರವಿತ್ತು. ಈಗಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಇವರಿಗೆಲ್ಲ ದೇವೇಗೌಡರು, ರೇವಣ್ಣನ ಕುಟುಂಬ ಮುಗಿಸೋದೇ ದೊಡ್ಡ ಗುರಿ ಎಂದು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕೆಲ ಅಧಿಕಾರಿಗಳು ಹಾಗೂ ಎದುರಾಳಿ ಪಕ್ಷದವರು ನಮ್ಮ ಜೆಡಿಎಸ್ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಒಂದು ಮಾತನ್ನು ಹೇಳುತ್ತೇನೆ. ಇಲ್ಲಿ ಯಾವುದೂ ಶಾಶ್ವತವಲ್ಲ, ಹಾಗೆಯೇ ಯಾವ ಸರ್ಕಾರವೂ ಶಾಶ್ವತವಲ್ಲ. ಎಲ್ಲರೂ ನಾನು ಮಾಡಿದ್ದು, ನನ್ನಿಂದಲೇ ಆಗಿದ್ದು ಅಂತೀರಲ್ಲ? ಅವರೆಲ್ಲ ಒಮ್ಮೆ ಸ್ಮಶಾನಕ್ಕೆ ಹೋಗಿ ಬನ್ನಿ ಎಂದು ಸಲಹೆ ನೀಡಿದ್ದಾರೆ.

ಸ್ಮಶಾನಕ್ಕೆ ಹೋದರೆ ಹೇಗಿದ್ದವರು ಏನಾದರು ಎಂಬುದು ಚೆನ್ನಾಗಿ ಗೊತ್ತಾಗುತ್ತೆ. ಇಲ್ಲಿ ಏನಿದ್ದರೂ ನಾವು ಮಾಡೋ ಒಳ್ಳೆ ಕೆಲಸ ಮಾತ್ರ ಉಳಿಯುತ್ತದೆಯೇ ಹೊರತು, ದ್ವೇಷ ರಾಜಕಾರಣವಲ್ಲ ಎಂದು ಸೂರಜ್ ಹೇಳಿದ್ದಾರೆ. ರಾಜ್ಯದ ಜನರ ಒಳ್ಳೆಯ ಕೆಲಸ ಮಾಡಲಿ ಎಂದು 135 ಸ್ಥಾನ ಕೊಟ್ಟಿದ್ದಾರೆ. ಆ ಕೆಲಸ ಮಾಡೋದು ಬಿಟ್ಟು, ದಿನಬೆಳಗಾದ್ರೆ ರೇವಣ್ಣ ಅವರ ಕುಟುಂಬ ಹಾಳು ಮಾಡೋದು ಹೇಗೆ? ದೇವೇಗೌಡರನ್ನು ತುಳಿಯೋದು ಹೇಗೆ? ಎಂದು ಯೋಚನೆ ಮಾಡೋದೆ ಆಗಿದೆ ಎಂದು ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಹಲವು ತಿಂಗಳಾಯಿತು. ಯಾವ ರೈತರಿಗೆ ಒಳ್ಳೆಯದಾಗಿದೆ? ಬರೀ ದ್ವೇಷ ರಾಜಕಾರಣವೇ ತುಂಬಿದೆ. ಸೂರ್ಯ ಹುಟ್ಟೋದು ಒಂದು ಬಾರಿಯಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ, ಅದೇ ರೀತಿ ನಿಮ್ಮ ಪ್ರಜ್ವಲ್ ಅಣ್ಣ ಹಾಗೂ ಸೂರಜ್ ಅಣ್ಣ ಪ್ರಜ್ವಲಿಸುತ್ತಾರೆ. ಹಾಸನ ಜಿಲ್ಲೆಯ ಋಣ ತೀರಿಸುವ ಕೆಲಸವನ್ನು ನಾವು ಮಾಡೇ ಮಾಡ್ತೀವಿ ಎಂದು ತೊಡೆತಟ್ಟಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೆ ಅಂತ ಕೆಲವರು ಮೆರೆಯುತ್ತಿದ್ದಾರೆ. ಇದಕ್ಕೆ ಮುಂದೆ ಕಣ್ಣೀರಿಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ಸೂರಜ್ ಎಚ್ಚರಿಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications