'ವಿಕಾಸ ಯಾತ್ರೆ' ಯಶಸ್ಸಿಗಾಗಿ ದೇವೇಗೌಡರಿಂದ ಹೋಮ
Recommended Video

ಹಾಸನ, ನವೆಂಬರ್ 6 : ಜೆ.ಡಿ.ಎಸ್ ಅನ್ನು ಅಧಿಕಾರಕ್ಕೆ ತರಲೇ ಬೇಕೆಂದು ಶತಾಯಗಥಾಯ ಶ್ರಮಿಸುತ್ತಿರುವ ಜೆ.ಡಿ.ಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಪಕ್ಷಕ್ಕೆ ಆಶೀರ್ವಾದ ಬೇಡಿ ಇದೀಗ ದೇವರ ಮೊರೆ ಹೋಗಿದ್ದಾರೆ.
ಜೆ.ಡಿ.ಎಸ್ ನ ವಿಕಾಸ ಯಾತ್ರೆಗೆ ಇನ್ನು ಒಂದು ದಿನ ಇರುವಂತೆ ತಮ್ಮ ಹುಟ್ಟೂರು ಹಾಸನದ ಹರದನಹಳ್ಳಿಯಲ್ಲಿ ಹೋಮ ನಡೆಸುತ್ತಿರುವ ದೇವೇಗೌಡ ಅವರು ಯಾತ್ರೆಗೆ ಯಾವುದೇ ಅಡ್ಡ ಆತಂಕ ಎದುರಾಗದೇ ಯಾತ್ರೆ ಯಶಸ್ವಿ ಆಗಲೆಂದು ಪ್ರಾರ್ಥಿಸುತ್ತಿದ್ದಾರೆ.

ಹೋಮದಲ್ಲಿ ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ, ಮಗ ರೇವಣ್ಣ, ಭವಾನಿ ರೇವಣ್ಣ, ಮೊಮ್ಮಗ ಡಾ.ಸೂರಜ್ ಅವರು ಪಾಲ್ಗೊಂಡಿದ್ದು, ಕುಮಾರಸ್ವಾಮಿ ಅವರ ಕುಟುಂಬವೂ ಹೋಮದಲ್ಲಿ ಪಾಳ್ಗೊಳ್ಳುವ ನಿರೀಕ್ಷೆ ಇದೆ.
ಸ್ವಗೃಹದಲ್ಲಿ ಹೋಮ ಮುಗಿಸಿದ ನಂತರ ಕುಟುಂಬ ಸದಸ್ಯರೆಲ್ಲರೂ ಸಂಜೆ ನಂಜನಗೂಡಿಗೆ ತೆರಳಿ ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಿ ದರ್ಶನ ಮಾಡಲಿದ್ದಾರೆ.
ದೇವರಲ್ಲಿ ಅಪರಿಮಿತ ನಂಬಿಕೆಯುಳ್ಳ ದೇವೇಗೌಡ ಅವರು ಹುಟ್ಟೂರಿನಲ್ಲಿ ನಿಯಮಿತವಾಗಿ ದೇವರ ಕಾರ್ಯಗಳನ್ನು ನಡೆಸುತ್ತಲೇ ಬಂದಿದ್ದಾರೆ. ಚುನಾವಣಾ ಸಂದರ್ಭದಲ್ಲಿಯೂ ದೇವರ ಆಶೀರ್ವಾದ ಪಡೆಯುವುದನ್ನು ದೊಡ್ಡಗೌಡರು ಮರೆಯುವುದಿಲ್ಲ. ಇತ್ತೀಚೆಗೆಗಷ್ಟೆ ಜೆ.ಪಿ ನಗರದ ಪಕ್ಷದ ಕಚೇರಿಯಲ್ಲಿಯೂ ಹೋಮ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ನವೆಂಬರ್ 07ರ ಮಂಗಳವಾರ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮೈಸೂರಿನಿಂದ ಕುಮಾರಸ್ವಾಮಿ ನೇತೃತ್ವದಲ್ಲಿ ಜೆ.ಡಿ.ಎಸ್ ನ ವಿಕಾಸ ಯಾತ್ರೆ ಆರಂಭವಾಗಲಿದ್ದು ಸಕಲ ತಯಾರಿಗಳೂ ಪೂರ್ಣಗೊಂಡಿವೆ. ವಿಕಾಸ ಯಾತ್ರೆ ರಾಜ್ಯ ಪರ್ಯಟನೆ ಮಾಡಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ ಪಕ್ಷದ ಹುಳುಕುಗಳನ್ನು ಬಯಲಿಗೆಳೆದು ಪ್ರಾದೇಶಿಕ ಪಕ್ಷದ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಡಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications