ದೇವೇಗೌಡ ಬಗ್ಗೆ ಆಕ್ಷೇಪಾರ್ಹ ಮಾತು: ಬಿಜೆಪಿ ಶಾಸಕನ ಮನೆ ಮುಂದೆ ಪ್ರತಿಭಟನೆ
Recommended Video
ಹಾಸನ, ಫೆಬ್ರವರಿ 13: ಹಾಸನ ನಗರ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ದೇವೇಗೌಡ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರೀತಂ ಗೌಡ ಮನೆಗೆ ಮುತ್ತಿಗೆ ಹಾಕಿದ್ದಾರೆ.
ಹಾಸನದಲ್ಲಿನ ಪ್ರೀತಂ ಗೌಡ ಅವರ ಮನೆಗೆ ಮುತ್ತಿಗೆ ಹಾಕಿದ ನೂರಾರು ಜೆಡಿಎಸ್ ಶಾಸಕರು ಪ್ರತಿಭಟನೆ ಮಾಡಿದ್ದಾರೆ, ದೇವೇಗೌಡ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವರಾದರೇ ಪ್ರೀತಂಗೌಡ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಶಾಸಕ ಪ್ರೀತಂ ಹಾಗೂ ಟ್ವೀಟ್ ವಿರುದ್ಧ ಪ್ರಜ್ವಲ್ ಫ್ಯಾನ್ಸ್ ಗರಂ
'ದೇವೇಗೌಡನ ವಿಕೆಟ್ ಕೆಲವೇ ದಿನದಲ್ಲಿ ಉರುಳುತ್ತದೆ' ಎಂದು ಪ್ರೀತಂಗೌಡ ಅವರು ಹೇಳಿದ್ದಾರೆ ಎಂದು ಕೆಲವು ವಾಹಿನಿಗಳಲ್ಲಿ ವರದಿ ಆಗಿದೆ. ಇದರಿಂದಾಗಿ ಸಿಟ್ಟಿಗೆದ್ದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.
ಆದರೆ ಪ್ರತಿಭಟನೆ ಮುಗಿದ ಮೇಲೆ ಯಾರೋ ಕೆಲವರು ಕಿಡಿಗೇಡಿಗಳು ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಪ್ರೀತಂ ಗೌಡ ಬೆಂಬಲಿಗ ರಾಹುಲ್ ಅವರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
'ಯಾರದೋ ಟ್ಯಾಕ್ಸ್ ದುಡ್ಡು, ದೇವೇಗೌಡ್ರ ಮೊಮ್ಮಕ್ಕಳ ಮೋಜು': ಬಿಜೆಪಿ
ಸ್ಥಳಕ್ಕೆ ಹಾಸನ ಎಸ್ಪಿ ಬಂದು ಪರಿಶೀಲನೆ ನಡೆಸಿದ್ದಾರೆ. ಪ್ರಸ್ತುತ ಪ್ರತಿಭಟನೆ ಮುಗಿದಿದೆ ಆದರೆ ಶಾಸಕ ಪ್ರೀತಂ ಗೌಡ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.