ಕೆ. ಎನ್.ರಾಜಣ್ಣ ಹೇಳಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಹಾಸನ, ಜು2: ಮಾಜಿ ಪ್ರಧಾನಿ ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲೇ ಇದೆ" ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ ಖಂಡಿಸಿ ನಗರದ ಹೇಮಾವತಿ ಪ್ರತಿಮೆ ಬಳಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಹಿಂದೆಯೂ ಕೆ. ಎನ್.ರಾಜಣ್ಣ ದೇವೇಗೌಡರ ಬಗ್ಗೆ ಹಗರುವಾಗಿ ಮಾತನಾಡಿದ್ದರು. ಇದೇ ಮೊದಲೇನಲ್ಲ. ಈ ಹಿಂದೆ ಸಮ್ಮಿಶ್ರ ಸರಕಾರ ಇದ್ದ ವೇಳೆ, "ದೇವೇಗೌಡ ಮೂಗರ್ಜಿ ಗಿರಾಕಿ. ಅವರು ಸಾಕಷ್ಟು ಜನರ ವಿರುದ್ಧ ಮೂಗರ್ಜಿ ಬರೆದಿದ್ದಾರೆ. ಬೇಕಾದರೆ ಪ್ರಮಾಣ ಮಾಡಲು ಹೇಳಿ" ಎಂದು ಹೇಳಿಕೆ ನೀಡಿ ಜೆಡಿಎಸ್ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದರು.
ಕನ್ಹಯ್ಯ ಹತ್ಯೆ ಬಗ್ಗೆ ಮುಸ್ಲಿಂ ಸಂಘಟನೆಗಳು ತುಟಿ ಬಿಚ್ಚುತ್ತಿಲ್ಲ ಏಕೆ?: ಆರ್. ಅಶೋಕ್ ಪ್ರಶ್ನೆ
ಕೆ.ಎನ್.ರಾಜಣ್ಣ ವಿರುದ್ಧ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಬೃಹತ್ ಪ್ರತಭಟನೆ ಮೂಲಕ ರಾಜಣ್ಣ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬಹಿರಂಗ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೆಡಿಎಸ್ ವರಿಷ್ಠ ದೇವೇಗೌಡರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ಈ ಹೇಳಿಕೆ ವಿಡಿಯೋಗಳು ವೈರಲ್ ಆಗಿವೆ. ದೇಶದ ಮಾಜಿ ಪ್ರಧಾನಿ ಕುರಿತು ಈ ರೀತಿ ಹೇಳಿಕೆ ನೀಡಿರುವುದು ಸರಿಯೇ? ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದು, ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಕೆ.ಎನ್.ರಾಜಣ್ಣ ಕೂಡಲೇ ಬಹಿರಂಗ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ಇಡೀ ಆರೂವರೆ ಕನ್ನಡಿಗರ ತಂದೆ: ಇಬ್ರಾಹಿಂ
ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, "ದೇವೇಗೌಡರು ಕೇವಲ ಕುಮಾರಸ್ವಾಮಿ, ಇಬ್ರಾಹಿಂಗೆ ತಂದೆಯಲ್ಲ, ಇಡೀ ಆರೂವರೆ ಕನ್ನಡಿಗರ ತಂದೆ. ನಿಮ್ಮನ್ನ ಶಾಸಕ, ಮಂತ್ರಿಯನ್ನಾಗಿ ಮಾಡಿದ ದೇವೇಗೌಡರ ಹುಟ್ಟು-ಸಾವಿನ ಬಗ್ಗೆ ಮಾತನಾಡುತ್ತೀರಾ. ನಿಮಗೆ ತಂದೆ ಇಲ್ವಾ, ತಂದೆ ಬಗ್ಗೆ ನಿಮಗೆ ಮಮಕಾರ ಇಲ್ವಾ, ತಿಂದ ಮನೆಗೆ ದ್ರೋಹ ಬಗೆಯುತ್ತೀರಾ?" ಎಂದು ಪ್ರಶ್ನಿಸಿದ್ದಾರೆ. "ಇದಕ್ಕೆ ಇಡೀ ಕರ್ನಾಟಕದ ಜನ ನಿಮಗೆ ಉತ್ತರ ಕೊಡುತ್ತಾರೆ. ದೇವೇಗೌಡರು ನಮಗೆ ಸ್ಪೂರ್ತಿ, ಶಕ್ತಿ. ದೇವೇಗೌಡರು ಅಜರಾಮರು, ಅವರಿಗೆ ಸಾವಿಲ್ಲ. ಸೂರ್ಯ ಚಂದ್ರ ಇರುವವರೆಗೂ ದೇವೇಗೌಡರ ಹೆಸರು ಕರ್ನಾಟಕ, ದೇಶದಲ್ಲಿ ಚಿರವಾಗಿರುತ್ತದೆ. ಕೆಂಪುಕೋಟೆಯಲ್ಲಿ ಬಾವುಟ ಹಾರಿಸಿದ ಕನ್ನಡಿಗರು ಅವರು. ಕೂಡಲೇ ದೇವೇಗೌಡರ ಮನೆಗೆ ಬಂದು ಕ್ಷಮೆ ಕೇಳಬೇಕು" ಎಂದು ಸಿ. ಎಂ. ಇಬ್ರಾಹಿಂ ಆಗ್ರಹಿಸಿದರು.
ದೇವೇಗೌಡರು ಪ್ರಚಾರ ಮಾಡಿದ್ದಕ್ಕೆ ಗೆದ್ದ ರಾಜಣ್ಣ
ರಾಜಣ್ಣ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ರಾಜಣ್ಣ ಹೇಳಿಕೆ ವಿರುದ್ಧ ಕಿಡಿಕಾರಿರುವ ಎಚ್.ಡಿ.ಕುಮಾರಸ್ವಾಮಿ, "ಇದು ಆತನ ಸಂಸ್ಕೃತಿಯನ್ನು ತೋರುತ್ತದೆ. ಅವತ್ತು ವಿಧಾನಸಭೆ ಚುನಾವಣೆಗೆ ನಿಂತಾಗ , ದೇವೇಗೌಡರು ಪ್ರಚಾರಕ್ಕೆ ಬರಲೇಬೇಕು ಎಂದು ಹಠ ಹಿಡಿದಿದ್ದ, ಅವತ್ತು ದೇವೇಗೌಡರು ಪ್ರಚಾರ ಮಾಡಿದ್ದಕ್ಕೆ ರಾಜಣ್ಣ ಗೆದ್ದಿದ್ದು. ಈಗ ಅವರ ಬಗ್ಗೆಯೇ ಮಾತಾಡುತ್ತಾರೆ. ದೇವೇಗೌಡರು ನಿಮ್ಮನ್ನ ಗೆಲ್ಲಿಸಿದರೆ ನೀವು ಲೋಕಸಭೆಯಲ್ಲಿ ಅವರ ಸೋಲಿಗೆ ಕಾರಣರಾದಿರಿ. ಇಂದು ದೇವೇಗೌಡರ ಅನಾರೋಗ್ಯಕ್ಕೆ ನಿಮ್ಮಂತಹವರೇ ಕಾರಣ. ಎರಡು ತಿಂಗಳು ಕಾದುನೋಡು, ಯಾರ ಸಹಾಯವಿಲ್ಲದೆ ನಡೆದಾಡುತ್ತಾರೆ, ನಿನ್ನನ್ನು ಕ್ಷಮೆ ಕೇಳು ಅಂತಾ ಹೇಳಲ್ಲ, ಹುಷಾರ್ ಅಂತಾ ಹೇಳಲು ಬಯಸುತ್ತೇನೆ" ಎಂದರು.
ರಾಜಣ್ಣ ಮಾತು ಮನಸ್ಸಿಗೂ ನೋವಾಗಿದೆ
ದೇವರೇ ಉತ್ತರ ಕೊಡುತ್ತಾನೆ "ದೇವೇಗೌಡರಿಗೆ ಇಬ್ಬರು ಹೆಗಲಿಗೆ ಹೆಗಲು ಕೊಡುತ್ತಾರೆ. ನಾವು ಪ್ರತಿನಿತ್ಯ ದೇವರಿಗೆ ಪೂಜೆ ಸಲ್ಲಿಸಿ, ಉತ್ಸವ ಮೂರ್ತಿಗೆ ಹೆಗಲು ಕೊಡುತ್ತೀವಲ್ಲ ಹಾಗೆ. ರಾಜಣ್ಣ ಮಾತು ಕೇಳಿ ನನ್ನ ಮನಸ್ಸಿಗೂ ನೋವಾಗಿದೆ. ನಾನು ಸಾವಿನ ಮನೆಗೆ ಹೋದಾಗಲೂ ಕಣ್ಣೀರು ಹಾಕಿದ್ದೇನೆ. ಆದರೆ ಇಂತಹ ದುರಹಂಕಾರದ ಮಾತಿಗೆ ಮೇಲಿರುವ ಒಬ್ಬ ದೇವರು ನೋಡಿಕೊಳ್ಳುತ್ತಾನೆ. ದೇವೇಗೌಡರ ಬದುಕು ಆಯಸ್ಸು, ಭಗವಂತ ನಿರ್ಧಾರ ಮಾಡಿದ್ದಾನೆ, ನನಗೆ ವಿಶ್ವಾಸ ಇದೆ, ದೇವೇಗೌಡರು ನೂರು ವರ್ಷ ಪೂರೈಸುತ್ತಾರೆ" ಎಂದು ಕುಮಾರಸ್ವಾಮಿ ಹೇಳಿದರು.
Recommended Video