Belur Constituency: ಶಿಲ್ಪಕಲೆಯ ತವರೂರಿನಲ್ಲಿ ಜೆಡಿಎಸ್ನದ್ದೇ ಪ್ರಾಬಲ್ಯ! ದಳ ಕೋಟೆ ಭೇದಿಸ್ತಾವಾ ಕಾಂಗ್ರೆಸ್, ಬಿಜೆಪಿ!
ಜೆಡಿಎಸ್ ಭದ್ರಕೋಟೆಯಾಗಿದ್ದ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಈ ಬಾರೀ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಗಳು ಹೆಚ್ಚಿವೆ. ವರದಿ, ವಿಶ್ಲೇಷಣೆ ಓದಿ
ಹಾಸನ ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಬೇಲೂರು. ಕನ್ನಡ ಪ್ರಥಮ ಶಿಲಾ ಶಾಸನ ದೊರೆತ ಕ್ಷೇತ್ರ ಎಂಬ ಹೆಗ್ಗಳಿಕೆ ಬೇಲೂರಿನದ್ದು. ಚೆನ್ನಕೇಶವ ದೇಗುಲ, ಹಳೆಬೀಡಿನ ಶಿಲ್ಪಕಲೆಯಿಂದ ಪ್ರಸಿದ್ಧಿ ಪಡೆದಿವೆ. ಹೀಗಾಗೇ ಇದು ಪ್ರವಾಸಿಗರು, ಇತಿಹಾಸ ತಜ್ಞರು, ಇಷ್ಟಪಟ್ಟು ಕಾಲಿಡುವ ತಾಣಗಳಾಗಿ ಇದೀಗ ದಿನಗಳಲ್ಲಿ ಮಾರ್ಪಟ್ಟಿವೆ. ಮಲೆನಾಡು-ಬಯಲು ಸೀಮೆ ಎರಡನ್ನೂ ಹೊಂದಿರುವುದು ವಿಶೇಷ.
ಯಗಚಿ ನದಿ ತೀರದಲ್ಲಿದ್ದರೂ ಬೇಲೂರಿನ ರೈತರಿಗೆ ನೀರಾವರಿ ಸಮಸ್ಯೆ ಮಾತ್ರ ತಪ್ಪಿಲ್ಲ. ಪ್ರಮುಖ ಕೈಗಾರಿಕೆಗಳ ಕೊರತೆ, ಶಾಲಾ, ಕಾಲೇಜುಗಳಿಗೆ ಹಾಸನ ಅಥವಾ ಚಿಕ್ಕಮಗಳೂರಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಪರಿಶಿಷ್ಟರೇ ಅಧಿಕವಿರುವ ಇಲ್ಲಿ 1952ರಲ್ಲಿ ಒಮ್ಮೆ ಸಾಮಾನ್ಯ ಕ್ಷೇತ್ರದಡಿ ಬೋರಣ್ಣಗೌಡರು ಶಾಸಕರಾಗಿದ್ದರು. ನಂತರ ಈ ಕ್ಷೇತ್ರ ಮೀಸಲು ಕ್ಷೇತ್ರವಾಗಿ ಬದಲಾಯಿತು. ಆದರೆ 2008ರಲ್ಲಿ ಸಾಮಾನ್ಯ ಕ್ಷೇತ್ರವಾಗಿ ಪರಿವರ್ತನೆಗೊಂಡಿತು.

ಇಲ್ಲಿಯವರೆಗೆ ಬೇಲೂರಿನಲ್ಲಿ 15 ವಿಧಾನಸಭಾ ಚುನಾವಣೆಗಳಾಗಿವೆ. 8 ಶಾಸಕರನ್ನು ಕಂಡಿರುವ ಬೇಲೂರು ವಿಧಾನಸಭಾ ಕ್ಷೇತ್ರ ವಿಧಾನಸಭೆ ಅಸ್ತಿತ್ವಕ್ಕೆ ಬಂದ 1952ರ ಆರಂಭದಲ್ಲಿ ಬೇಲೂರು-ಸಕಲೇಶಪುರ ತಾಲೂಕು ಹಾಗೂ ಹಾಸನ ತಾಲೂಕು ಸಾಲಗಾಮೆ ಹೋಬಳಿ ಸೇರಿಕೊಂಡಂತೆ ಮೀಸಲು ಮತ್ತು ಸಾಮಾನ್ಯ ಮೀಸಲಿನಡಿ ದ್ವಿಸದಸ್ಯ ಕ್ಷೇತ್ರವಾಗಿ ಮಾರ್ಪಟ್ಟು ಸಾಮಾನ್ಯ ವಿಧಾನಸಭಾ ಕ್ಷೇತ್ರದ ಪ್ರಥಮ ಶಾಸಕರಾಗಿ ಕಾಂಗ್ರೆಸ್ಸಿನ ಬೋರಣ್ಣಗೌಡರು, ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ಸಿನ ಸಿದ್ದಯ್ಯ ಶಾಸಕರಾಗಿದ್ದರು.
1957ರಲ್ಲಿ ಶಾಸಕ ಅವಧಿ ಇರುವಾಗಲೇ ಶಾಸಕ ಸಿದ್ದಯ್ಯ ಅವರು ಮೃತಪಟ್ಟರು. ಈ ಸ್ಥಾನಕ್ಕೆ ನಡೆದ ಮರು ಚುನಾವಣೆಯಲ್ಲಿ ಸಿದ್ದಯ್ಯ ಅವರ ಸಂಬಂಧಿ ಬಿ. ಎಚ್. ಲಕ್ಷ್ಮಣಯ್ಯ ಅವಿರೋಧ ಆಯ್ಕೆಯಾದರು. ನಂತರ 1962ರಲ್ಲಿ ಕ್ಷೇತ್ರ ವಿಭಜನೆಗೊಂಡು ಸಕಲೇಶಪುರ ಸಾಮಾನ್ಯ ಕ್ಷೇತ್ರವಾಗಿ ಬೇಲೂರು ಮೀಸಲು ಕ್ಷೇತ್ರವಾಗಿ ಪ್ರತ್ಯೇಕವಾಯಿತು. ಇಲ್ಲಿ ಮತ್ತೊಮ್ಮೆ ಮೀಸಲು ಕ್ಷೇತ್ರದಿಂದ ಬಿ.ಎಚ್.ಲಕ್ಷಮಣಯ್ಯ ಕಾಂಗ್ರೆಸ್ ಪಕ್ಷದಿಂದ ಪುನರಾಯ್ಕೆಗೊಂಡಿದ್ದರು.

1968ರಲ್ಲಿ ಸ್ವತಂತ್ರ ಪಕ್ಷದಿಂದ ಸ್ಪರ್ಧಿಸಿದ್ದ ಎಸ್. ಎಚ್. ಪುಟ್ಟರಂಗನಾಥ್ ಜಯ ಗಳಿಸಿದ್ದರು. ಮುಂದೆ 1972ರಲ್ಲೂ ಆಡಳಿತ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ ಪುಟ್ಟರಂಗನಾಥ್ ಮತ್ತೆ ಜಯ ಗಳಿಸಿದರು. ಇದಾದ ನಂತರ 1978ರಲ್ಲಿ ಬಿ.ಎಚ್.ಲಕ್ಷ್ಮಣಯ್ಯ ಜನತಾ ಪಕ್ಷದಿಂದ ಮತ್ತೆ ಶಾಸಕರಾದರು. 1983ರಲ್ಲಿ ಜನತಾ ಪಕ್ಷ ದಿಂದ ಡಿ.ಮಲ್ಲೇಶ್ ಹಾಗೂ 1985ರಲ್ಲಿ ಜೆಡಿಎಸ್ ನಿಂದ ಎಚ್.ಕೆ.ಕುಮಾರಸ್ವಾಮಿ ಜಯ ಗಳಿಸಿದರು. 1989ರಲ್ಲಿ ಜನತಾದಳ ಇಬ್ಬಾಗವಾದಾಗ ಬಿ.ಎಚ್.ಲಕ್ಷ್ಮಣಯ್ಯ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಮತ್ತೆ ಜಯಶಾಲಿಯಾದರು.
ಜನತಾದಳ ಒಗ್ಗೂಡಿದ ನಂತರ 1994ರಲ್ಲಿ ನಡೆದ ಚುನಾವಣೆಯಲ್ಲಿ ಎಚ್. ಕೆ. ಕುಮಾರಸ್ವಾಮಿ ಶಾಸಕರಾದರೆ, 1999ರಲ್ಲಿ ಬಿಜೆಪಿಯಿಂದ ಎಸ್.ಎಚ್.ಪುಟ್ಟರಂಗನಾಥ್ ಶಾಸಕರಾದರು. 2004ರಲ್ಲಿ ಮತ್ತೆ ಎಚ್.ಕೆ.ಕುಮಾರಸ್ವಾಮಿ ಮೀಸಲು ಕ್ಷೇತ್ರದಡಿ ಜನತಾದಳದಿಂದ ಶಾಸಕರಾದರು. ಇನ್ನು 2008ರಲ್ಲಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿ ಪರಿವರ್ತನೆಗೊಂಡಿತು. ವೈ.ಎನ್.ರುದ್ರೇಶಗೌಡರು ಬದಲಾದ ಸಾಮಾನ್ಯ ಕ್ಷೇತ್ರದಡಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಶಾಸಕರಾದರು. 2013ರಲ್ಲೂ ಕಾಂಗ್ರೆಸ್ ಪಕ್ಷದಿಂದಲೇ ಮತ್ತೆ ಸ್ಪರ್ಧಿಸಿದ ರುದ್ರೇಶಗೌಡರು ಮತ್ತೆ ಜಯಗಳಿಸಿದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ಕೆ.ಎಸ್. ಲಿಂಗೇಶ್, ಬಿಜೆಪಿಯ ಎಚ್ ಕೆ ಸುರೇಶ್ರನ್ನು 19,690 ಮತಗಳ ಅಂತರದಿಂದ ಸೋಲಿಸಿದ್ದರು. ಕಳೆದ ಚುನಾವಣೆಯಲ್ಲಿ ಕೆ.ಎಸ್. ಲಿಂಗೇಶ್ 64,268 ಮತಗಳನ್ನ ಪಡೆದಿದ್ದರೇ, ಕಾಂಗ್ರೆಸ್ ನಿಂದ ಕೀರ್ತನಾ ರುದ್ರ ಗೌಡ 39,519 ಮತಗಳನ್ನ್ ಪಡೆದಿದ್ದರು. ಇನ್ನೂ ಬಿಜೆಪಿಯಿಂದ ಎಚ್.ಕೆ ಸುರೇಶ್ ಸ್ಪರ್ಧೆ ಮಾಡಿ 44,578ಗಳನ್ನ ಪಡೆದಿದ್ದರು
ಇನ್ನೂ ಈ ಬಾರಿ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಹಿಡಿತವನ್ನ ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ತಯಾರಿ ನಡೆಸಿದ್ದು, ಜೆಡಿಎಸ್ ಭದ್ರಕೋಟೆಯನ್ನ ಛಿದ್ರಗೊಳಿಸಲು ಭರ್ಜರಿ ತಯಾರಿ ನಡೆಸಿವೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಯನ್ನ ಘೋಷಣೆ ಮಾಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಹಲವು ನಾಯಕರು ಲಾಭಿ ನಡೆಸಿದ್ದಾರೆ.
ಇನ್ನೂ ಜೆಡಿಎಸ್ ಪಕ್ಷದಿಂದ ಕೆ.ಎಸ್.ಲಿಂಗೇಶ್ ಅಭ್ಯರ್ಥಿಯಾದರೇ, ಕಾಂಗ್ರೆಸ್ ನಿಂದ ಟಿಕೆಟ್ ಗಾಗಿ ಬಿ.ಶಿವರಾಮು, ರಾಜಶೇಖರ್, ಕೃಷ್ಣೇಗೌಡ ಅವರು ಅರ್ಜಿ ಸಲ್ಲಿಸಿ ಲಾಭಿ ನಡೆಸಿದ್ದಾ೦ರೆ. ಇನ್ನು ಬಿಜೆಪಿ ಪಕ್ಷದಿಂದ ಹುಲ್ಲಹಳ್ಳಿ ಸುರೇಶ್, ಕೊರಟಗೆರೆ ಪ್ರಕಾಶ್, ಸಿದ್ದೇಶ್ ನಾಗೇಂದ್ರ, ಸಂತೋಷ್ ಕೆಂಚಾಂಬ, ಸುರಭಿ ರಘು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಒಟ್ಟು 1,79,330 ಮತದಾರರಿರುವ ಬೇಲೂರು ಕ್ಷೇತ್ರದಲ್ಲಿ 91,236 ಪುರುಷ ಮತದಾರರಿದ್ದು, 88,094 ಮಹಿಳಾ ಮತದಾರರಿದ್ದಾರೆ. ಅಲ್ಲದೇ 4 ಇತರೆ ಮತದಾರರಿದ್ದಾರೆ.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications