ಎಚ್ ಕೆ ಕುಮಾರಸ್ವಾಮಿ, ಎಟಿ ರಾಮಸ್ವಾಮಿಗೆ ಸಚಿವ ಸ್ಥಾನ ಕೊಡಿ!
ಹಾಸನ, ಮೇ 29: ಜೆಡಿಎಸ್ ತನ್ನ ಭದ್ರಕೋಟೆಯಾದ ಹಾಸನದಲ್ಲಿ ಏಳು ಕ್ಷೇತ್ರಗಳ ಪೈಕಿ ಆರರಲ್ಲಿ ಭರ್ಜರಿ ಜಯ ದಾಖಲಿಸಿದೆ. ಜಿಲ್ಲಾವಾರು, ಪ್ರಾಂತ್ಯವಾರು, ಜಾತಿವಾರು ಲೆಕ್ಕಾಚಾರದಂತೆ ಸಚಿವ ಸ್ಥಾನ ಅಕಾಂಕ್ಷಿಗಳು ಹುಟ್ಟಿಕೊಂಡಿದ್ದು, ಹಾಸನ ಜಿಲ್ಲೆಯಿಂದಲೂ ಮೂವರಿಗೆ ಅದೃಷ್ಟ ಒಲಿಯುವ ನಿರೀಕ್ಷೆಯಿದೆ.
ಜಾತಿವಾರು ಲೆಕ್ಕಾಚಾರದಲ್ಲಿ ಒಕ್ಕಲಿಗರೇ ಪ್ರಾಧಾನ್ಯವಾಗಿರುವ ಜಿಲ್ಲೆಯಲ್ಲಿ ಆಲೂರು-ಸಕಲೇಶಪುರ ಮಾತ್ರ ಮೀಸಲು(ಎಸ್ ಸಿ) ಕ್ಷೇತ್ರವಾಗಿದೆ.
2013ರ ಫಲಿತಾಂಶದಂತೆ ಹಾಸನ ಜಿಲ್ಲೆಯ 7 ಕ್ಷೇತ್ರಗಳ ಕಾಂಗ್ರೆಸ್ 2 ಹಾಗೂ ಬಿಜೆಪಿ 0, ಜೆಡಿಎಸ್ 5 ಗಳಿಸಿತ್ತು. 2018ರಲ್ಲಿ ಹಾಸನದಲ್ಲಿ ಬಿಜೆಪಿ 1989ರ ನಂತರ ಮತ್ತೆ ಖಾತೆ ತೆರೆದಿದೆ. ಮಿಕ್ಕಂತೆ ಕಾಂಗ್ರೆಸ್ 2 ಸ್ಥಾನ ಕಳೆದುಕೊಂಡಿದ್ದಲ್ಲದೆ, ಈ ಬಾರಿ ಒಂದು ಸೀಟು ಕೂಡಾ ಗೆದ್ದಿಲ್ಲ.

ಬೇಲೂರಿನಲ್ಲಿ ಹಾಲಿ ಶಾಸಕ ಕಾಂಗ್ರೆಸ್ಸಿನ ವೈ.ಎನ್ ರುದ್ರೇಶ್ ಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಅಭ್ಯರ್ಥಿ ಸ್ಥಾನಕ್ಕೆ ಅವರ ಪತ್ನಿ ಕೀರ್ತನಾ ಅವರನ್ನು ಕರೆ ತರಲಾಯಿತು. ಆದರೆ, ಅನುಕಂಪದ ಅಲೆ ವರ್ಕ್ ಔಟ್ ಆಗಲಿಲ್ಲ. ಕಳೆದ ಬಾರಿ 6 ಸಾವಿರ ಅಂತರದ ಮತಗಳಿಂದ ಸೋಲು ಕಂಡಿದ್ದ ಜೆಡಿಎಸ್ ನ ಕೆ.ಎಸ್ ಲಿಂಗೇಶ್ ಈ ಬಾರಿ ಭರ್ಜರಿ ಗೆಲುವು ದಾಖಲಿಸಿದರು.
ಸಕಲೇಶಪುರದಲ್ಲಿ ಅಧಿಕಾರಿ ಸಿದ್ದಯ್ಯ ಮೂರನೇ ಸ್ಥಾನಕ್ಕೆ ಕುಸಿದರೆ, ಹಾಸನ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಎಸ್ ಪ್ರಕಾಶ್ ಗೆ ಅಚ್ಚರಿಯ ಸೋಲು, ಅರಕಲಗೂಡು ಮಂಜುಗೆ ಸೋಲು ಅನಿರೀಕ್ಷಿತವಾಗಿತ್ತು.
ಈಗ ಹೊಳೆನರಸೀಪುರದ ಅರಸ ಎಚ್ ಡಿ ರೇವಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ. ಮಿಕ್ಕಂತೆ, ಸಕಲೇಶಪುರದ ಶಾಸಕ ಎಚ್ ಕೆ ಕುಮಾರಸ್ವಾಮಿ ಹಾಗೂ ಅರಕಲಗೂಡು ಶಾಸಕ ಎ. ಟಿ ರಾಮಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೋರಲಾಗಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications