ಹಾಸನದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದು ನಾನು, ಜೆಡಿಎಸ್ ನಾಯಕರಲ್ಲ: ಪ್ರೀತಂ ಗೌಡ
ಹಾಸನ, ಏಪ್ರಿಲ್, 27: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ರಾಜಕೀಯ ನಾಯಕರ ನಡುವಿನ ಕಚ್ಚಾಟಗಳು ಜಾಸ್ತಿಯಾಗಿಬಿಟ್ಟಿವೆ. ಅದೇ ರೀತಿ ಹಾಸನದಲ್ಲಿ ಶಾಸಕ ಪ್ರೀತಂಗೌಡ ಮತ್ತು ರೇವಣ್ಣ ಕುಟುಂಬದ ನಡುವೆ ವಾಕ್ಸಮರಗಳು ಸಂಭವಿಸದ ದಿನವೇ ಇಲ್ಲದಂತಾಗಿದೆ. ಇಂದು ಮತ್ತೆ ಮಳೆ ಬಂದಾಗ ಜನರು ನೆಮ್ಮದಿಯಿಂದ ಜೀವನ ಮಾಡಬೇಕು. ಇಲ್ಲಿ ರಾಜಕಾಲುವೆ ಮಾಡಬೇಕು ಎನ್ನುವ ಕಲ್ಪನೆ ಕೂಡ ಅವರಿಗೆ ಇರಲಿಲ್ಲ ಎಂದು ಜೆಡಿಎಸ್ ವಿರುದ್ಧ ಪ್ರೀತಂ ಗೌಡ ಹರಿಹಾಯ್ದಿದ್ದಾರೆ.
ರಾಜಕಾಲುವೆ ಮಾಡಬೇಕು ಅನ್ನುವ ಕಲ್ಪನೆ ನಮಗೆ ಬಂದ ಕಾರಣಕ್ಕೆ ಜನರು ನನ್ನ ಜೊತೆ ಇದ್ದಾರೆ. ವಸತಿ ರಹಿತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಜೆಡಿಎಸ್ನವರು ಮಾಡಿದ್ದರು. ಆದರೆ ಅವರಿಗೆ ಹಕ್ಕು ಪತ್ರ ಕೊಟ್ಟು ಭದ್ರತೆ ಕೊಡುವ ಕೆಲಸವನ್ನು ನಾವು ಮಾಡಿದ್ದೇವೆ. ಇಲ್ಲಿನ ಚರಂಡಿ ಪಾರ್ಕ್, ಮುಖ್ಯ ರಸ್ತೆ ಎಲ್ಲವನ್ನೂ ಮಾಡಿಸಿದ್ದು ನಾನು. ಅಭಿವೃದ್ಧಿ ಅಂದರೆ ಇದು ಎಂದು ಹೇಳುವ ಮೂಲಕ ತಮ್ಮನ್ನು ತಾವೇ ಹೊಗಳಿಕೊಂಡರು.

ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿ ಬಂದಾಗ ಎಷ್ಟು ಜನ ಬರುತ್ತಾರೆ ನೋಡಿ ಇದರ ಮೇಲೆ ಜನರ ಬೆಂಬಲ ಯಾರಿಗೆ ಇದೆ ಎನ್ನುವುದು ನಿರ್ಧಾರ ಆಗಲಿದೆ. ದೇವೇಗೌಡರ ಬಗ್ಗೆ ಕನಿಷ್ಠ ಪ್ರೀತಂಗೌಡಗೆ ಇರುವ ಗೌರವ ಅವರ ಮನೆಯವರಿಗಿಲ್ಲ. ದೇವೇಗೌಡರು ಇಡಿ ದೇಶಕ್ಕೆ ಆಸ್ತಿ.
ಅವರನ್ನು ಹಾಸನದಲ್ಲಿ ನಿಲ್ಲಿಸಿ ಗೆಲ್ಲಿಸಬೇಕೆನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರೆ ಅವರ ಸ್ವಾರ್ಥಕ್ಕಾಗಿ ಮಗನನ್ನ ಅಭ್ಯರ್ಥಿ ಮಾಡಲು ತುಮಕೂರಿಗೆ ಕಳುಹಿಸಿದ್ದರು. ಇದು ಅವರ ಕುಟುಂಬದಲೇ ಬಂದಿರುವ ಮಾತು ಎಂದರು.
ದೇವೇಗೌಡರ ಬಗ್ಗೆ ಹಾಸನದ ಜನ ಏನು ಗೌರವ ಇಟ್ಟಿದಾರೆ ಅದರ ಅರ್ಧಬಾಗ ಅವರ ಕುಟುಂಬ ಇಟ್ಟುಕೊಂಡರೆ ಸಾಕು. ಅವರು ರಾಜಕಾರಣ ಲಾಭ ಬಿಟ್ಟು ಮೊದಲು ಗೌರವ ಇಟ್ಟುಕೊಳ್ಳಲಿ. ಆಗ ದೇವೇಗೌಡರಿಗೆ ನೆಮ್ಮದಿ ಸಿಕ್ಕಂತಾಗುತ್ತದೆ. ಹಾಗೆಯೆ ಇಷ್ಟು ಸುದೀರ್ಘ ರಾಜಕಾರಣ ಮಾಡಿದ ಗೌಡರನ್ನು ತುಮಕೂರಿಗೆ ಕಳುಹಿಸಿ ಸೋಲಿಸಿದ್ದನ್ನು ಯಾರೂ ಮರೆತಿಲ್ಲ ಎಂದು ಗುಡುಗಿದರು.
ನಾನು ವಿರೋಧ ಪಕ್ಷದಲ್ಲಿದ್ದರೂ ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದೇನೆ. ಇನ್ನು ಮಹಿಳೆಯರಿಗೆ ಪ್ರೀತಂಗೌಡ ಅಗೌರವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ನಾನು ಮಹಿಳೆಯರ ಬಗ್ಗೆ ಎಷ್ಟು ಗೌರವ ಹೊಂದಿದ್ದೇನೆ ಅನ್ನುವುದಕ್ಕೆ ಇಲ್ಲಿ ಬಂದಿರುವ ಜನರೇ ಸಾಕ್ಷಿ. ಸಮಸ್ತವಾಗಿ ನಾನು ಯಾರ ಬಗ್ಗೆಯೂ ಮಾತಾಡಿಲ್ಲ. ಈಗ ಚುನಾವಣೆ ಅಭಿವೃದ್ಧಿ ವಿಚಾರ ಮುಖ್ಯವಾಗಿದೆ ಎಂದು ಹೇಳುವ ಮೂಲಕ ಜಾರಿಕೊಂಡರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications