Get Updates
Get notified of breaking news, exclusive insights, and must-see stories!

ಬೇಲೂರು: ಮತದಾನ ಮಾಡಿ ಹೊರ ಬಂದ‌ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಸಾವು

ಹಾಸನ, ಮೇ 10: ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ. ಜಯಣ್ಣ (49) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಯಣ್ಣ ಮತದಾನ ಮಾಡಲು ಚಿಕ್ಕೋಲೆ ಗ್ರಾಮದ ಮತ ಕೇಂದ್ರಕ್ಕೆ ಆಗಮಿಸಿದ್ದರು. ಮತದಾನ ಮಾಡಿದ ಬಳಿಕ ಹೊರಬರುತ್ತಿದ್ದಂತೆ ಕುಸಿದು ಬಿದ್ದ ಜಯಣ್ಣ ಹೃದಯಾಘಾತದಿಂದ ಮತಗಟ್ಟೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

Karnataka Election 2023: Man Dies After Voting At Belur

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಈಗಾಗಲೇ ಮತದಾನ ನಡೆಯುತ್ತಿದ್ದು. ಮೇ 10 ಬುಧವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಜನ ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, ಕ್ಷೇತ್ರದ ಶಾಸಕರನ್ನು ಆಯ್ಕೆ ಮಾಡಲು ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರ ವರೆಗೂ ಮತದಾನ ನಡೆಯಲಿದೆ. ಏಳು ವಿಧಾನಸಭಾ ಕ್ಷೇತ್ರಗಳ 73 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 14,99,917 ಮತದಾರರಿದ್ದು, 7,49,720 ಪುರುಷ ಹಾಗೂ 7,50,153 ಮಹಿಳಾ ಮತದಾರರಿದ್ದಾರೆ. ಹಾಗೂ ಈ ಬಾರಿ 27,135 ಯುವ ಮತದಾರರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+