Daali Dhananjay: ಮದುಮಗನಂತೆ ಕುಟುಂಬದ ಜೊತೆ ಬಂದು ಮತದಾನ ಮಾಡಿದ ಡಾಲಿ ಧನಂಜಯ್
ಕರ್ನಾಟಕದ ಎಲ್ಲ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಇಂದು (ಬುಧವಾರ, ಮೇ 10) ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಳಗ್ಗೆ 11 ಗಂಟೆಯ ವೇಳೆಗೆ ಶೇ.20.99ರಷ್ಟು ಮತದಾನವಾಗಿದೆ.
ರಾಜ್ಯದ ಜನರು ಸರತಿ ಸಾಲಿನಲ್ಲಿ ನಿಂತು ತಮ್ಮ ಅಮೂಲ್ಯ ಮತವನ್ನು ಚಲಾಯಿಸುತ್ತಿದ್ದು, ಇದೇ ವೇಳೆ ಸ್ಯಾಂಡಲ್ವುಡ್ ಡಾಲಿ ಧನಂಜಯ್ ಕೂಡ ತವರೂರಿನಲ್ಲಿ ಮತದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆಯೇ ಮತಗಟ್ಟೆಗೆ ಬಂದ ಧನಂಜಯ್ ತಮ್ಮ ಮತದಾನ ಹಕ್ಕು ಚಲಾಯಿಸಿದ್ದಾರೆ.

ಡಾಲಿ ಧನಂಜಯ್ ಅವರು ತಮ್ಮ ಹುಟ್ಟೂರಾದ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಕುಟುಂಬದೊಂದಿಗೆ ಮತದಾನ ಮಾಡಿದರು. ಬಿಳಿ ಪಂಚೆ ಮತ್ತು ಬಿಳಿ ಶರ್ಟ್ನಲ್ಲಿ ಮಿಂಚಿದ ಡಾಲಿ ಧನಂಜಯ್ ಪಕ್ಕಾ ಮದುಮಗನಂತೆ ಕಂಗೊಳಿಸುತ್ತಿದ್ದರು.
ಡಾಲಿ ಧನಂಜಯ್ ಅವರು ತಮ್ಮ ಇಡೀ ಕುಟುಂಬದ ಜೊತೆ ಬಂದು ಮತದಾನ ಮಾಡಿದ್ದಾರೆ. ತಂದೆ, ತಾಯಿ ಅಜ್ಜಿ, ಸಹೋದರಿ, ಸಹೋದರ ಸೇರಿದಂತೆ ಇಡೀ ಕುಟುಂಬದ ಜೊತೆ ಬಂದು ತಮ್ಮ ಹಕ್ಕು ಚಲಾಯಿಸಿದರು.
ಇದೇ ವೇಳೆ ಧನಂಜಯ್ ಅವರು ತಮ್ಮ ಸಹೋದರಿ ರಾಣಿ ಜೊತೆ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಬಳಿಕ ಧನಂಜಯ್ ಅವರು ಸಹೋದರಿ ಜೊತೆ ಫೋಟೋಗೆ ಪೋಸ್ ನೀಡಿದ್ದಾರೆ. ನಂತರ ತಮ್ಮ ಊರು ಕಾಳೇನಹಳ್ಳಿಯ ಬೋರ್ಡ್ ಜೊತೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾರೆ.

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನಿಂದ ನಡೆಯುತ್ತಿದೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 224 ಕ್ಷೇತ್ರ, 2,615 ಅಭ್ಯರ್ಥಿಗಳ ಹಣೆಬರಹವನ್ನು ರಾಜ್ಯದ 5,31,33,054 ಮತದಾರರು ನಿರ್ಧರಿಸಲಿದ್ದಾರೆ. ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಗೊಳ್ಳಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications