ಬೇಲೂರು, ಹಳೆಬೀಡಿನ ದೇಗುಲಗಳ ಸೌಂದರ್ಯ ಕಣ್ತುಂಬಿಗೊಂಡ ಗೆಹ್ಲೋಟ್
ಹಾಸನ, ಜೂನ್ 17: ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವಸ್ವಾಮಿ ದೇಗುಲ ಹಾಗೂ ಹಳೇಬೀಡು ಹೊಯ್ಸಳೇಶ್ವರ ದೇವಾಲಯಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಭೇಟಿ ನೀಡಿದರು. ಹೊಯ್ಸಳರ ಕಾಲದ ಶಿಲ್ಪಕಲಾ ಸೌಂದರ್ಯವನ್ನು ವೀಕ್ಷಿಸಿ ಕಣ್ತುಂಬಿಕೊಂಡದರು.
ರಾಜ್ಯಪಾಲರ ಆಗಮನದ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ದೇವಾಲಯದ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ದೇಗುಲದ ಪ್ರಧಾನ ಅರ್ಚಕರಾದ ಶ್ರೀನಿವಾಸಸ್ವಾಮಿ ಭಟ್ಟರ್ ಮತ್ತು ಅರ್ಚಕರು ರಾಜಗೋಪುರದಿಂದ ರಾಜ್ಯಪಾಲರಿಗೆ ಸಂಪ್ರದಾಯದಂತೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು.
ನಂತರ ಚನ್ನಕೇಶವಸ್ವಾಮಿ ದೇಗುಲದ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಮತ್ತು ಮಂಗಳಾರತಿ ನೆರವೇರಿಸಿ ದೇಗುಲದ ಶಲ್ಯ ಮತ್ತು ಪ್ರಸಾದ ನೀಡಿ ಗೌರವಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಗಿರೀಶ್ ಮತ್ತು ತಹಸೀಲ್ದಾರ್ ಮೋಹನಕುಮಾರ್ ರಾಜ್ಯಪಾಲರಿಗೆ ಕಂಚಿನ ಪ್ರತಿಮೆ ನೀಡಿದರು. ಪುರಸಭೆ ಅಧ್ಯಕ್ಷ ಸಿ.ಎನ್.ದಾನಿ ಹಾಗೂ ಸದಸ್ಯರು ಪುರಸಭೆ ವತಿಯಿಂದ ರಾಜ್ಯಪಾಲರನ್ನು ಸನ್ಮಾನಿಸಿದರು.

ದೇಗುಲ ವೀಕ್ಷಿಸಿ ಹೊರಡುವ ಸಂದರ್ಭದಲ್ಲಿ ಮಾರ್ಗದರ್ಶಿಗಳು ದೇಗುಲದ ಮುಂಭಾಗದ ವಿಜಯ ದೀಪ ಸ್ತಂಭದ ಬಗ್ಗೆ ಮಾಹಿತಿ ನೀಡಿದರು. ರಾಜ್ಯಪಾಲರು ಕುತೂಹಲದಿಂದ ಆಲಿಸಿದರು. ದೀಪ ಸ್ತಂಭದ ಬಳಿ ಮಾರ್ಗದರ್ಶಿ ತಮ್ಮ ಕರ ವಸ್ತ್ರವನ್ನು ದೀಪ ಸ್ತಂಭದ ಕೆಳ ಭಾಗಕ್ಕೆ ಹಾಸಿ ಗುರುತ್ವಾಕರ್ಷಣೆ ಮೇಲೆ ನಿಂತಿರುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿದಾಗ ಅಚ್ಚರಿಗೊಳಗಾದ ರಾಜ್ಯಪಾಲರು, ಎಲ್ಲಾ ದೇವರ ಲೀಲೆ ಎಂದು ಕೈಮುಗಿದು ತೆರಳಿದರು.
ಹೊಯ್ಸಳ ಕಾಲದ ವಾಸ್ತು ಶಿಲ್ಪ ಶೈಲಿ ಕಂಡು ರಾಜ್ಯಪಾಲರು ವಿಸ್ಮಿತರಾದರು. ಗೈಡ್ ಅಸ್ಲಾಮ್ ಷರೀಫ್ ಅವರು ಬೇಲೂರು-ಹಳೇಬೀಡು ಶಿಲ್ಪ ಶೈಲಿ ಕುರಿತು ರಾಜ್ಯಪಾಲರಿಗೆ ವಿವರಿಸಿದರು. ನಂತರ ಚೆನ್ನಕೇಶವ ಹಾಗೂ ಹೊಯ್ಸಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ ತೆರಳಿದರು.
ವಿದ್ಯಾರ್ಥಿಗಳ ಪರದಾಟ
ರಾಜ್ಯಪಾಲರು ಬೇಲೂರು ದೇಗುಲಕ್ಕೆ ಅಧಿಕೃತ ಭೇಟಿ ಹಿನ್ನೆಲೆ ಪೊಲೀಸರು ರಸ್ತೆಗಳಲ್ಲಿ ಜೀರೋ ಟ್ರಾಫಿಕ್ ಮಾಡಿದ್ದರು. ಇದರಿಂದ ಶಾಲಾ ವಿದ್ಯಾರ್ಥಿಗಳು ಪರದಾಡಿದರು. ನೆಹರು ನಗರದಿಂದ ಪಟ್ಟಣಕ್ಕೆ, ಮೂಡಿಗೆರೆ ರಸ್ತೆಯಲ್ಲಿರುವ ಪೂರ್ಣಪ್ರಜ್ಞ ಶಾಲೆ, ನಿಡುಗೋಡು ಯುನೈಟೆಡ್ ಅಕಾಡೆಮಿ ಶಾಲೆಗಳಿಗೆ ತೆರಳಲು ಶಾಲಾವಾಹನ ಮತ್ತು ಬೈಕ್ಗಳನ್ನು ಬಿಡದ ಕಾರಣ ವಿದ್ಯಾರ್ಥಿಗಳು ಕಾಲುನಡಿಗೆಯಲ್ಲೇ ತೆರಳಬೇಕಾಯಿತು. ಇಂದು ಸಿಇಟಿ ಹಾಗೂ ಇತರೆ ಪರೀಕ್ಷೆ ಎದುರಿಸುತ್ತಿದ್ದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸಿದರು. ಇದೇ ವೇಳೆ ಚನ್ನಕೇಶವಸ್ವಾಮಿ ದೇಗುಲದ ಒಳಗೆ ವ್ಯವಸ್ಥಾಪನಾ ಸಮಿತಿಯ ಕೆಲ ಸದಸ್ಯರಿಗೆ ಮಾತ್ರ ಅವಕಾಶ ನೀಡಿ, ಉಳಿದವರಿಗೆ ಪ್ರವೇಶ ನೀಡಿಲ್ಲ ಎಂದು ಸಮಿತಿ ಸದಸ್ಯರಾದ ಪ್ರಮೋದ್, ಶ್ರೀನಿವಾಸ ಅಸಮಾಧಾನ ವ್ಯಕ್ತಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications