ಮನೆ ಆರೈಕೆಯಲ್ಲಿರುವವರ ಮೇಲೆ ನಿಗಾ ಇಡಿ; ಸುಧಾಕರ್
ಹಾಸನ, ಮೇ 10; " ಹಾಸನ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೊಳಗಾಗಿ ಮನೆ ಆರೈಕೆಯಲ್ಲಿರುವವರ ಸ್ಥಿತಿಗತಿಯನ್ನು ತಿಳಿದು ಅಗತ್ಯವಿದ್ದರೆ ಅವರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಬೇಕು" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.
ಸೋಮವಾರ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಡಳಿತದೊಂದಿಗೆ ಸಚಿವರು ಸಭೆ ನಡೆಸಿದರು. "ಕಳೆದ ಮಾರ್ಚ್ನಲ್ಲಿ ಕೊರೊನಾ ಮೊದಲ ಅಲೆ ಕಾಣಿಸಿಕೊಂಡಿದ್ದು, ಈ ವರ್ಷ ಎರಡನೇ ಅಲೆ ಬಂದಿದೆ. ಇದನ್ನು ತಡೆಗಟ್ಟಲು ಸಾರಿ, ಐಎಲ್ ಐ ಇರುವವರಿಗೆ ಮೊದಲು ಪರೀಕ್ಷೆ ಮಾಡಿ 24 ಗಂಟೆಯೊಳಗೆ ವರದಿ ನೀಡಬೇಕು" ಎಂದರು.
ಹಾಸನ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್
"ಪಾಸಿಟಿವ್ ವರದಿ ಬಂದ 5-6 ಗಂಟೆಯೊಳಗೆ ಮಾಹಿತಿ ಪಡೆಯಬೇಕು. ಇದಕ್ಕಾಗಿ ಉತ್ತಮವಾದ ವಾರ್ ರೂಮ್ ನಿರ್ಮಿಸಬೇಕು. 15 ಸಾವಿರ ಸಕ್ರಿಯ ಪ್ರಕರಣಗಳಲ್ಲಿ 2 ಸಾವಿರ ಮಂದಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಮನೆ ಆರೈಕೆ ವ್ಯವಸ್ಥೆ ಇದೆ. ಮನೆ ಆರೈಕೆಯಲ್ಲಿರುವವರ ಸ್ಥಿತಿಗತಿ ತಿಳಿಯಬೇಕು"ಎಂದು ನಿರ್ದೇಶನ ಕೊಟ್ಟರು.
ಆಕ್ಸಿಜನ್ ಪೂರೈಕೆ; ಕರ್ನಾಟಕಕ್ಕೆ ಕೊಡುಗೆ ಕೊಟ್ಟ ಕೇಂದ್ರ
"ಬೂತ್ ಮಟ್ಟದಲ್ಲಿ 10 ಮಂದಿಯ ತಂಡ ಮನೆಮನೆಗೆ ಹೋಗಿ ಸಮೀಕ್ಷೆ ಮಾಡಬೇಕು. ಮನೆ ಆರೈಕೆಯಲ್ಲಿರುವವರು ಸ್ಥಿತಿಗತಿ ನೋಟ್ ಮಾಡಿಕೊಳ್ಳಬೇಕು. ಅವರ ದೇಹದ ಆಕ್ಸಿಜನ್ ಪ್ರಮಾಣ ತಿಳಿಯಬೇಕು. ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು" ಎಂದರು.
ಉಚಿತವಾಗಿ ಆಕ್ಸಿಜನ್ ಕಾನ್ಸ್ನ್ಟ್ರೇಟರ್ ಮನೆಗೆ ತರಲಿದೆ ಓಲಾ
"ವೈದ್ಯ ವಿದ್ಯಾರ್ಥಿಗಳನ್ನು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ನಿಯೋಜಿಸಬೇಕು. ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಇದೆ. ಇಲ್ಲಿ ವೈದ್ಯರನ್ನು ಬಳಸಿಕೊಂಡು ಕೋವಿಡ್ ಕೇರ್ ಸೆಂಟರ್ ಆರಂಭಿಸಬಹುದು. ಇಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಡಬಹುದು" ಎಂದು ಅಧಿಕಾರಿಗಳಿಗೆ ಹೇಳಿದರು.
"ಆಸ್ಪತ್ರೆಗಳಲ್ಲಿ ನಿಗದಿತ ದರ ಮೀರಿ ಶುಲ್ಕ ಪಡೆದರೆ ಲೈಸೆನ್ಸ್ ರದ್ದಾಗುತ್ತದೆ. ಅಧಿಕಾರಿಗಳು ಪ್ರತಿ ಆಸ್ಪತ್ರೆಗೆ ಭೇಟಿ ನೀಡಿ ವರದಿ ನೀಡಬೇಕು. ರೆಮ್ ಡಿಸವಿರ್ ಬಗ್ಗೆಯೂ ದೂರು ಬರುತ್ತಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಬೇಕು. ಇನ್ನೊಂದು ವಾರದಲ್ಲಿ ಇಂತಹ ತಪ್ಪುಗಳನ್ನು ಪತ್ತೆ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು" ಎಂದು ಸೂಚನೆ ನೀಡಿದರು.
Recommended Video
"ಜಿಲ್ಲೆಯಲ್ಲಿ ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಿಸಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಹೋಟೆಲ್ ಗಳನ್ನು ಬಳಸಿಕೊಂಡು ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ನಿವೃತ್ತಿಯಾದ ವೈದ್ಯರನ್ನು ಸಂಪರ್ಕಿಸಿ ಟೆಲಿ ಮೆಡಿಸಿನ್ ಸೇವೆ ನೀಡಬಹುದು. ಎನ್ಜಿಓಗಳನ್ನು ಕೂಡ ಬಳಸಿಕೊಳ್ಳಬಹುದು. ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ದೊರೆತ ಕೂಡಲೇ ಜಿಲ್ಲೆಗೆ ನೀಡಲಾಗುವುದು" ಎಂದು ಭರವಸೆ ನೀಡಿದರು.