ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ದ ಎಫ್ಐಆರ್
ಹಾಸನ, ಡಿಸೆಂಬರ್ 04 : ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮುಖಂಡನ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಪೊಲೀಸರು ಸೂರಜ್ ರೇವಣ್ಣ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಹಾಸನದ ಚನ್ನರಾಯಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಸೂರಜ್ ರೇವಣ್ಣ ವಿರುದ್ಧ ಎಫ್ ದಾಖಲು ಮಾಡಿದ್ದಾರೆ. ಕೆ. ಆರ್. ಪೇಟೆ ಗಡಿ ಭಾಗದ ನಂಬಿಹಳ್ಳಿಯಲ್ಲಿ ಬೆಂಗಳೂರಿನ ಪಾಲಿಕೆ ಸದಸ್ಯನ ಕಾರಿನ ಮೇಲೆ ದಾಳಿ ನಡೆಸಲಾಗಿದೆ ಎಂಬುದು ಆರೋಪ.
ಕುಮಾರಸ್ವಾಮಿ ಕಣ್ಣೀರಿಗೆ ನಾರಾಯಣ ಗೌಡ ಹೇಳಿದ್ದೇನು?
ಸೂರಜ್ ರೇವಣ್ಣ ಸೇರಿದಂತೆ ನಾಲ್ವರು ಯುವಕರು ಬೆಂಗಳೂರಿನ ಬಿಜೆಪಿ ಪಾಲಿಕೆ ಸದಸ್ಯನ ಕಾರಿನ ಮೇಲೆ ದಾಳಿ ಮಾಡಿ ಜಖಂಗೊಳಿಸಿದ್ದಾರೆ. ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಕಾರಿನಲ್ಲಿದ್ದವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್
ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆ ಡಿಸೆಂಬರ್ 5ರಂದು ನಡೆಯಲಿದೆ. ನಂಬಿಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದ ಪಾಲಿಕೆ ಸದಸ್ಯ ಮತ್ತು ಅವರ ಬೆಂಬಲಿಗರು ಕಾರಿನಲ್ಲಿ ಉಪ ಚುನಾವಣೆಗೆ ಹಣ ಹಂಚುತ್ತಿದ್ದರು ಎಂದು ಆರೋಪಿಸಲಾಗಿದೆ.
ಉಪ ಚುನಾವಣಾ ಪ್ರಚಾರ ಮುಕ್ತಾಯ; ನಡೆದಿದೆ ಕೊನೆ ಕ್ಷಣದ ಕಸರತ್ತು!
ಹಣ ಹಂಚುವ ಬಗ್ಗೆ ಮಾಹಿತಿ ಪಡೆದಿದ್ದ ಸೂರಜ್ ರೇವಣ್ಣ ಇತರ ಮೂವರ ಜೊತೆ ಹೋಗಿ ಕಾರಿನ ಮೇಲೆ ದಾಳಿ ಮಾಡಿದ್ದರು. ಕಾರನ್ನು ಜಖಂಗೊಳಿಸಿದ್ದಾರೆ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು.
ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆ ಗುರುವಾರ ನಡೆಯಲಿದೆ. ಬಿಜೆಪಿಯಿಂದ ನಾರಾಯಣ ಗೌಡ, ಕಾಂಗ್ರೆಸ್ನಿಂದ ಕೆ. ಬಿ. ಚಂದ್ರಶೇಖರ್, ಜೆಡಿಎಸ್ನಿಂದ ದೇವರಾಜ್ ಬಿ. ಎಲ್. ಕಣದಲ್ಲಿದ್ದಾರೆ.