Get Updates
Get notified of breaking news, exclusive insights, and must-see stories!

ಹಾಸನ- ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ರೂ. ಹಣ ದುರ್ಬಳಕೆ: ಮಾಜಿ ಸಿಎಂ ಎಚ್‌ಡಿಕೆ

ಹಾಸನ, ಫೆಬ್ರವರಿ 14: "ಹಾಸನ-ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ," ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಹೋದಾಗ ಈ ಹಗರಣದ ಮಾಹಿತಿ ಸಿಕ್ಕಿತು. ರಾಮನಗರ ಮತ್ತು ಮಂಡ್ಯ ಪ್ರಾಧಿಕಾರದಲ್ಲಿ ಇಷ್ಟು ಪ್ರಮಾಣ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತು," ಎಂದರು.

"ಬ್ಯಾಂಕ್‌‌ನಲ್ಲಿ ಠೇವಣಿ ಮಾಡಿದ್ದೇವೆ ಎಂದು ಹೇಳಿಕೊಂಡು ಹಣ ಹೊಡೆದಿದ್ದಾರೆ. ಇದು ಯಾರಿಂದ ಆಗಿದೆ? ಈ ಹಣ ಎಲ್ಲಿ ಹೋಗಿದೆ? ಯಾರು ಬಳಕೆ ಮಾಡಿದ್ದಾರೆ? ಎನ್ನುವುದು ತನಿಖೆ ನಡೆದರೆ ಗೊತ್ತಾಗುತ್ತದೆ," ಎಂದು ಕುಮಾರಸ್ವಾಮಿ ಅವರು ಹೇಳಿದರು.

Kumaraswamy Accuses of Money Laundering in Urban Development Authority in Hassan

"ಕಾಂಗ್ರೆಸ್ ನಾಯಕರು ಈಗಿನ ಈಗಿನ ಬಿಜೆಪಿ ಸರಕಾರವನ್ನು ಲೂಟಿ ಸರಕಾರ ಎಂದು ಕರೆಯುತ್ತಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರೂ ಈವರೆಗೆ ಒಂದೇ ಒಂದು ರೂಪಾಯಿ ಹಣ ವಾಪಸ್ ಬಂದಿಲ್ಲ. ಈ ವಿಷಯವನ್ನು ನಾನು ಸಿದ್ದರಾಮಯ್ಯ ಅವರ ಸರಕಾರವಿದ್ದಾಗಲೂ ಗಮನಕ್ಕೆ ತಂದಿದ್ದೆ. ರಾಜ್ಯದ ವಿವಿಧ ಇಲಾಖೆಗಳ ಹಣವನ್ನು ಖಾಸಗಿ ಬ್ಯಾಂಕ್ʼಗಳಲ್ಲಿ ಠೇವಣಿ ಇಡಲಾಗಿದ್ದು, ಆ ಹಣವನ್ನು ಖಜಾನೆಗೆ ವಾಪಸ್ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಆದರೆ ಅವರು ಏನನ್ನು ಮಾಡಲಿಲ್ಲ," ಎಂದು ಕುಮಾರಸ್ವಾಮಿ ಅವರು ದೂರಿದರು.

"ಅಂದು ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರಾಗಿದ್ದವರಿಗೆ, ಆರೋಪಕ್ಕೆ ಗುರಿಯಾದವರಿಗೆ ಮತ್ತೆ ಉತ್ತಮ ಇಲಾಖೆಯಲ್ಲಿ ದೊಡ್ಡ ದೊಡ್ಡ ಹುದ್ದೆ ನೀಡಲಾಯಿತು. ರಾಜ್ಯದಲ್ಲಿ ಸರಕಾರದ ಹಣ ಯಾವ ರೀತಿಯಲ್ಲಿ ಲೂಟಿ ಆಗುತ್ತಿದೆ ಎನ್ನುವುದಕ್ಕೆ ಇದೊಂದು ಸಾಕ್ಷಿ," ಎಂದು ಅವರು ಹೇಳಿದರು.

ಇನ್ನು "ರಾಜ್ಯದ ಬಿಜೆಪಿ ಸರಕಾರದ ಬಗ್ಗೆ ಚರ್ಚೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಈ ಸರಕಾರ ಯಾವ ರೀತಿ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನರೇಂದ್ರ ಮೋದಿ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ, ಎಲ್ಲವನ್ನೂ ನಿಲ್ಲಿಸಿದ್ದೇವೆ ಎನ್ನುತ್ತಾರೆ. ಆದರೆ ಎಲ್ಲವೂ ಹೇಗೆ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ವರ್ಷ ಐವತ್ತು ಸಾವಿರ ಕೋಟಿ ರೂ. ಸಾಲಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಜಿಎಸ್‌ಟಿಯಲ್ಲಿ ನಮ್ಮ ಪಾಲನ್ನು ಕೊಡದ ಕೇಂದ್ರ ಸರಕಾರ ಸಾಲ ಮಾಡಿ ಎಂದು ರಾಜ್ಯಕ್ಕೆ ಹೇಳುತ್ತಿದೆ. ರಾಜ್ಯದಲ್ಲಿ ಕೇಂದ್ರದಲ್ಲಿ ಅರ್ಥಿಕ ಶಿಸ್ತು ಕಾಣುತ್ತಿಲ್ಲ," ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. (ಒನ್‌ಇಂಡಿಯಾ ಸುದ್ದಿ)

Recommended Video

      ಅಮೆರಿಕ vs ರಷ್ಯಾ ಯುದ್ಧ ಸಂಭವಿಸಿದ್ರೆ ಭಾರತ ಎದುರಿಸಬೇಕಾದ ಅಪಾಯ,ಸಮಸ್ಯೆಗಳೆನು? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+