ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಮತ್ತೆ ಗುಡ್ಡ ಕುಸಿತ

ಹಾಸನ, ಜುಲೈ 03 : ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸಕಲೇಶಪುರದಿಂದ ಸಿಬ್ಬಂದಿ ಮಣ್ಣನ್ನು ತೆರವುಗೊಳಿಸಲು ತೆರಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಮಂಗಳೂರು-ಹಾಸನ ರೈಲು ಮಾರ್ಗದ ಶಿರವಾಗಿಲು ಸಮೀಪ ಗುಡ್ಡ ಕುಸಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರವಾಗಿಲು ಬಳಿ ಗುಡ್ಡ ಕುಸಿದಿದೆ.

ರೈಲ್ವೆ ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದರಿಂದ ಮಂಗಳೂರು-ಹಾಸನ ನಡುವಿನ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಗುಡ್ಡ ಕುಸಿದುಬಿದ್ದಿದ್ದರಿಂದ ಮಂಗಳೂರಿನಿಂದ ಹೊರಟಿದ್ದ ರೈಲನ್ನು ಕುಕ್ಕೆ ಸುಬ್ರಮಣ್ಯದಲ್ಲಿ ನಿಲ್ಲಿಸಲಾಗಿದೆ. ಸುಮಾರು 1 ಗಂಟೆಗಳಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.

Landslide in Mangaluru Hassan railway line

ಜೂನ್ 11ರಂದು ಸಹ ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಇದರಿಂದಾಗಿ ಒಂದು ದಿನ ಮಟ್ಟಿಗೆ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು.

ಜೂನ್ ತಿಂಗಳಿನಲ್ಲಿ ಮೂರು ಬಾರಿ ಈ ಮಾರ್ಗದಲ್ಲಿ ಗುಡ್ಡ ಕುಸಿತವಾಗಿತ್ತು. ಈಗ ಜುಲೈ ತಿಂಗಳಿನಲ್ಲಿಯೂ ಗುಡ್ಡ ಕುಸಿದಿದ್ದು, ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+