ಮದವೇರಿದ ಕಾಡಾನೆಯೊಂದಿಗೆ ಏಕಾಂಗಿಯಾಗಿ ಕಾದಾಡಿದ ಅರ್ಜುನನ ಕೊನೆಯ ವಿಡಿಯೋ ಭಾರೀ ವೈರಲ್
ಹಾಸನ, ಜನವರಿ, 30: ಸತತವಾಗಿ 8 ಬಾರಿ ನಾಡದೇವತೆ ಮೈಸೂರು ಚಾಮುಂಡೇಶ್ವರಿಯ ತಾಯಿಯ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಆನೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿತ್ತು. ಇನ್ನು ಸಾಯುವ ಮುನ್ನ ಇದು ಏಕಾಂಗಿಯಾಗಿ ಕಾಡಾನೆ ಜೊತೆ ಯಾವುದೇ ಭಯವಿಲ್ಲದೆ ದಿಟ್ಟತನದಿಂದ ಕಾದಾಡಿದ್ದ ಕೊನೆಯ ವಿಡಿಯೋ ಇದೀಗ ಎಲ್ಲೆಡೆ ಸದ್ದು ಮಾಡುತ್ತಿದೆ. ಇನ್ನು ಈ ವಿಡಿಯೋಗೆ ಪ್ರತಿಕ್ರಿಯೆಗಳು ಹರಿದುಬರುತ್ತಲೇ ಇವೆ.
ಕಾಡಾನೆ ಜೊತೆ ಅರ್ಜುನ ದಿಡ್ಡತನದಿಂದ ಏಕಾಂಗಿಯಾಗಿ ಕಾದಾಡಿದ ರಣರೋಚಕ ವಿಡಿಯೋ ಪ್ರವೀಣ್ ಇಟಿಎಫ್ ಸಕಲೇಶಪುರ ಎನ್ನುವ ಹೆಸರಿನ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಮದವೇರಿದ ಕಾಡಾನೆ ಜೊತೆಗೆ ಏಕಾಂಗಿಯಾಗಿ ಯಾವುದೇ ಭಯವಿಲ್ಲದೆ ವೀರಾವೇಶದಿಂದ ಹೋರಾಡಿರುವ ಅರ್ಜುನ ಬಲಿಷ್ಠ ಕಾಡಾನೆ ದಾಳಿಗೆ ತೀವ್ರ ಗಾಯಗೊಂಡು ಸಾವಿಗೀಡಾಗಿತ್ತು. ಡಿಸೆಂಬರ್ 4ರಂದು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿ ಈ ಕಾಳಗ ನಡೆದಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಒಂಟಿಸಲಗವೊಂದು ದೀಢೀರ್ ಬಂದು ಅರ್ಜುನನ ಮೇಲೆ ಎರಗಿತ್ತು.
ಮದವೇರಿದ ಕಾಡಾನೆ ಬರುತ್ತಲೇ ಬೇರೆ ಸಾಕಾನೆಗಳು ಸ್ಥಳದಿಂದ ಹೆದರಿ ಕಾಲ್ಕಿತ್ತವು. ಬಳಿಕ ಕಾಡಾನೆ ಜೊತೆ ಕಾಳಗಕ್ಕೆ ಏಕಾಂಗಿಯಾಗಿ ಹೋರಾಟಕ್ಕೆ ಮುಂದಾದಾಗ ಕ್ಯಾಪ್ಟನ್ ಅರ್ಜುನ ವೀರಮರಣ ಹೊಂದಿದ್ದ. ಅರ್ಜುನನ ಈ ರೋಚಕ ಕಾದಾಟದ ಕೊನೇ ಕ್ಷಣದ ಎರಡು ತಂಗಳ ಹಿಂದಿನ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಇನ್ನು ಹಾಸನ ಜಿಲ್ಲೆಯ ಸಕಲೇಶಪು ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ತುಸು ಹೆಚ್ಚಾಗಿಯೇ ಇದ್ದು, ಇವುಗಳ ದಾಳಿಯಿಂದ ಬರೀ ಜಮೀನುಗಳ ನಾಶ ಮಾತ್ರವಲ್ಲದೆ, ಮಾನವ ಹಾನಿಯಾಗಿರುವ ಉದಾಹರಣೆಗಳು ಇವೆ. ಇದರಿಂದ ಬೇಸತ್ತ ಈ ಭಾಗದ ಜನರು ಕಾಡಾನೆಗಳನ್ನು ಸೆರೆಹಿಡಿಯುವಂತೆ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಈಗಲೂ ಕೂಡ ಈ ಭಾಗದಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗುತ್ತಲಿದ್ದು, ಇದರಿಂದ ಇಲ್ಲಿನ ಜನರು ತತ್ತರಿಸಿಹೋಗಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ವಿರುದ್ಧ ಕೆಂಡಕಾರುತ್ತಲೇ ಇದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications