Get Updates
Get notified of breaking news, exclusive insights, and must-see stories!

Prajwal Revanna V/s Preetham Gowda: ಹಾಸನದಲ್ಲಿ ಕೊನೆಯಾಗಲ್ವಾ ಪ್ರಜ್ವಲ್, ಪ್ರೀತಂ ಗೌಡ ಭಿನ್ನಾಭಿಪ್ರಾಯ?

ಹಾಸನ, ಏಪ್ರಿಲ್.07: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಇರುವುದು ಕಾಣಿಸುತ್ತಲೇ ಇದೆ. ಒಮದಲ್ಲ ಒಂದು ಕಡೆ ಅದು ವೇದಿಕೆ ಮೇಲೆಯೇ ಬಹಿರಂಗವಾಗುತ್ತಿದೆ. ಗೌಡರ ಕೋಟೆ ಹಾಸನದಲ್ಲಿಯೂ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂ ಗೌಡ ನಡುವಿನ ಭಿನ್ನಾಭಿಪ್ರಾಯ ಎಲ್ಲರಿಗೂ ಗೊತ್ತಿರುವುದೆ.

ಆದರೆ, ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಎರಡು ಪಕ್ಷಗಳ ಕಾರ್ಯಕರ್ತರ ಮೇಲೆ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರದೆ ಇರದು. ಇದೇ ಕಾರಣಕ್ಕೆ ಬಿಜೆಪಿ ಎಚ್ಚೆತ್ತಿಕೊಂಡಿದ್ದು, ಇಬ್ರಬ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಬಿಜೆಪಿ ಹೈಕಮಾಂಡ್‌ಗೆ ದೂರು ನೀಡಿದ್ದಾರೆ.

Lok Sabha election 2024 Radha Mohan Das Agarwal to solve rift between Prajwal Preetham

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹಾಸನದಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಇವರೇ ಶಮನಗೊಳಿಸುತ್ತಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಪ್ರೀತಂ ಗೌಡ ಗೈರುಹಾಜರಾಗಿದ್ದರು.ಇತ್ತೀಚೆಗೆ ಹಾಸನದಲ್ಲಿ ಬಿಜೆಪಿ-ಜೆಡಿಎಸ್ ನಡೆಸಿದ ಜಂಟಿ ಸಮಾವೇಶದಲ್ಲಿ ಪ್ರೀತಂ ಗೌಡ ಕಾಣಿಸಿಕೊಂಡಿರಲಿಲ್ಲ. ಹೀಗಾಗಿಯೇ ಎಚ್‌ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್‌ಗೆ ದೂರವಾಣಿ ಮೂಲಕ ದೂರು ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮಾಜಿ ಶಾಸಕ ಪ್ರೀತಂಗೌಡ ಅವರ ಗೈರುಹಾಜರಿಯನ್ನು ರಾಧಾಮೋಹನ್ ದಾಸ್ ಅಗರ್‌ವಾಲ್ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಗೌಡ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯೂ ಆಗಿದ್ದಾರೆ. ಹೀಗಾಗಿ ಅವರಿಗೆ ಅವರದ್ದೇ ಆದ ಜವಾಬ್ದಾರಿಗಳು ಇವೆ ಎಂದಿದ್ದಾರೆ.

Lok Sabha election 2024 Radha Mohan Das Agarwal to solve rift between Prajwal Preetham

ಭಾನುವಾರ ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಮೈಸೂರಿನಲ್ಲಿ ರಾಧಾಮೋಹನ್ ದಾಸ್ ಅಗರ್ವಾಲ್ ಸಮ್ಮುಖದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂ ಗೌಡ ಭೇಟಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸಮನ್ವಯ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಕೋರಿಕೆಯ ಮೇರೆಗೆ ಭಿನ್ನಾಭಿಪ್ರಾಯವನ್ನು ಪರಿಹರಿಸಲು ಅಗರ್ವಾಲ್ ನಿರ್ಧರಿಸಿದ್ದಾರೆ.

ಇನ್ನು, ಸಭೆಯಲ್ಲಿ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಹೊರಿಸಿದ ಆರೋಪಗಳನ್ನು ರಾಧಾಮೋಹನ್ ದಾಸ್ ಅಗರ್ವಾಲ್ ತಳ್ಳಿಹಾಕಿದ್ದಾರೆ. ಫೋನ್ ಮೂಲಕವೂ ಪ್ರೀತಂ ಗೌಡ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಪ್ರಜ್ವಲ್ ವಿಫಲರಾಗಿದ್ದಾರೆ ಎಂದು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ಪ್ರಜ್ವಲ್ ರೇವಣ್ಣ ಅವರು ಪ್ರೀತಂ ಗೌಡ ಅವರನ್ನು ನಿರ್ಲಕ್ಷಿಸಿ ಅವರ ನಿಕಟವರ್ತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನ್ಯಾಯಸಮ್ಮತವಲ್ಲ. ಬಿಜೆಪಿ ನಾಯಕತ್ವವು ಯಾವುದೇ ಪದಾಧಿಕಾರಿಗಳನ್ನು ಅಥವಾ ನಾಯಕರನ್ನು ಎಂದಿಗೂ ನಿರ್ಲಕ್ಷಿಸಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಭವಿಷ್ಯದಲ್ಲಿ ಪ್ರೀತಂ ಗೌಡ ಅವರು ಪ್ರಜ್ವಲ್ ರೇವಣ್ಣ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಯಲಿದೆ ಎಂಬ ಪ್ರಶ್ನೆಯೊಂದಕ್ಕೆ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಪಕ್ಷವು ಅಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+