ರಾಜ್ಯಕ್ಕೆ ರಾಜ್ಕುಮಾರ್ ಇದ್ದಂತೆ ದೇಶಕ್ಕೆ ಮೋದಿ ಶಕ್ತಿ: ತಾರಾ
ಹಾಸನ, ಏಪ್ರಿಲ್ 1: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗಿದೆ ಎನ್ನುವುದು ಸುಳ್ಳು. ಕರ್ನಾಟಕದಲ್ಲಿ ಡಾ. ರಾಜ್ಕುಮಾರ್ ಹೆಸರು ಹೇಗೆ ಒಂದು ಶಕ್ತಿಯಾಗಿದೆಯೋ, ಹಾಗೆಯೇ ದೇಶದಲ್ಲಿ ನರೇಂದ್ರ ಮೋದಿ ಅವರು ಒಂದು ಶಕ್ತಿಯಾಗಿದ್ದಾರೆ ಎಂದು ನಟಿ, ಬಿಜೆಪಿ ನಾಯಕಿ ತಾರಾ ಹೇಳಿದರು.
ಹಾಸನದಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ಎ. ಮಂಜು ಅವರ ಪರ ಪ್ರಚಾರ ನಡೆಸಲು ಬಂದಿದ್ದ ಅವರು ಮೋದಿ ಗುಣಗಾನ ಮಾಡಿದರು.
ಇದು ದೇಶಕ್ಕೆ ನಡೆಯುವ ಚುನಾವಣೆ. ಇಲ್ಲಿ ಹೆಚ್ಚಿನವರು ಮೋದಿ ಮತ್ತೆ ಗೆದ್ದುಬರಬೇಕು ಎಂದು ಬಯಸಿದ್ದಾರೆ. ಮೋದಿ ಅವರ ಅಲೆ ಕಡಿಮೆ ಆಗಿದೆ ಎನ್ನುವುದು ಸುಳ್ಳು. ವಾಸ್ತವವಾಗಿ 2014ಕ್ಕಿಂತಲೂ ಹೆಚ್ಚು ಬೆಂಬಲ ಮೋದಿ ಅವರಿಗೆ ವ್ಯಕ್ತವಾಗುತ್ತಿದೆ ಎಂದರು.

ರಾಜ್ಯದಲ್ಲಿ ಡಾ. ರಾಜ್ಕುಮಾರ್ ಅವರ ಹೆಸರು ಹೇಗೆ ಒಂದು ಶಕ್ತಿಯಾಗಿದೆಯೋ ಹಾಗೆಯೇ ದೇಶದಲ್ಲಿ ಮೋದಿ ಅವರ ಹೆಸರು ಒಂದು ಶಕ್ತಿ. ಮೋದಿ ಅವರ ಹೆಸರಿನಲ್ಲಿಯೇ ಮೋಡಿ ಇದೆ. ಹೀಗಾಗಿ ಅವರ ಹೆಸರನ್ನು ನಾವು ಎಲ್ಲ ಕಡೆ ಬಳಸುತ್ತಿದ್ದೇವೆ. ಅವರು ಪ್ರಧಾನಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ ಸಾಕಷ್ಟು ಹೆಸರು ಬಂದಿದೆ, ಹೆಚ್ಚಿನ ಗೌರವ ಸಿಗುತ್ತಿದೆ. ಜಗತ್ತಿನಲ್ಲಿರುವ ಪ್ರಭಾವಿ ಪ್ರಧಾನಿಗಳ ಪಟ್ಟಿಯಲ್ಲಿ ಮೋದಿ ಹೆಸರು ಅಗ್ರಸ್ಥಾನದಲ್ಲಿದೆ ಎಂದು ಹೇಳಿದರು.
ದೇಶದ ಸಂಪೂರ್ಣ ಅಭಿವೃದ್ಧಿಗೆ ಬಿಜೆಪಿಗೆ ನೀಡಿರುವ ಐದು ವರ್ಷದ ಅವಕಾಶ ಸಾಲದು. ಮತ್ತೆ ಐದು ವರ್ಷ ಬೇಕು. ಅದಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದರು.
ಬಿಜೆಪಿ ಅಭ್ಯರ್ಥಿ ಎ.ಮಂಜು ಅವರ ಪರವಾಗಿ ಅರಕಲಗೂಡು, ಹಳೆ ಮೈಸೂರು ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ. ಹಾಸನದಲ್ಲಿ ಈ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುವುದು ನಿಶ್ಚಿತ. ಪಕ್ಷದ ನಾಯಕರು ಸೂಚನೆ ನೀಡಿದರೆ ಮಂಡ್ಯದಲ್ಲಿ ಸುಮಲತಾ ಅವರ ಪರವೂ ಪ್ರಚಾರ ಮಾಡಲಿದ್ದೇನೆ. ಸುಮಲತಾ ಮತ್ತು ನಿಖಿಲ್ ಇಬ್ಬರೂ ಸಿನಿಮಾ ರಂಗಕ್ಕೆ ಸಂಬಂಧಿಸಿದವರು. ಆದರೆ, ಪಕ್ಷ ಯಾರ ಪರ ಪ್ರಚಾರ ಮಾಡುವಂತೆ ಸೂಚನೆ ನೀಡುತ್ತದೆಯೋ ಅವರ ಪರ ಪ್ರಚಾರಕ್ಕೆ ಇಳಿಯುತ್ತೇನೆ ಎಂದು ತಿಳಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications