ಪ್ರಜ್ವಲ್ ರೇವಣ್ಣ ನಾಮಪತ್ರ ಮರುಪರಿಶೀಲನೆಗೆ ಚುನಾವಣಾ ಆಯೋಗ ನೋಟಿಸ್
ಹಾಸನ, ಏಪ್ರಿಲ್ 13: ಹಾಸನ ಲೋಕಸಭೆ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.
ಪ್ರಜ್ವಲ್ ಅವರ ನಾಮಪತ್ರದಲ್ಲಿ ಒದಗಿಸಿರುವ ಆಸ್ತಿ ವಿವರಗಳನ್ನು ಮರುಪರಿಶೀಲನೆಗೆ ಒಳಪಡಿಸುವಂತೆ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್ ನೀಡಿದೆ.
ಪ್ರಜ್ವಲ್ ಅವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಮರೆಮಾಚಿ ತಪ್ಪು ಮಾಹಿತಿ ಒದಗಿಸಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಪರಿಶೀಲಿಸಿದ ಆಯೋಗವು ಈ ಬಗ್ಗೆ ವಿಚಾರಣೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್ ನೀಡಿದೆ.

ವಿವಿಧ ಕಂಪೆನಿಗಳಲ್ಲಿ ಪ್ರಜ್ವಲ್ ರೇವಣ್ಣ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆ ವೇಳೆ ನೀಡಿದ ಆಸ್ತಿ ವಿವರಗಳಲ್ಲಿ ಇದರ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ.
ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿ ಎ. ಮಂಜು ಕೂಡ ಪ್ರಜ್ವಲ್ ಅವರ ಆಸ್ತಿ ವಿವರದ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು.
ಪ್ರಜ್ವಲ್ ಅವರು ಎರಡು ಖಾಸಗಿ ಕಂಪೆನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಅವುಗಳ ಕುರಿತು ಆಸ್ತಿ ವಿವರದಲ್ಲಿ ಉಲ್ಲೇಖಿಸದೆ ವಂಚಿಸಿದ್ದಾರೆ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಅವರು ಆಗ್ರಹಿಸಿದ್ದರು.
ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಅಧಿಕಾರ್ ವೆಂಚರ್ಸ್ ಎಲ್ಎಲ್ಪಿ ಮತ್ತು ಡ್ರೋನ್ ವರ್ಕ್ಫೋರ್ಸ್ ಎಂಬ ಕಂಪೆನಿಗಳಲ್ಲಿ ಶೇ 20ರಿಂದ ಶೇ 25ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅವರ ತಾಯಿ ಭವಾನಿ ರೇವಣ್ಣ ಕೂಡ ಕಂಪೆನಿಯಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಅವುಗಳ ಬಗ್ಗೆ ಮಾಹಿತಿ ಒದಗಿಸಿಲ್ಲ ಎಂದು ದೂರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications