ಹಾಸನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಹಾಸನ, ನವೆಂಬರ್, 09: ಲಂಚ ತೆಗೆದುಕೊಂಡ ಆರೋಪ ಹಿನ್ನೆಲೆ ಹಾಸನದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಂಚ ತೆಗೆದುಕೊಂಡ ಆರೋಪ ಹಿನ್ನೆಲೆ ಹಾಸನದ ಕೆ.ಆರ್ ಪುರಂನಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮೇಲೆ ಬೆಂಗಳೂರು ಮತ್ತು ಹಾಸನ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಲೋಕಾಯುಕ್ತ ಎಸ್ಪಿ ಪವನ್ ನಜ್ಜೂರು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಡಿಡಿಪಿಐ ಮನೆ ಮೇಲೆ ಲೋಕಾಯುಕ್ತ ದಾಳಿ
ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಇತ್ತೀಚೆಗಷ್ಟೇ ಡಿಡಿಪಿಐ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು ಎಸ್.ಡಿ.ಎ.ಅಸ್ರಾರ್ ಅಹಮದ್ ಮೂಲಕ ಡೀಲ್ ಕುದುರಿಸುತ್ತಿದ್ದು, ಮುಂಗಡವಾಗಿ 1000 ಸಾವಿರ ಹಣ ಪಡೆದಿದ್ದರು.
ಒಂದು ಫೈಲ್ಗೆ 5 ಸಾವಿರದಂತೆ 2 ಫೈಲ್ಗೆ 10 ಸಾವಿರ ಕೇಳಿದ್ದರು. ಈ ಬಗ್ಗೆ ಮೂಡಿಗೆರೆ ಮೂಲದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಹಿನ್ನೆಲೆ ಡಿಡಿಪಿಐ ರಂಗನಾಥ ಸ್ವಾಮಿ ಮೇಲೆ ಲೋಕಾಯುಕ್ತ ತಿರುಮಲೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿದೆ.
ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಇತ್ತೀಚೆಗಷ್ಟೇ ಹಿರಿಯೂರು ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದ ಘಟನೆ ನಡೆದಿತ್ತು. ಸೋಮವಾರ ಬೆಳಗ್ಗೆಯಿಂದ ಸಂಜೆ ಸುಮಾರು 7ಗಂಟೆಯವರೆಗೂ ಮನೆಯಲ್ಲಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದರು.
ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ ಕೃಷ್ಣಮೂರ್ತಿ ಅವರ ಕುವೆಂಪು ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ 600 ಗ್ರಾಂ ಚಿನ್ನ, 2ಕೆಜಿ ಬೆಳ್ಳಿ, 2ಕಾರು ಹಾಗೂ 10 ನಿವೇಶನಗಳು ಪತ್ತೆಯಾಗಿದ್ದವು. ಚಿತ್ರದುರ್ಗ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯಕ ಅವರ ಚಂದ್ರಾ ಲೇಔಟ್ನಲ್ಲಿರುವ ಮನೆಯಲ್ಲಿ 650 ಗ್ರಾಂ ಚಿನ್ನ, 4ಕೆಜಿ ಬೆಳ್ಳಿ, 2ಲಕ್ಷ ನಗದು, 11ನಿವೇಶನಗಳು ಹಾಗೂ ಇನ್ನೋವಾ ಸೇರಿದಂತೆ ಎರಡು ಕಾರುಗಳು ಇರುವುದು ಪತ್ತೆಯಾಗಿದ್ದವು
ಹಿರಿಯೂರು ನಗರದಲ್ಲಿರುವ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪ್ರತ್ಯೇಕ ತಂಡವಾಗಿ ಆಗಮಿಸಿ, ಮನೆ ಮೇಲೆ ದಾಳಿ ನಡೆಸಿದ್ದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಸೇರಿದಂತೆ, ತುಮಕೂರು, ಹಾವೇರಿ, ಬಳ್ಳಾರಿ, ರಾಯಚೂರು,ಹಾಸನ, ತುಮಕೂರು, ಬೆಂಗಳೂರು ನಗರ, ಮಂಡ್ಯ, ಕಲ್ಬುರ್ಗಿ ಸೇರಿದಂತೆ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಲೋಕಾಯುಕ್ತ ದಾಳಿಯಲ್ಲಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ಸೇರಿ 35.54 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications