ಮಹಾಮಸ್ತಕಾಭಿಷೇಕ : ರೋಹಿಣಿಯನ್ನು ಪ್ರಶಂಸಿಸಿದ ವೀರೇಂದ್ರ ಹೆಗ್ಗಡೆ
Recommended Video

ಹಾಸನ, ಡಿಸೆಂಬರ್ 30: "ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ನಡೆದಿರುವ ಪೂರ್ವ ಸಿದ್ಧತೆಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಶನಿವಾರ ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, "ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ತಯಾರಿ ಚೆನ್ನಾಗಿದೆ. ಈ ಬಗ್ಗೆ ತೃಪ್ತಿ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಉತ್ತಮ ರೀತಿಯಲ್ಲಿ ಸಾಗಿದ್ದು, ಈ ಬಗ್ಗೆ ತೃಪ್ತಿ ಇದೆ. ಮುನಿಗಳು, ಶ್ರಾವಕರು, ಸೇವಾಕರ್ತರು, ಸ್ವಯಂ ಸೇವಕರು, ಪೊಲೀಸರು ಸೇರಿದಂತೆ ಇತರರಿಗೆ ಮಾಡಲಾಗಿರುವ ವಾಸ್ತವ್ಯ ವ್ಯವಸ್ಥೆ ಉತ್ತಮ ರೀತಿಯಲ್ಲಿ ಇದೆ.
ಶ್ರೀಕ್ಷೇತ್ರ ಹಾಗೂ ತಾತ್ಕಲಿಕ ಉಪನಗರಗಳಲ್ಲಿ ಕೆಲಸಗಳು ಭರದಿಂದ ಸಾಗಿವೆ. ಇನ್ನೂ ಕೆಲವು ಕೆಲಸಗಳು ಆಗಬೇಕಿವೆ. ಪೂರ್ವತಯಾರಿ ದೃಷ್ಟಿಯಲ್ಲಿ ನೋಡುವುದಾರೆ ಈವರೆಗೂ ಆಗಿರುವ ಕೆಲಸಗಳು ತೃಪ್ತಿ ತಂದಿದೆ. ಹಾಗಾಗಿ, ನಮ್ಮ ಉತ್ಸಾಹ, ಆತ್ಮವಿಶ್ವಾಸ ಹೆಚ್ಚಿದೆ. ಇದಕ್ಕಾಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದರು.

ಮಸ್ತಕಾಭಿಷೇಕಕ್ಕೆ 500ಕ್ಕೂ ಹೆಚ್ಚು ಸಾಧುಗಳ ಆಗಮನ
ಮಹಾ ಮಸ್ತಕಾಭಿಷೇಕಕ್ಕೆ 500ಕ್ಕೂ ಹೆಚ್ಚು ಸಾಧುಗಳು ಬರುತ್ತಿದ್ದಾರೆ. ದಿಗಂಬರ ಮುನಿಗಳು, ಸಾಧ್ವಿಗಳು, ಶ್ರಾವಕರು, ಶ್ರದ್ಧಾಕರ್ತರು, ಭಕ್ತರು ದೇಶ-ವಿದೇಶಗಳಿಂದ ಬರುತ್ತಿದ್ದಾರೆ. ಯಾತ್ರಿಕರನ್ನು ಸ್ವಾಗತಿಸಲು ಕರ್ನಾಟಕ ತುದಿಗಾಲಲ್ಲಿ ನಿಂತಿದೆ ಎಂದು ವೀರೇಂದ್ರ ಹೆಗ್ಡೆ ಅವರು ಹೇಳಿದರು.

ಉಪ ನಗರಗಳಿಗೆ ಭೇಟಿ ನೀಡಿದ ವೀರೇಂದ್ರ ಹೆಗ್ಡೆ
ಇದಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರು, ತಾತ್ಕಲಿಕವಾಗಿ ನಿರ್ಮಿಸಿರುವ ತ್ಯಾಗಿ ನಗರ, ಪಂಚಕಲ್ಯಾಣಿ ನಗರ, ಮಾತಾಜಿ ನಗರ, ಕಳಸ ನಗರ, ಜನಪ್ರತಿನಿಧಿ ನಗರ, ಪೊಲೀಸ್ ನಗರ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಗಮನಿಸಿದರು.

ಮಸ್ತಕಾಭಿಷೇಕದ ಉದ್ಘಾಟನೆಗೆ ರಾಷ್ಟ್ರಪತಿ
ಈವರೆಗೂ ಶೇ. 70ರಷ್ಟು ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿವೆ. ಉಳಿದ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಗಲಿರುಳು ಶ್ರಮಿಸಲಾಗುತ್ತಿದ್ದು, ರಾಷ್ಟ್ರಪತಿ ಅವರು 2018ರ ಫೆ. 7ರಂದು ಮಸ್ತಕಾಭಿಷೇಕದ ಉದ್ಘಾಟನೆಗೆ ಆಗಮಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಪರಿಶೀಲನೆ ವೇಳೆ ಇತರೆ ಅಧಿಕಾರಿಗಳು ಹಾಜರ್
ಸಿದ್ಧತೆ ಪರಿಶೀಲನೆ ವೇಳೆ ಮಹಾ ಮಸ್ತಕಾಭಿಷೇಕದ ಸಹ ಅಧ್ಯಕ್ಷರೂ ಆದ ಶಾಸಕ ಅಭಂಚಂದ್ರ ಜೈನ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎನ್. ವರಪ್ರಸಾದ್ ರೆಡ್ಡಿ, ರಾಷ್ಟ್ರೀಯ ಮಟ್ಟದ ದಿಗಂಬರ ಜೈನ್ ಸಂಘಟನಾ ಸಮಿತಿಯ ಕಾರ್ಯಾಧ್ಯಕ್ಷ ಎಸ್.ಜಿತೇಂದ್ರ ಕುಮಾರ್ ಹಾಜರಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications