ಹಾಸನದಲ್ಲಿ ಸೆಲ್ಫಿ ತೆಗೆಯುವಾಗ ನದಿಗೆ ಬಿದ್ದು ವ್ಯಕ್ತಿ ಸಾವು
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಉದಯಗಿರಿ ಬಡಾವಣೆಯ ನಿವಾಸಿ ಕುಮಾರ್(37) ಸಾವನ್ನಪ್ಪಿದ ದುರ್ದೈವಿ. ಇವರು ತನ್ನ ಪತ್ನಿ ರೂಪ ಮತ್ತು 12 ವರ್ಷದ ಪುತ್ರ ಜ್ಞಾನೇಶ್ ನೊಂದಿಗೆ ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಬಂದಿದ್ದರು.
ಕೆ.ಆರ್.ನಗರ, ಮೇ 11: ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಕಾವೇರಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚುಂಚನಕಟ್ಟೆಯಲ್ಲಿ ಬುಧವಾರ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಉದಯಗಿರಿ ಬಡಾವಣೆಯ ನಿವಾಸಿ ಕುಮಾರ್(37) ಸಾವನ್ನಪ್ಪಿದ ದುರ್ದೈವಿ. ಇವರು ತನ್ನ ಪತ್ನಿ ರೂಪ ಮತ್ತು 12 ವರ್ಷದ ಪುತ್ರ ಜ್ಞಾನೇಶ್ ನೊಂದಿಗೆ ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಬಂದಿದ್ದರು.

ದೇವಾಲಯಕ್ಕೆ ಭೇಟಿ ನೀಡಿ ಪೂಜಾಕೈಂಕರ್ಯ ಮುಗಿದ ಬಳಿಕ ಮಧ್ಯಾಹ್ನ ಸುಮಾರು 3ರ ಸಮಯದಲ್ಲಿ ಕಾವೇರಿ ನದಿ ಬಳಿಗೆ ತೆರಳಿದ ಜ್ಞಾನೇಶ್ ಅಲ್ಲಿ ಸೆಲ್ಪಿ ತೆಗೆಯಲು ಮುಂದಾಗಿದ್ದಾರೆ. ಈ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ಈಜು ಬಾರದೆ ಮುಳುಗಿದ್ದಾನೆ.
ಗಂಡ ನದಿಗೆ ಬಿದ್ದು ಮುಳುಗುತ್ತಿದ್ದುದನ್ನು ಕಂಡ ಹೆಂಡತಿ ಮತ್ತು ಮಗ ಜೋರಾಗಿ ಬೊಬ್ಬೆ ಹೊಡೆಯುತ್ತಾ ಯಾರಾದರೂ ಕಾಪಾಡಿ ಎಂದು ಕೂಗಿದ್ದಾರೆ. ಅವರ ಚೀರಾಟ ಕೇಳಿ ಸಾರ್ವಜನಿಕರು ಸಹಾಯಕ್ಕೆ ಧಾವಿಸಿದರಾದರೂ ಅಷ್ಟರಲ್ಲಿ ಕುಮಾರ್ ನೀರು ಪಾಲಾಗಿದ್ದರು.
ಕೂಡಲೇ ಮಾಹಿತಿ ತಿಳಿದ ಚುಂಚನಕಟ್ಟೆ ಪೊಲೀಸ್ ಉಪಠಾಣೆಯ ಮುಖ್ಯಪೇದೆ ವೆಂಕಟೇಶ್ಮೂರ್ತಿ ಮತ್ತು ಸಿಬ್ಬಂದಿ ಅರವಿಂದ ಸ್ಥಳಕ್ಕಾಗಮಿಸಿ ಕೆ.ಆರ್.ನಗರದ ಅಗ್ನಿಶಾಮಕ ಠಾಣೆಯವರಿಗೆ ವಿಷಯ ಮುಟ್ಟಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಶವವನ್ನು ನೀರಿನಿಂದ ಹೊರತೆಗೆದು ಕೆ.ಆರ್.ನಗರ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ವಾರಾಸುದಾರರಿಗೆ ಶವವನ್ನು ಹಸ್ತಾತರಿಸಲಾಗಿದೆ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications