ಹಾಸನ, ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ
ಹಾಸನ, ಆಗಸ್ಟ್ 14: ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯದ ಆವರಣದಲ್ಲಿ ಗಂಡನೇ ಹೆಂಡತಿಯ ಕುತ್ತಿಗೆ ಸೀಳಿರುವ ಆಘಾತಕಾರಿ ಘಟನೆ ನಡೆದಿದೆ. ಎರಡು ವರ್ಷದಿಂದ ವಿಚ್ಛೇದನಕ್ಕಾಗಿ ಗಂಡ ಹೆಂಡತಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಎರಡನೇ ಜೆಎಂಎಫ್ಸಿ ಕೋರ್ಟ್ನ ಶೌಚಾಲಯದ ಬಳಿ ಕೃತ್ಯ ನಡೆದಿದ್ದು ಆರೋಪಿ ಪತಿ ಶಿವಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಚೈತ್ರಾ (32) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೊಳೆನರಸೀಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಒಂದು ಗಂಟೆ ಕಾಲ ಕೌನ್ಸೆಲಿಂಗ್ ಮುಗಿಸಿ ಹೊರಬಂದ ಬಳಿಕ ಆರೋಪಿ ಶಿವಕುಮಾರ್, ಪತ್ನಿ ಚೈತ್ರಾ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆ ಶೌಚಾಲಯಕ್ಕೆ ತೆರಳುತ್ತಿದ್ದನ್ನು ಗಮನಿಸಿದ ಆತ, ಹಿಂಬಾಲಿಸಿ, ಮಚ್ಚಿನಿಂದ ಅವಳ ಕತ್ತು ಸೀಳಿದ್ದಾನೆ.

ಬಳಿಕ ಮಗುವಿನ ಮೇಲೂ ಹಲ್ಲೆ ಮಾಡಲು ಯತ್ನಿಸಿದ್ದಾನೆ. ವಿಪರೀತ ರಕ್ತಸ್ರಾವದಿಂದ ಬಳಲುತ್ತಿದ್ದ ಚೈತ್ರಾರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಶಿವಕುಮಾರ್ನನ್ನು ಪಕ್ಕದಲ್ಲಿದ್ದವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಕುಮಾರ್ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ.
ಘಟನೆಯ ಕೆಲ ನಿಮಿಷಗಳ ಹಿಂದೆ, ಕೌನ್ಸೆಲಿಂಗ್ ಸೆಷನ್ನಲ್ಲಿ, ದಂಪತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬಿಟ್ಟು ತಮ್ಮ ಏಳು ವರ್ಷಗಳ ದಾಂಪತ್ಯವನ್ನು ಉಳಿಸಿಕೊಂಡು ಮತ್ತೆ ಒಂದಾಗಲು ಒಪ್ಪಿಕೊಂಡಿದ್ದರು. ಆದಾಗಿ ಕೆಲವೇ ಕ್ಷಣಗಳಲ್ಲಿ ಈ ಕೃತ್ಯ ನಡೆದಿದೆ.
ಇನ್ನು, ನ್ಯಾಯಾಲಯದ ಸಂಕೀರ್ಣದೊಳಗೆ ಆಯುಧವನ್ನು ತೆಗೆದುಕೊಂಡು ಬರಲು ಆರೋಪಿಗೆ ಹೇಗೆ ಸಾಧ್ಯವಾಯಿತು? ಎಂಬುದನ್ನು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
"ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಆತನನ್ನು ನಮ್ಮ ವಶದಲ್ಲಿಟ್ಟುಕೊಂಡಿದ್ದೇವೆ. ಆತ ಅಪರಾಧ ಎಸಗಲು ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದೇವೆ. ಕೌನ್ಸೆಲಿಂಗ್ ನಂತರ ಏನಾಯಿತು ಮತ್ತು ನ್ಯಾಯಾಲಯದೊಳಗೆ ಆಯುಧವನ್ನು ಹೇಗೆ ತಂದರು ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. ಇದೊಂದು ಪೂರ್ವಯೋಜಿತ ಕೊಲೆಯೇ ಎಂಬ ಬಗ್ಗೆಯೂ ತನಿಖೆಯ ವೇಳೆ ವಿವರ ಸಿಗಲಿದೆ" ಎಂದು ಹಾಸನದ ಹಿರಿಯ ಪೊಲೀಸ್ ಅಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications