ಅರಸೀಕೆರೆ: ಐಫೋನ್ ಕೊರಿಯರ್ ಹಿಂಪಡೆಯಲು ನಿರಾಕರಿಸಿದ ಡಿಲೆವರಿ ಬಾಯ್ ಕೊಲೆ: ಆರೋಪಿ ಬಂಧನ
ಫೋನ್ ಡೆಲಿವರಿ ಮಾಡುವಾಗ ನಡುವೆ ಹಣ ಪಾವತಿ ಮತ್ತು ಮೊಬೈಲ್ ಬಾಕ್ಸ್ ಒಪನ್ ಆಗಿರುವ ವಿಚಾರದಲ್ಲಿ ಜಗಳ ನಡೆದಿದೆ
ಬೆಂಗಳೂರು, ಫೆಬ್ರವರಿ. 19: ಆನ್ಲೈನ್ ಮೂಲಕ ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿ, ಡಿಲೆವರಿ ವೇಲೆ ಬಾಕ್ಸ್ ಒಪನ್ ಆಗಿರುವುದನ್ನು ನೋಡಿ ಹಿಂತೆಗೆದುಕೊಂಡು ಹೋಗುವಂತೆ ಹೇಳಿದ್ದು, ಗಲಾಟೆ ನಡೆದು ಒಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.
ಹಾಸನ ಜಿಲ್ಲೆಯಲ್ಲಿ ಐಫೋನ್ ವಿತರಿಸಲು ಬಂದಿದ್ದ ಫ್ಲಿಪ್ಕಾರ್ಟ್ ಡೆಲಿವರಿ ಪಾಲುದಾರನನ್ನು 20 ವರ್ಷದ ಯುವಕನೊಬ್ಬ ಕೊಲೆ ಮಾಡಿದ್ದಾರೆ. ತನ್ನ ಆರ್ಡರ್ ಒಪನ್ ಆಗಿರುವುದನ್ನು ನೋಡಿ ಹಣ ಪಾವತಿಸಲು ಹಿಂದೆಟು ಹಾಕಿದ್ದು, ನಂತರ ಘರ್ಷನೆ ನಡೆದು ಆರೋಪಿ ಡೆಲಿವರಿ ಮಾಡುವ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ವರದಿಯ ಪ್ರಕಾರ, ಹಾಸನ ಜಿಲ್ಲೆಯ ಅರಸೀಕೆರೆಯ ಲಕ್ಷ್ಮೀಪುರಂ ನಿವಾಸಿ ಹೇಮಂತ್ ದತ್ತ ಫೆಬ್ರವರಿ ಆರಂಭದಲ್ಲಿ ಫ್ಲಿಪ್ಕಾರ್ಟ್ ಮೂಲಕ ಐಫೋನ್ ಆರ್ಡರ್ ಮಾಡಿದ್ದಾರೆ. ಇ-ಕಾಮರ್ಸ್ ಸೈಟ್ನಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ಹೇಮಂತ್ ನಾಯಕ್ ಫೆಬ್ರವರಿ 7 ರಂದು ಆರೋಪಿಯ ಮನೆಗೆ ಫೋನ್ ತಲುಪಿಸಲು ಬಂದಿದ್ದರು.

ಫೋನ್ ಡೆಲಿವರಿ ಮಾಡುವಾಗ ಇಬ್ಬರ ನಡುವೆ ಹಣ ಪಾವತಿ ಮತ್ತು ಮೊಬೈಲ್ ಬಾಕ್ಸ್ ಒಪನ್ ಆಗಿರುವ ವಿಚಾರದಲ್ಲಿ ಜಗಳ ನಡೆದಿದ್ದು, ಹೇಮಂತ್ ದತ್ತ ಅವರು ಹೇಮಂತ್ ನಾಯಕ್ ಅವರನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಹೇಮಂತ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ದತ್ತ ಮೃತದೇಹವನ್ನು ಗೋಣಿ ಚೀಲದಲ್ಲಿ ಬಚ್ಚಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಮಾಡಿ ಎರಡು ದಿನಗಳ ನಂತರ, ಆರೋಪಿ ಹೇಮಂತ್ ದತ್ತ ಅವರು ಗೋಣಿ ಚೀಲವನ್ನು ಹತ್ತಿರದ ರೈಲ್ವೆ ಹಳಿ ಮೇಲೆ ಎಸೆದು, ಮೃತ ದೇಹವನ್ನು ಪೆಟ್ರೋಲ್ ಹಾಕಿ ಗುರುತು ಸಿಗದಂತೆ ಸುಟ್ಟುಹಾಕಿದ್ದಾರೆ.

ಮೃತರು ಫೆಬ್ರವರಿ 7 ರಿಂದ ನಾಪತ್ತೆಯಾಗಿರುವುದರಿಂದ ಅವರ ಸಹೋದರ ಮಂಜು ನಾಯ್ಕ್ ಅರಸೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ಆರೋಪಿ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications