ಹುತಾತ್ಮ ಸಂದೀಪ್ ಪಾರ್ಥೀವ ಶರೀರ: ಮಧ್ಯಾಹ್ನ ಅಂತ್ಯಕ್ರಿಯೆ
ಹಾಸನ, ಫೆಬ್ರವರಿ 1: ಜಮ್ಮು,ಕಾಶ್ಮೀರದ ಹಿಮಕುಸಿತಕ್ಕೆ ಸಿಲುಕಿ ಮರಣವನ್ನಪ್ಪಿದ ಯೋಧ ಸಂದೀಪ್ ಕುಮಾರ್ ಶೆಟ್ಟೆ ಅವರ ಪಾರ್ಥೀವ ಶರೀರ ಮಂಗಳವಾರ ತಡರಾತ್ರಿ ಅವರ ಹುಟ್ಟೂರಾದ ಹಾಸನ ಜಿಲ್ಲೆಗೆ ತುಲುಪಿದೆ. ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.
ಹಿಮಕುಸಿತದಿಂದ ಹಲವು ದಿನಗಳ ಕಾಲ ಹಿಮದಲ್ಲಿಯೇ ಇದ್ದ ಯೋಧ ಸಂದೀಪ್ ಅವರ ಪಾರ್ಥೀವ ಶರೀರವನ್ನು ಹೊರತೆಗೆದು ನವದೆಹಲಿಗೆ ತರಲಾಗಿತ್ತು. ಅಲ್ಲಿಂದ ಮಂಗಳವಾರ ತಡರಾತ್ರಿ 2.30ರ ಸುಮಾರಿಗೆ ವಿಶೇಷ ಆಂಬುಲೆನ್ಸ್ ಮೂಲಕ ಹಾಸನ ಜಿಲ್ಲಾಸ್ಪತ್ರೆಗೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಜೊತೆಗೆ ಸೇನಾ ಅಧಿಕಾರಿಗಳ ತಂಡವೂ ಇತ್ತು. ಪಾರ್ಥೀವ ಶರೀರವನ್ನು ಹಾಸನದ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಇಡಲಾಯಿತು.[ಹಾಸನದ ಹುತಾತ್ಮ ಯೋಧ ಸಂದೀಪ್ ಕುಟುಂಬಕ್ಕೆ 25 ಲಕ್ಷ ಪರಿಹಾರ]

ಮಾಹಿತಿಯಿದ್ದ ಜಿಲ್ಲಾಡಳಿತದ ಅಧಿಕಾರಿಗಳು ಸಂದೀಪ್ ಅವರ ಪಾರ್ಥೀವ ಶರೀರವನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಂದೀಪ್ ಪೋಷಕರು, ಶಾಸಕ ಎಚ್. ಎಸ್. ಪ್ರಕಾಶ್, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇಂದು(ಫೆ.1) ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಪ್ರಸ್ತುತ ಪಾರ್ಥೀವ ಶರೀರವನ್ನು ಸ್ವಗ್ರಾಮ ದೇವಿಹಳ್ಳಿಗೆ ಮೆರವಣಿಗೆ ಮುಖಾಂತರ ತೆಗೆದುಕೊಂಡು ಹೋಗಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆಯ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications