ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬುದು ಹಗಲುಗನಸು: ಎಚ್.ಡಿ.ರೇವಣ್ಣ
ಹಾಸನ, ಏಪ್ರಿಲ್ 24: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ಉರುಳಿ, ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 23 ರಂದು ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿಗೆ ಆಘಾತ ಕಾದಿದೆ ಎಂದು ಹೇಳಿದರು.
ಶ್ರೀರಾಮುಲು, ಈಶ್ವರಪ್ಪ ಅವರು ಸರ್ಕಾರ ಬೀಳುವ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಮುಲು, ಈಶ್ವರಪ್ಪ ಅವರನ್ನು ನೋಡಿ ನಾವು ರಾಜಕೀಯ ಕಲಿಯಬೇಕಿಲ್ಲ ಎಂದು ಹೇಳಿದರು.

ಲೋಕಸಭೆ ಚುನಾವಣೆ ಬಳಿಕವೂ ನಾಲ್ಕು ವರ್ಷಗಳ ಕಾಲ ನಮ್ಮ ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಅಚ್ಚರಿ ಕಾದಿದೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಾದರೆ ನೀಡಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.












Click it and Unblock the Notifications