Get Updates
Get notified of breaking news, exclusive insights, and must-see stories!

ಧರ್ಮದ ಹೆಸರಿನಲ್ಲಿ ಆತಂಕ ಸೃಷ್ಟಿಸುವವರ ಬಗ್ಗೆ ಎಚ್ಚರದಿಂದ ಇರಬೇಕು: ಸಚಿವ ಈಶ್ವರ ಖಂಡ್ರೆ

ಹಾಸನ, ಮೇ 02: ವಿಶ್ವಗುರು ಬಸವಣ್ಣನವರು ದಯೆಯೇ ಧರ್ಮದ ಮೂಲವಯ್ಯ ಎಂದು ಹೇಳಿದ್ದರು. ಆದರೆ ಇಂದು ಧರ್ಮದ ಹೆಸರಲ್ಲಿ ಆಂತಕ ಸೃಷ್ಟಿಸುವ ಕಾರ್ಯವನ್ನು ಕೆಲವರು ಮಾಡುತ್ತಿದ್ದಾರೆ. ಇದು ಆತಂಕದ ವಿಷಯ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ.ಬಿ ಖಂಡ್ರೆ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆ ಹೊಳೆ ನರಸೀಪುರದಲ್ಲಿ ವೀರಶೈವ ಲಿಂಗಾಯತ ಸಮಾಜ ಆಯೋಜಿಸಿದ್ದ ಬಸವ ಜಯಂತಿ ಮತ್ತು ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮದ ಹೆಸರಲ್ಲಿ ಆತಂಕ ಸೃಷ್ಟಿಸುವವರ ಬಗ್ಗೆ ಸಮಾಜ ಎಚ್ಚರದಿಂದ ಇರಬೇಕು ಎಂದರು.

Minister Eshwar Khandre Urges Society to Remain Vigilant Against Religious Extremism

12ನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿಯನ್ನೇ ಮಾಡಿದರೆ, 20ನೇ ಶತಮಾನದಲ್ಲಿ ಸಮಾನತೆಯ ಸಂದೇಶ ಸಾರಿ ತ್ರಿವಿಧ ದಾಸೋಹದಿಂದ ಎಲ್ಲ ಸಮುದಾಯದವರಿಗೆ ಅನ್ನ, ಆಶ್ರಯ ಮತ್ತು ಅಕ್ಷರ ಕೊಟ್ಟವರು ಡಾ.ಶ್ರೀ.ಶ್ರೀ. ಶಿವಕುಮಾರ ಸ್ವಾಮೀಜಿ ಅವರು. ವಿಶ್ವ ಗುರು ಬಸವಣ್ಣನವರು, ಕಾಯಕ, ಸಹಯೋಗ, ಸೋದರತ್ವದ ಬುನಾದಿಯ ಮೇಲೆ ಸುಂದರ ಸಮಾಜದ ನಿರ್ಮಾಣದ ಕನಸು ಕಂಡಿದ್ದರು. ಸರ್ವರಿಗೂ ಸಮಾನ ಅವಕಾಶ ಸಿಗಬೇಕು ಎಂಬ ಕನಸು ಕಂಡಿದ್ದರು ಎಂದರು.

Take a Poll

ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವುದು ಲಿಂಗಾಯತ ಸಮಾಜ. ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಂದು ಸಸ್ಯ, ಕೀಟ, ಪ್ರಾಣಿ, ಪಕ್ಷಿ ಎಲ್ಲರಿಗೂ ಬದುಕುವ ಹಕ್ಕಿದೆ. ನಾವು ಸಹಬಾಳ್ವೆಯಿಂದ ಜೀವನ ನಡೆಸುವುದನ್ನು ಕಲಿಯಬೇಕು. ನಮ್ಮ ವಚನದಲ್ಲಿ ಅನುಭಾವ ಇದೆ. ಇಂದಿನ ಮಕ್ಕಳಿಗೆ ನಮ್ಮ ತಾಯಂದಿರು ವಚನಗಳನ್ನು ಕಲಿಸಬೇಕು. ಇದು ಅವರಲ್ಲಿ ನೈತಿಕತೆ ಹೆಚ್ಚಿಸುತ್ತದೆ. ಭಾಷೆಯ ಪ್ರೌಢಿಮೆ ಬೆಳೆಸುತ್ತದೆ ಎಂದರು.

700 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ

ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಕಟ್ಟಿಕೊಟ್ಟಿದ್ದೇ ಬಸವಾದಿ ಶರಣರ 770 ಅಮರಗಣಂಗಳ ಅನುಭವ ಮಂಟಪ. ಇಲ್ಲಿ ಮಹಿಳೆಯರಿಗೂ ಸ್ಥಾನ ಮಾನ ಕಲ್ಪಿಸಲಾಗಿತ್ತು. 12ನೇ ಶತಮಾನದಲ್ಲೇ ನಮ್ಮ ಶರಣರು ಸಮಾನತೆಯನ್ನು ಕಾರ್ಯಗತ ಮಾಡಿದ್ದರು. ಈಗ ಬಸವ ಕಲ್ಯಾಣದಲ್ಲಿ 700 ಕೋಟಿ ರೂ. ವೆಚ್ಚದಲ್ಲಿ ಭವ್ಯ, ದಿವ್ಯ ಅನುಭವ ಮಂಟಪ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ ಎಂದರು.

Minister Eshwar Khandre Urges Society to Remain Vigilant Against Religious Extremism

ಭಾಲ್ಕಿ ಹಿರೇಮಠದ ಪರಮಪೂಜ್ಯ ಚನ್ನಬಸವ ಪಟ್ಟದ್ದೇವರು ಆಧುನಿಕ ಅನುಭವ ಮಂಟಪದ ನಿರ್ಮಾಣಕ್ಕೆ ನಾಂದಿ ಹಾಡಿದ್ದರು. ಈ ಹಿಂದೆ 2013ರಿಂದ 2018ರ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಸಮ್ಮತಿಸಿ ಹಣ ಬಿಡುಗಡೆ ಮಾಡಿದ್ದರು. ಇತ್ತೀಚೆಗೆ ಬೀದರ್ ಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೂ 400 ಕೋಟಿ ರೂಪಾಯಿ ಅನುದಾನ ನೀಡಿ ಮುಂದಿನ ವರ್ಷದೊಳಗೆ ಈ ಅನುಭವ ಮಂಟಪ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+