ದೇವೇಗೌಡರ ಬಳಿ ದಾಖಲೆ ಇದ್ದರೆ ಕೊಡಲಿ, ನಾನೂ ಕೊಡುವೆ: ಎ. ಮಂಜು ಸವಾಲು
ಹಾಸನ, ಜನವರಿ 26 : ಸಚಿವ ಎ.ಮಂಜು, ಎಚ್.ಡಿ. ದೇವೇಗೌಡ ಅವರ ಮಧ್ಯೆ ಕೆಲ ದಿನಗಳಿಂದ ಆರೋಪ ಪ್ರತ್ಯಾರೋಪಗಳು ನಡೆಯುತ್ತಲೇ ಇದೆ. ಅದೂ ಶುಕ್ರವಾರವೂ ಮುಂದುವರೆದಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅರೋಪದ ವಿರುದ್ಧ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದು ಉತ್ತರ ನೀಡುತ್ತೇನೆ ಎಂದು ಪಶುಸಂಗೋಪನೆ ಸಚಿವ ಎ. ಮಂಜು ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮಸ್ತಕಾಭಿಷೇಕ ಕಾಮಗಾರಿಯಲ್ಲಿ ನಾನು ಕಮಿಷನ್ ಪಡೆದಿದ್ದೇನೆ ಎಂದು ಆರೋಪ ಮಾಡಿದ್ದಾರೆ ಅದೆಲ್ಲದಕ್ಕೂ ತಕ್ಕ ಉತ್ತರ ನೀಡುತ್ತೇನೆ ಎಂದರು.
ಕಾಮಗಾರಿಯ ಎಲ್ಲಾ ದಾಖಲೆ ಬಿಡುಗಡೆ ಮಾಡುತ್ತೇನೆ, 2006ರ ಮಸ್ತಕಾಭಿಷೇಕ ಕಾಮಗಾರಿ ದಾಖಲೆಯನ್ನು ಅವರು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ದೇವೇಗೌಡರ ಆರೋಪ ನನಗೆ ನೋವು ತಂದಿದೆ. ಪತ್ರಿಕಾಗೋಷ್ಠಿಯಲ್ಲಿ ನಾನು ನಡೆದು ಬಂದ ದಾರಿ, ಹಿನ್ನೆಲೆ ಎಲ್ಲವನ್ನೂ ವಿವರಿಸುತ್ತೇನೆ.

ಚುನಾವಣೆ ಸಂದರ್ಭದಲ್ಲಿ ಸಣ್ಣ ವಿಷಯಕ್ಕೆ ಖ್ಯಾತೆ ತೆಗೆಯುತ್ತಿದ್ದಾರೆ, ನಾನು ರಾಜಕೀಯದಲ್ಲಿದ್ದಾಗ ಕುಮಾರಸ್ವಾಮಿ ರಾಜಕೀಯದಲ್ಲಿ ಇರಲಿಲ್ಲ, ಅನಾಗರಿಕ ನಾಗಿ ನಾನು ಮಾತನಾಡಿಲ್ಲ, ಅವರಂತೆ ಛಿ, ಥೂ ಅಂತ ಮಾತನಾಡಿಲ್ಲ, ಇದು ದೇಶಕ್ಕೆ, ಮತದಾರರಿಗೆ ನಾಚಿಗೇಡಿನ ವಿಷಯ, ದೇವೇಗೌಡರು ಬಾರದೇ ಹೋದರೆ ಮಸ್ತಕಾಭಿಷೇಕ ನಿಂತು ಹೋಗುತ್ತಾ ಎಂದು ಟಾಂಗ್ ನೀಡಿದರು. ಇಂಥ ಮಾತಾಡುವುದನ್ನು ನಿಲ್ಲಿಸಬೇಕು, ಇಲ್ಲವಾದರೆ ನನಗೂ ಮಾತನಾಡುವುದು ಗೊತ್ತಿದೆ ಎಂದು ತಿರುಗೇಟು ನೀಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications