ಹಾಸನ: ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ
ಹಾಸನ, ಜೂನ್.24: ಜೂನ್ 18ರಿಂದ ಕಾಣೆಯಾಗಿದ್ದ ಬಾಲಕಿಯೊಬ್ಬಳ (15) ಶವ ಹಾಸ್ಟೆಲ್ ರೂಮ್ನಲ್ಲೇ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.
ಬಾಲಕಿ ಶವ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಅನುಪಯುಕ್ತ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 10ನೇ ತರಗತಿ ಓದುತ್ತಿದ್ದ ಈ ವಿದ್ಯಾರ್ಥಿನಿ 18ರಿಂದ ಕಾಣೆಯಾಗಿದ್ದಳು ಎಂದು ಹಾಸ್ಟೆಲ್ ನ ವಾರ್ಡನ್ ನಗರ ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇದೀಗ ಹಾಸ್ಟೆಲ್ ಕೊಠಡಿಯಲ್ಲೇ ಹುಡುಗಿಯ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪೊಲೀಸರ ಪ್ರಕಾರ, ಈಕೆ ತನ್ನ ಸಹಪಾಠಿಯೊಡನೆ ನಾಲ್ವರು ಯುವಕರೊಂದಿಗೆ ಮೈಸೂರಿಗೆ ತೆರಳಿದ್ದಳು ಎನ್ನಲಾಗಿದೆ.

ಈ ಯುವಕರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಈ ಬಾಲಕಿಯ ನಾಪತ್ತೆ ಪ್ರಕರಣ ಆತಂಕ ಕೆರಳಿಸಿತ್ತು.
ಶನಿವಾರ ಸಂಜೆ ಆಕೆ ಉಳಿದುಕೊಂಡಿದ್ದ ಹಾಸ್ಟೆಲ್ ಹಿಂಭಾಗದಲ್ಲಿನ ಅನುಪಯುಕ್ತ ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಅಲ್ಲಿಗೆ ಹೋಗಿ ನೋಡಿದಾಗ ಬಾಲಕಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications