"ಏನಮ್ಮ ಲಂಚಕೊಟ್ಟರೆ ಮಾತ್ರಾನಾ ನೀನು ಕೆಲಸ ಮಾಡೋದು': ತುಂಬಿದ ಸಭೆಯಲ್ಲಿ ಪಿಡಿಓಗೆ ಶಾಸಕರ ತರಾಟೆ
ಹಾಸನ, ಅಕ್ಟೋಬರ್ 19: ಲಂಚ ತೆಗೆದುಕೊಳ್ಳುತ್ತಾರೆ ಎನ್ನುವ ಆರೋಪ ಹೊತ್ತಿರುವ ಗ್ರಾಮ ಪಂಚಾಯತ್ ಅಧಿಕಾರಿಯನ್ನು ಶಾಸಕರು ಬಹಿರಂಗ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡು ಪ್ರಶ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಶಾಸಕ ಹುಲ್ಲಹಳ್ಳಿ ಸುರೇಶ್ ನೇತೃತ್ವದಲ್ಲಿ ಬೇಲೂರು ಪಟ್ಟಣದಲ್ಲಿ ಸಾಮಾನ್ಯ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಪೂರ್ಣಿಮಾ ಕೂಡ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಅಧಿಕಾರಿಗಳ ಮುಂದೆ ಜಾವಗಲ್ ವ್ಯಾಪ್ತಿಯ ಮಹಿಳಾ ಪಿಡಿಓ ಒಬ್ಬರನ್ನು ಶಾಸಕ ಹುಲ್ಲಳ್ಳಿ ಸುರೇಶ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಮ್ಮ ಲಂಚಕೊಟ್ಟರೆ ಮಾತ್ರಾನಾ ನೀನು ಈ ಸ್ವತ್ತು ಮಾಡಿಕೊಡುವುದು, ದುಡ್ಡು ಕೊಟ್ಟರೆ ಮಾತ್ರ ಜನರ ಕೆಲಸ ಮಾಡಿಕೊಡುವುದಾ ಎಂದು ಶಾಸಕರು ಪ್ರಶ್ನಿಸಿದ್ದಾರೆ. ಎಷ್ಟು ಲಂಚ ತೆಗೆದುಕೊಂಡಿದ್ದಿಯಾ ಸಾಕ್ಷಿಯನ್ನು ಕರೆಸಲಾ..? ಎಂದು ಸಭೆಯಲ್ಲಿ ಕೇಳಿದ್ದಾರೆ.
ನನಗೆ ಕಟ್ಟ ಕಡೆಯ ವ್ಯಕ್ತಿ ಕೂಡ ಸಮಸ್ಯೆ ಹೇಳಿಕೊಂಡು ಕರೆ ಮಾಡುತ್ತಾರೆ,. ನೀನು ಯಾಕೆ ಪೋನ್ ತೆಗೆಯುವುದಿಲ್ಲ. ನಿನಗೆ ಏನು ಆಗಿದೆ. ಹಿರಿಯ ಅಧಿಕಾರಿಗಳಿಗೆ ಹೇಳದೆ ಕೆಲಸಕ್ಕೆ ರಜೆ ತೆಗೆದುಕೊಂಡಿದ್ದೀಯಾ ಎಂದು ಜಿಲ್ಲಾ ಪಂಚಾಯತಿ ಸಿಇಓ ಪೂರ್ಣಿಮಾ ಹಾಗೂ ಇತರ ಅಧಿಕಾರಿಗಳ ಎದುರು ಪ್ರಶ್ನಿಸಿದ್ದಾರೆ. ಶಾಸಕ ಹುಲ್ಲಳ್ಳಿ ಸುರೇಶ್ ಅವರ ಗರಂ ಮಾತಿನಿಂದ ಜಾವಗಲ್ ವ್ಯಾಪ್ತಿಯ ಮಹಿಳಾ ಪಿಡಿಓ ಕಕ್ಕಾಬಿಕ್ಕಿಯಾಗಿದ್ದು, ಉತ್ತರಿಸದೇ ನಿಂತಿದ್ದಾರೆ.
ರಸ್ತೆ ಸಂಚಾರಕ್ಕೆ ಅಡ್ಡಿಯಾದ ಕೊಳಚೆ ನೀರು, ಕೋಡಿಹಳ್ಳಿ ಗ್ರಾಮಸ್ಥರು ಹೈರಾಣು
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಿಂದ ಕೋಡಿಹಳ್ಳಿ ಮಾರ್ಗವಾಗಿ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪಟ್ಟಣದ ರೈಲ್ವೆ ಅಂಡರ್ ಬ್ರಿಡ್ಜ್ ಸಮೀಪ ಕೊಳಚೆ ನೀರು ಹರಿಯುತ್ತಿರುವುದರಿಂದ ಈ ಮಾರ್ಗವಾಗಿ ಸಂಚರಿಸಲು ಗ್ರಾಮಸ್ಥರು ಹರಸಾಹಸ ಪಡುವಂತಾಗಿದೆ.

ಬಿ.ಕೋಡಿಹಳ್ಳಿ, ಹೂವಿನಹಳ್ಳಿ, ಮುಂಡ್ರೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಪಟ್ಟಣದ ಮಾರ್ಗದ ಕ್ಯಾಂಪ್, ಸಜ್ಜನ್ರಾವ್ ಬಡಾವಣೆ, ಪುರಿಭಟ್ಟಿ, ಉಪ್ಪಾರ ಕ್ಯಾಂಪ್ ಬಡಾವಣೆಗಳ ಚರಂಡಿ ನೀರು ಬರುತ್ತಿದೆ. ರಸ್ತೆಗೆ ಡಕ್ ನಿರ್ಮಿಸದಿರುವುದರಿಂದ ಕೊಳಚೆ ನೀರು ಮುಂದಕ್ಕೆ ಸಾಗದೆ ಅಂಡರ್ಬ್ರಿಡ್ಜ್ ಒಳಗೆ ಬರುತ್ತಿದ್ದು, ದುರ್ವಾಸನೆ ಹಾಗೂ ಕೊಳಚೆ ತುಳಿಯುವ ಜೊತೆಗೆ ದ್ವಿಚಕ್ರ ಹಾಗೂ ಸೈಕಲ್ ಸವಾರರು ಜೀವ ಭಯದಲ್ಲಿಯೇ ಸಂಚರಿಸುತ್ತಿದ್ದಾರೆ.
ನೀರು ಹರಿಯದಂತೆ ಕ್ರಮಕೈಗೊಳ್ಳುವಂತೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನಮ್ಮ ಗ್ರಾಮಗಳಿಗೆ ತೆರಳಲು ಬೇರೆ ಯಾವುದೇ ರಸ್ತೆ ಇಲ್ಲ. ಅಲ್ಲದೆ ದೊಡ್ಡ ವಾಹನಗಳು ಇಲ್ಲಿ ಬರದಂತೆ ಅಂಡರ್ಬ್ರಿಡ್ಜ್ ಇರುವುದರಿಂದ ಬಳ್ಳಿಗನೂರು ಗ್ರಾಮದ ಮಾರ್ಗವಾಗಿ ಸಂಚರಿಸಬೇಕಾಗಿದೆ. 8 ಕಿಮೀ ಸುತ್ತಿ ನಮ್ಮ ಗ್ರಾಮ ತಲುಪಬೇಕಿದೆ. ಅಲ್ಲದೆ ಇಲ್ಲಿನ ರಸ್ತೆಯೂ ಸಂಪೂರ್ಣ ಹಾಳಾಗಿದೆ ಎಂದು ಕೋಡಿಹಳ್ಳಿ ಗ್ರಾಮದ ನಿವಾಸಿ ಸಂತೋಷ್ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications