Suraj Revanna: ಮುಂಗಾರು ಅಧಿವೇಶನಕ್ಕೂ ಮುನ್ನ ಸೂರಜ್ ರೇವಣ್ಣ ಅಮಾನತು ಸಾಧ್ಯತೆ
ಹಾಸನ ಜೂನ್ 25: ಹಾಸನದಲ್ಲಿ ಪಕ್ಷದ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಶಾಸಕರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನವೇ ಜೆಡಿಎಸ್ ಅಮಾನತು ಮಾಡಿ ರಾಜಕೀಯ ದಾಳಿಯನ್ನು ತಪ್ಪಿಸುವ ಸಾಧ್ಯತೆ ಇದೆ.
ಹೌದು... ಮುಂಗಾರು ಅಧಿವೇಶನದ ವೇಳೆ ಎದುರಾಳಿ ಪಕ್ಷಗಳ ದಾಳಿಯಿಂದ ತಪ್ಪಿಸಲು ಸೂರಜ್ ರೇವಣ್ಣ ಅವರನ್ನು ಅಮಾನತುಗೊಳಿಸಲು ಪಕ್ಷದಲ್ಲಿ ಒತ್ತಡ ಹೆಚ್ಚಾಗಿದೆ. ಹೀಗಾಗಿ ಹಿರಿಯ ನಾಯಕರು ಈ ಬಗ್ಗೆ ಚರ್ಚಿಸಲು ಸ್ವಲ್ಪ ಸಮಯ ಕೇಳಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಹೈಕಮಾಂಡ್ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಅಧಿವೇಶನದಲ್ಲಿ ಭಾಗವಹಿಸುವ ಇತರ ಸದಸ್ಯರಿಗೆ ಎದುರಾಳಿ ಪಕ್ಷದವರಿಂದ ಮುಖಭಂಗವಾಗುವುದನ್ನು ತಪ್ಪಿಸಲು ಸೂರಜ್ ರೇವಣ್ಣ ಅವರನ್ನು ಅಮಾನತುಗೊಳಿಸಲು ಒತ್ತಡಗಳು ಕೇಳಿ ಬಂದಿವೆ. ಹೀಗಾಗಿ ಅಧಿವೇಶನಕ್ಕೂ ಮುನ್ನ ಸೂರಜ್ ರೇವಣ್ಣ ಹೊರಬರಲು ವಿಫಲರಾದರೆ ಅವರನ್ನು ಅಮಾನತುಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೊರಬಾರದಿದ್ದರೆ ಅಮಾನತು ಪಕ್ಕಾ!
ಜುಲೈ ಎರಡನೇ ವಾರದಲ್ಲಿ ವಿಧಾನಮಂಡಲ ಅಧಿವೇಶನ ನಿಗದಿಯಾಗುವ ಸಾಧ್ಯತೆ ಇದೆ. ಅಷ್ಟರ ಒಳಗೆ ಸೂರಜ್ ಹೊರಬಂದರೆ ಪರವಾಗಿಲ್ಲ. ಇಲ್ಲದಿದ್ದಲ್ಲಿ ಪಕ್ಷದ ಹೈಕಮಾಂಡ್ ಅವರನ್ನು ಅಮಾನತಿನಲ್ಲಿಡಲು ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಾವ್ಯಾರೂ ಅಧಿವೇಶನದಲ್ಲಿ ಭಾಗವಹಿಸಲು ಮುಖ ಇಲ್ಲದಂತಾಗುತ್ತದೆ. ಸೂರಜ್ ರೇವಣ್ಣ ಪ್ರಕರಣ ಪ್ರತಿಸ್ಪರ್ಧಿ ಪಕ್ಷದ ಸದಸ್ಯರಿಗೆ ಪಕ್ಷವನ್ನು ಟೀಕಿಸುವ ಪ್ರಮುಖ ಅಸ್ತ್ರವಾಗಲಿದೆ ಎಂದು ಜೆಡಿ(ಎಸ್) ಶಾಸಕರೊಬ್ಬರು ಹೇಳಿದ್ದಾರೆ.

ಪ್ರಜ್ವಲ್ ಪ್ರಕರಣ
ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸೂರಜ್ ರೇವಣ್ಣ ಅವರ ಕಿರಿಯ ಸಹೋದರ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದಾಗ, ಕೆಲವು ಜೆಡಿ (ಎಸ್) ಶಾಸಕರು ಪಕ್ಷದ ಹೈಕಮಾಂಡ್ ಬಳಿ ಹೋಗಿ ಪ್ರಜ್ವಲ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು.
ಅದರಂತೆ ಪ್ರಜ್ವಲ್ ಅವರನ್ನು ಜೆಡಿಎಸ್ ನಿಂದ ಅಮಾನತುಗೊಳಿಸಲಾಗಿದೆ. ಅಂತಯೇ ಸೂರಜ್ ಪ್ರಕರಣದಲ್ಲೂ ಶಾಸಕರಿಂದ ಒತ್ತಾಯ ಹೆಚ್ಚಾಗಿದೆ. ಒಂದು ವೇಳೆ ಸೂರಜ್ ಅವರನ್ನು ಅಮಾನತುಗೊಳಿಸದೇ ಇದ್ದರೆ ಅಧಿವೇಶನದಲ್ಲಿ ವಿಪಕ್ಷಗಳು ದಾಳಿ ಪಕ್ಷ ಗುರಿಯಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿವೇಶನಕ್ಕೂ ಮುನ್ನ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು ಅಮಾನತು ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜುಲೈ 1ರವರೆಗೆ ನ್ಯಾಯಾಂಗ ಬಂಧನ
ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಂಧಿತರಾಗಿರುವ ಸೂರಜ್ ರೇವಣ್ಣ ಅವರಿಗೆ ಜುಲೈ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿದಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ಒಪ್ಪಿಸಲಾಗಿದ್ದು, ಎಲ್ಲಾ ಕೋನದಲ್ಲಿ ಕೂಡ ತನಿಖೆ ಮಾಡಲು ಮುಂದಾಗಿದೆ. ಈ ವೇಳೆ ತಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ, ದೂರು ಕೊಟ್ಟಿದ್ದ ಸಂತ್ರಸ್ತ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ಸೂರಜ್ ರೇವಣ್ಣ ಆರೋಪಿಸಿದ್ದಾರೆ.
ಹೊಳೆನರಸೀಪುರ ನಗರ ಠಾಣೆಯಲ್ಲಿ ಎಂಎಲ್ಸಿ ಅವರ ಆಪ್ತ ಶಿವಕುಮಾರ್ ಜೂನ್ 21ರಂದು ದೂರು ನೀಡಿದ್ದರು. ಶಿವಕುಮಾರ್ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್ ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications