Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ ಸಂತ್ರಸ್ತೆ ವಿರುದ್ಧ ತಿರುಗಿ ಬಿದ್ದ ಅತ್ತೆ!
ಹಾಸನ ಏಪ್ರಿಲ್ 29: ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ವಿರುದ್ಧ ಆಕೆಯ ಗಂಡನ ತಾಯಿ ತಿರುಗಿ ಬಿದ್ದಿದ್ದಾರೆ. ಇದರೊಂದಿಗೆ ಪ್ರಜ್ವಲ್ ರೇವಣ್ಣ ಕೇಸ್ ಮಹತ್ವದ ತಿರುವು ಪಡೆದುಕೊಂಡಿದೆ.
ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ಮಹಿಳೆ ವಿರುದ್ಧವೇ ಸದ್ಯ ಆಕೆಯ ಗಂಡನ ತಾಯಿ ಶಿಲ್ಪ ತಿರುಗಿ ಬಿದಿದ್ದಾರೆ. ಮಾತ್ರವಲ್ಲದೆ ಸಂತ್ರಸ್ತೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹೌದು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂತ್ರಸ್ತೆ ಅತ್ತೆ ಶಿಲ್ಪ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತೆಯ ಗಂಡನ ತಾಯಿ ಶಿಲ್ಪ, 'ಐದು ವರ್ಷದ ಹಿಂದೆ ಸುಮ್ನೆ ಇದ್ದು ದೂರು ನೀಡಿದ್ದಾರೆ. ಭಾವನಿ ಅಮ್ಮ ನಮ್ಮ ಕುಟುಂಬಕ್ಕೆ ಸಾಕಷ್ಟು ಸಹಾಯ ಮಾಡಿದ್ದಾರೆ. ಐದು ವರ್ಷದ ಬಳಿಕ ಈಗ ಅವರನ್ನು ಹೆದರಿಸಿ ಹೋಗಿ ದೂರು ನೀಡಿದ್ದಾರೆ. ಚುನಾವಣೆ ವೇಳೆ ಗೌಡರ ಮನೆಗೆ ಕಪ್ಪು ಚುಕ್ಕೆ ತರಲು ಈ ಕೆಲಸ ಮಾಡಿದ್ದಾರೆ. ಇದೆಲ್ಲ ಸುಳ್ಳು ದೂರು. ರೇವಣ್ಣ ಕುಟುಂಬ ನಮಗೆ ತುಂಬಾ ಒಳ್ಳೆದು ಮಾಡಿದೆ' ಎಂದು ಶಿಲ್ಪ ಹೇಳಿಕೊಂಡಿದ್ದಾರೆ.
'ದೂರು ನೀಡಿದ ಮಹಿಳೆ ಸರಿಯಾಗಿಲ್ಲ. ಆಕೆ ತುಂಬಾ ಸಾಲ ಮಾಡಿಕೊಂಡಿದ್ದಾಳೆ. ಜಮೀನು ಮಾರಾಟ ಮಾಡಿಕೊಂಡಿದ್ದಾಳೆ. ಗೌಡರ ಮನೆಗೆ ಕಪ್ಪು ಚುಕ್ಕೆ ತರಲು ಇಂಥಹ ಕೆಲಸ ಮಾಡಿದ್ದಾಳೆ. ಆಕೆ ಹೇಳಿರುವುದು ಸುಳ್ಳು. ಮಂಜುನಾಥ ಸ್ವಾಮಿ ಮೇಲೆ ಪ್ರಮಾಣ ಮಾಡುತ್ತೇನೆ ಗೌಡರ ಕುಟುಂಬ ತಪ್ಪು ಮಾಡಿಲ್ಲ. ನಮ್ಮ ಕಷ್ಟ-ಸುಖವನ್ನು ಭವಾನಿ ಅಮ್ಮಾ ನೋಡಿದ್ದಾರೆ. ದೂರುದಾರರ ನಡತೆ ಸರಿಯಿಲ್ಲ' ಎಂದು ಸಂತ್ರಸ್ತೆಯ ಅತ್ತೆ ಆರೋಪ ಮಾಡಿದ್ದಾರೆ.
'ಅಲ್ಲದೆ ಆಕೆ ಐದು ವರ್ಷದ ಹಿಂದೆಯೇ ಮನೆ ಬಿಟ್ಟಿದ್ದಾಳೆ. ಐದು ವರ್ಷದವರೆಗೂ ಏನು ಮಾಡುತ್ತಿದ್ದಳು. ಆಗಲೇ ದೂರು ನೀಡಬಹುದಿತ್ತಲ್ಲ. ಟೆಕ್ನಾಲಜಿ ಬಳಸಿ ಏನು ಬೇಕಾದ್ರು ಮಾಡಿರಬಹುದು. ಇಷ್ಟು ವರ್ಷ ರಾಜಕೀಯ ಮಾಡಿದ್ದಾರೆ ಒಂದು ಕಪ್ಪು ಚುಕ್ಕೆ ಇಲ್ಲ. ಭವಾನಿ ಅಕ್ಕ ಅವರಿಗೆ ತುಂಬಾ ಸಹಾಯ ಮಾಡಿದ್ದಾರೆ. ಅವರ ಮೇಲಿರುವ ಆರೋಪ ಸುಳ್ಳು. ಅವರು ಏನೂ ತಪ್ಪು ಮಾಡಿಲ್ಲ. ಅವರ ಮೇಲಿರುವ ಆರೋಪ ಸುಳ್ಳು' ಎಂದು ಶಿಲ್ಪಾ ರೇವಣ್ಣ ಹಾಗೂ ಪ್ರಜ್ವಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications