Prajwal Video selling business: ಪ್ರಜ್ವಲ್ ರೇವಣ್ಣ ವಿಡಿಯೋ ಬೇಕಾ? ಮಾರಾಟಕ್ಕಿಟ್ಟ ಕಿಡಿಗೇಡಿಗಳು....
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮಾರಾಟ ದಂಧೆ ಶುರುವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಫೋಟೋದೊಂದಿಗೆ ವಿಡಿಯೋ ಬೇಕೇ? ಎಂಬ ಪೋಸ್ಟರ್ ಹರಿದಾಡುತ್ತಿದೆ.
ಇಂತಹ ಫೋಟೋ ಪೋಸ್ಟರ್ಗಳು ಸಾಮಾಜಿಕ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿದ್ದು ಎಸ್ಐಟಿ ಅಧಿಕಾರಿಗಳು ಇದೆಲ್ಲವನ್ನೂ ಗಮನಿಸುತ್ತಿಲ್ಲ ಯಾಕೆ ಎಂದು ಜನ ಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬೇಕಾ? ಡಿಎಂ ಮಾಡಿ. ಡಿಎಂ (Direct massage) ಮಾಡುವುದರ ಜೊತೆಗೆ ಪೇಜ್ ಲೈಕ್ ಮಾಡಿ ಎಂದು ಪೋಸ್ಟರ್ ಹಾಕಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳನ್ನು ಹಂಚಿಕೆ ಮಾಡಲು ಕಿಡಿಗೇಡಿಗಳು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಹಾಸನದಲ್ಲಿ ವಿಡಿಯೋ ಹಂಚಿಕೊಳ್ಳಲು ಬಸ್ ಸ್ಟಾಪ್ ಇತರೆಡೆ ಪೆನ್ಡ್ರೈವ್ಗಳನ್ನು ಹಂಚಿಕೊಳ್ಳಲಾಗಿತ್ತು. ವಿಡಿಯೋದಲ್ಲಿ ಇರುವ ಮಹಿಳೆಯರ ಮುಖ ಕೂಡ ನೇರವಾಗಿ ತೋರಿಸಲಾಗಿತ್ತು.
ವಿಡಿಯೋ ವೈರಲ್ ಆದ ಬಳಿಕ ಅದೆಷ್ಟೋ ಮಹಿಳೆಯರು ಛೀಮಾರಿ ಹಾಕಿಸಿಕೊಂಡು ಆತ್ಮಹತ್ಯೆಗೂ ಯತ್ನಿಸಿದ್ದರು. ಇದೇ ವಿಡಿಯೋಗಳನ್ನು ಇಟ್ಟುಕೊಂಡು ಕೆಲ ಕಿಡಿಗೇಡಿಗಳು ದಂಧೆಗಿಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇರವಾಗಿ 'ಪ್ರಜ್ವಲ್ ವಿಡಿಯೋ ಬೇಕಾ?' ಎಂಬ ಪೋಸ್ಟರ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ವಿಡಿಯೋ ಇವೆ. ವಿಡಿಯೋ ಬೇಕಾದರೆ ಪೇಜ್ ಅನ್ನು ಲೈಕ್ ಮಾಡಿ. ಹಣ ಪಾವತಿ ಮಾಡಿ. ನೇರವಾಗಿ ಮೆಸೇಜ್ ಮಾಡುವ ಮೂಲಕ ವಿಡಿಯೋ ಪಡೆಯಬಹುದು ಎಂದು ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನೇರವಾಗಿ ಪೋಸ್ಟರ್ ಹಾಕಿದ್ದಾರೆ. ತಮ್ಮ ಪೇಜ್ ಲೈಕ್ ಮಾಡಲು ಹಾಗೂ ಹಣದ ಆಸೆಗೆ ಅಪರಾಧಕ್ಕಿಳಿದಿದ್ದಾರೆ.

ಅಷ್ಟೇ ಅಲ್ಲದೇ ಕೆಲ ನಟಿಯರ ಪೋಟೋ ಬಳಿಸಿಕೊಂಡು ಹಣದ ಬೇಡಿಕೆ ಇಡುತ್ತಿದ್ದಾರೆ. ಇದೆಲ್ಲದನ್ನು ಎಸ್ಐಟಿ ಗಮನಿಸುತ್ತಿಲ್ಲ ಯಾಕೆ ಎಂದು ಜನ ಸಾಮಾನ್ಯರು ಕಿಡುಕಾರುತ್ತಿದ್ದಾರೆ. ಇಂತಹ ವಿಡಿಯೋಗಳು ಸಿಗುವುದರಿಂದ ಅದೆಷ್ಟೋ ಜನ ಹಾಳಾಗುತ್ತಾರೆ. ಇಂತಹ ದಂಧೆಕೋರರನ್ನು ಬಂಧಿಸಿಬೇಕು. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ.
ಸಂತ್ರಸ್ತೆಯರಲ್ಲದೆ ತೆಲುಗು ನಾಯಕ ನಟಿಯರ ಫೋಟೋ ಕೂಡ ಪೋಸ್ಟರ್ನಲ್ಲಿ ಬಳಸಿಕೊಳ್ಳಲಾಗುತ್ತಿದೆ. ಈಗಾಗಲೇ ವಿಡಿಯೋಗಳನ್ನು ಹಂಚಿಕೊಳ್ಳದಂತೆ ಸುತ್ತೋಲೆ ಬಿಡುಗಡೆ ಮಾಡಲಾಗಿದೆ. ಆದರೂ ಹಣಕ್ಕಾಗಿ ಲೈಕ್ ಪಡೆಯಲು ಕೆಲ ಕಿಡಿಗೇಡಿಗಳು ಈ ಕೃತ್ಯಕ್ಕೆ ಇಳಿದಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಏಳು ದಿನ ಎಸ್ಐಟಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ತನಿಖೆ ಬಳಿಕಷ್ಟೇ ಎಲ್ಲಾ ಮಾಹಿತಿ ಹೊರಬೀಳಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications