ಹಾಸನ: ಮನೆಯಲ್ಲಿ ಭಾರೀ ಸ್ಫೋಟ: ದಂಪತಿಗೆ ಗಂಭೀರ ಗಾಯ
Hassan Explosion: ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಇನ್ನೂ ಈ ವೇಳೆ ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿನ ಮನೆಯವರು ಭಯಭೀತರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡ ದಂಪತಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಹೆಚ್ಚಿನ ಚಿಕಿತ್ಸೆ ಅವಶ್ಯೆಕತೆ ಇದ್ದುದರಿಂದ ಅವರನ್ಮು ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನೂ ಘಟನೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಈ ಬಗ್ಗೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿದ್ದು, ಸೆಪ್ಟೆಂಬರ್ 29ರಂದು ಸ್ಫೋಟ ಸಂಭವಿಸಿದೆ ಎಂದು ದೂರು ನೀಡಲಾಗಿದೆ. ಈ ದೂರಿನ ಅನ್ವಯ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
ದೂರುದಾರ ನೀಡಿದ ಮಾಹಿತಿ ಪ್ರಕಾರ, ಸೋಮವಾರ ರಾತ್ರಿ 8.30ರ ಸುಮಾರಿಗೆ, ಅವರು, ಅವರ ಮಗ, ಸೊಸೆ ಮತ್ತು ಮೊಮ್ಮಕ್ಕಳು ಮನೆಯಲ್ಲಿರು. ಈ ವೇಳೆ ಶೌಚಾಲಯದ ಬಳಿ ಸ್ಫೋಟದ ಶಬ್ದ ಕೇಳಿಸಿದೆ. ಆಗ ಅವರ ಮಗ ಮತ್ತು ಸೊಸೆಗೆ ತೀವ್ರ ಸುಟ್ಟ ಗಾಯಗಳಾಗಿವೆ. ಆದರೂ ಮನೆಯ ಲಾಬಿಯಲ್ಲಿದ್ದ ಕುಮಾರ್ ಮತ್ತು ಅವರ ಮೊಮ್ಮಕ್ಕಳು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.
ಸುದರ್ಶನ್ ಮತ್ತು ಕಾವ್ಯ ಅವರ ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಮತ್ತು ಇದೀಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಾವ್ಯ ಮತ್ತು ಸುದರ್ಶನ್ ಮನೆಯ ಪ್ಯಾಸೇಜ್ ಪ್ರದೇಶದಲ್ಲಿ ಏನೋ ಕೆಲಸ ಮಾಡುತ್ತಿದ್ದರ. ಅದು ಸ್ಫೋಟಕ್ಕೆ ಕಾರಣವಾಯಿತು ಮತ್ತು ದೂರುದಾರರ ಹೇಳಿಕೆಯ ಪ್ರಕಾರ, ಅದು ಸಿಲಿಂಡರ್ ಸ್ಫೋಟ ಅಥವಾ ಇನ್ಯಾವುದೋ ವಸ್ತುಗಳಾಗಿರಬಹುದು ಎಂದು ಅವರು ಶಂಕಿಸಿದ್ದಾರೆ ಎಂದು ಅಧಿಕಾರಿ ಹೇಳಿದರು ಅಂತಾ ತಿಳಿದುಬಂದಿದೆ.
ಪ್ರಾಥಮಿಕ ವಿಚಾರಣೆಯನ್ನ ಉಲ್ಲೇಖಿಸಿ, ಸುದರ್ಶನ್ ಬಿಡಿಭಾಗಗಳನ್ನು ಮಾಡುವ ಕಂಪನಿಯ ಉದ್ಯೋಗಿ ಆಗಿದ್ದಾರೆ. ಅವರು ಬಡಗಿ ಕೆಲಸವನ್ನೂ ಸಹ ಮಾಡುತ್ತಿದ್ದರು ಎಂದು ಹೇಳಿದರು. ಆದ್ದರಿಂದ, ನಾವು ನಮ್ಮ ತನಿಖೆಯನ್ನು ಸಿಲಿಂಡರ್ ಸ್ಫೋಟಕ್ಕೆ ಮಾತ್ರ ಸೀಮಿತಗೊಳಿಸುತ್ತಿಲ್ಲ. ಅಪಘಾತಕ್ಕೆ ನಿಖರವಾಗಿ ಕಾರಣವೇನೆಂದು ಕಂಡುಹಿಡಿಯಲು ರಾಸಾಯನಿಕ ಘಟಕಗಳು ಸೇರಿದಂತೆ ಸ್ಥಳದಲ್ಲಿ ಲಭ್ಯ ಇರುವ ಇತರ ಮಾದರಿಗಳನ್ನು ಸಹ ನಾವು ಸಂಗ್ರಹಿಸುತ್ತಿದ್ದೇವೆ ಎಂದು ಹೇಳಿದರು ಹೇಳಿದರು.
ಪ್ರಸ್ತುತ, ಎಫ್ಎಸ್ಎಲ್ ತಂಡ ಮತ್ತು ಹಿರಿಯ ಅಪರಾಧ ಅಧಿಕಾರಿಯೊಬ್ಬರು ಸ್ಥಳದಲ್ಲಿ ಲಭ್ಯವಿರುವ ಘಟಕಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಹೆಚ್ಚಿನ ತನಿಖೆಗಾಗಿ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಎಸ್ಪಿ ಹೇಳಿದರು. ಇನ್ನೂ ಇದಕ್ಕೆ ನಿಖರ ಕಾರಣ ಏನೆಂದು ತಿಳಿದುಬರಬೇಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications