ಯಾವ ಸಿಂಗಾಪುರನೂ ಇಲ್ಲ.. ಬಂಡೆಯಂತಹ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಶಿವಲಿಂಗೇಗೌಡ
ಹಾಸನ, ಜುಲೈ, 26: ಸರ್ಕಾರ ಬೀಳಿಸುವುದಕ್ಕೆ ಸಿಂಗಾಪುರದಲ್ಲಿ ಭಾರೀ ಕುತಂತ್ರ ಮಾಡುತ್ತಿದ್ದಾರೆ ಎನ್ನುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಚಾರಕ್ಕೆ ಹಾಸನ ಜಿಲ್ಲೆಯ ಡಿ.ಎಂ.ಕುರ್ಕೆ ಗ್ರಾಮದಲ್ಲಿ ಕೆ.ಎಂ.ಶಿವಲಿಂಗೇಗೌಡ ಪ್ರತಿಕ್ರಿಯಿಸಿ, ನೋಡಿ ಯಾವ ಸಿಂಗಾಪುರನೂ ಇಲ್ಲ.. ಏನು ಇಲ್ಲ. ಕತ್ತು ಹಿಡಿದು ದೂಕಿದರೂ ಯಾರೂ ಎಲ್ಲಿಗೂ ಹೋಗುವುದಿಲ್ಲ ಎಂದಿದ್ದಾರೆ.
135 ಜನ ಗೆದ್ದಿದ್ದು, ಸಮಸ್ಯೆಗಳಿಗೆ ಪರಿಹಾರ ಮಾತ್ರ ಕೇಳುತ್ತೇವೆ. ಇದನ್ನು ಬಿಟ್ಟರೆ ಯಾರದ್ದೂ ಚಕಾರವಿಲ್ಲ. ಮಂತ್ರಿ ಮಾಡಲಿಲ್ಲ ಎಂಬ ಕಾರಣದಿಂದ ಬಿ.ಕೆ.ಹರಿಪ್ರಸಾದ್ ತಮ್ಮ ಕಷ್ಟವನ್ನು ಸಮಾಜದ ಎದುರು ತೋಡಿಕೊಂಡಿದ್ದಾರೆ ಅಷ್ಟೇ. ಅವರು ಮುಖ್ಯಮಂತ್ರಿ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದು ಹೇಳಿರುವುದು ಬೇರೆ ರಾಜ್ಯದ ಬಗ್ಗೆ ಎಂದರು.

ಅವರೇನು ಸಿದ್ದರಾಮಯ್ಯ ಅವರನ್ನು ಇಳಿಸುವುದು ಗೊತ್ತು ಎಂದಿದ್ದಾರಾ.? ಕರ್ನಾಟಕದಲ್ಲಿ ಅಂತಹ ಪರಿಸ್ಥಿತಿ ಬಂದಿಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿನ ಬಂಡೆಯಂತಹ ಸರ್ಕಾರವನ್ನು ಯಾರೂ ಅಲ್ಲಾಡಿಸುವುದಕ್ಕೆ ಆಗುವುದಿಲ್ಲ. ಅವರ ಅವಧಿ ಇರುವವರೆಗೂ ಅವರನ್ನು ಟಚ್ ಮಾಡುವುದಕ್ಕೂ ಆಗುವುದಿಲ್ಲ ಎಂದರು.
ಅಲ್ಲದೆ ಐದು ಗ್ಯಾರಂಟಿ ಕೊಡುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದೀರಿ. ಆದರೆ ನಾವು ಗ್ಯಾರಂಟಿ ಕೊಟ್ಟು, ಬಜೆಟ್ ಅನ್ನೂ ಮಂಡನೆ ಮಾಡಲಿಲ್ವಾ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ವಿರುದ್ದ ಹರಿಹಾಯ್ದರು. ಹಾಗೆಯೇ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿರುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ಸಿದ್ದರಾಮಯ್ಯನವರಿಗೆ ಒಳ ಒಪ್ಪಂದ ಮಾಡಿಕೊಂಡು ಏನಾದ್ರೂ ಮಾಡಿಕೊಂಡರೆ ಅದು ನಮಗೆ ಗೊತ್ತಿಲ್ಲ ಎಂದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications