ಹಾಸನ: ಪ್ರಥಮ ಹಳಗನ್ನಡ ಸಾಹಿತ್ಯ ಉದ್ಘಾಟನೆ
ಹಾಸನ, ಜೂನ್ 25: ಕನ್ನಡ ಸಾಹಿತ್ಯ ಪರಿಷತ್ನಿಂದ ಆಯೋಜಿತವಾಗಿರುವ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನವು ನಿನ್ನೆ ಸಂಜೆ ಹಾಸನದ ಶ್ರವಣಬೆಳಗೋಳದಲ್ಲಿ ಆರಂಭವಾಯಿತು.
ಸಂಸದ ದೇವೇಗೌಡ ಅವರು ಸಮ್ಮೇಳನದ ಉದ್ಘಾಟನೆ ಮಾಡಿದರು. ಹಿರಿಯ ಇತಿಹಾಸಜ್ಞ, ಸಾಹಿತಿ ಡಾ.ಷ.ಷಟ್ಟರ್ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಉದ್ಘಾಟನೆ ಮಾಡಿ ಮಾತನಾಡಿದ ದೇವೇಗೌಡ ಅವರು, ಹಳಗನ್ನಡ ಕರ್ನಾಟಕದ ಬೆಳವಣಿಗೆಯ ಕುರುಹು, ಹಿಂದೆ ಗ್ರಾಮಗಳಲ್ಲಿ ಶಿಕ್ಷಕರು ಜೈಮಿನಿ ಭಾರತಗಳನ್ನು ಗ್ರಾಮಸ್ಥರಿಗೆ ಹೇಳುವ ಪರಿಪಾಠ ಇತ್ತು ಈಗ ಆ ರೀತಿಯ ವಾತಾವರಣವೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜೈನ ಸಾಹಿತ್ಯದ ಬಗ್ಗೆಯೂ ಮಾತನಾಡಿದ ಅವರು, ರಾಜರ ಕಾಲದಿಂದಲೂ ಜೈನ ಸಾಹಿತ್ಯ ಕನ್ನಡ ಸಾಹಿತ್ಯವನ್ನು ಸುಂದರಗೊಳಿಸಿದೆ. ಪಂಪ, ರನ್ನ, ಜನ್ನ, ನಾಗಚಂದ್ರರಂತಹಾ ಕವಿಗಳು ನೀಡಿದ ಕೊಡುಗೆ ಅಪಾರ ಎಂದರು.
ಹಳಗನ್ನಡದಲ್ಲಿ ನನಗೆ ಪರಿಶ್ರಮವಿಲ್ಲ ಎಂದ ಅವರು ಕುವೆಂಪು ಅವರು ತಮ್ಮ ರಾಮಾಯಣ ದರ್ಶನಂ ಕೃತಿಯಲ್ಲಿ ಹಳಗನ್ನಡ ಬಳಸಿದ್ದಾರೆ ಎಂದು ನೆನಪಿಸಿದರು. ಹಿಂದೆ ಶ್ರವಣಬೆಳಗೊಳದಲ್ಲಿಯೇ ನಡೆದ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ್ದನ್ನೂ ಅವರು ನೆನಪಿಸಿಕೊಂಡರು.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಓದುಗರ ಸಂಖ್ಯೆ ನಶಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಜೈನ ಸ್ಥಳವು ಸಾಹಿತ್ಯಕ್ಕೆ ಸ್ವಾಗತ ಕೋರುತ್ತದೆ ಎಂದು ಅವರು ಹೇಳಿದರು.
ಕ.ಸಾ.ಪ ಅಧ್ಯಕ್ಷ ಮನುಬಳಿಗಾರ್, ಸಮ್ಮೇಳನಾಧ್ಯಕ್ಷ ಮಡದಿ ಪ್ರೇಮಲತಾ ಶೆಟ್ಟರ್, ಶಾಸಕ ಸಿ.ಎನ್.ಬಾಲಕೃಷ್ಣ ವೇದಿಕೆಯಲ್ಲಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications