ರಾಜ್ಯದ ಒಟ್ಟು ಜನಸಂಖ್ಯೆಯ 4% ರಷ್ಟಿರುವ ಜಾತಿಗಳಿಗೆ 10% ಮೀಸಲಾತಿ: ಮೀಸಲಾತಿಯ ಮೂಲ ಕಲ್ಪನೆಗೆ ವಿರುದ್ಧ
ಮೀಸಲಾತಿಯ ಮೂಲ ಕಲ್ಪನೆಯು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಯುಗಯುಗಾಂತರಗಳಿಂದ ಹಿಂದುಳಿದವರಿಗೆ ಅನುಕೂಲ ಮಾಡುವುದು. ಆದರೆ, ಈಗಿನ ಆಡಳಿತವು ಮೀಸಲಾತಿಯ ಕಲ್ಪನೆಯನ್ನೇ ತಿರುಚಿದೆ.
ಹಾಸನ, ಮಾರ್ಚ್ 16: 'ಆರ್ಥಿಕವಾಗಿ ದುರ್ಬಲ ವರ್ಗಗಳ' ಅಡಿಯಲ್ಲಿರುವ ನೀಡಿರುವ ಮೀಸಲಾತಿಯು ಮೀಸಲಾತಿಯ ಮೂಲ ಕಲ್ಪನೆಗೆ ವಿರುದ್ಧವಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ. ರಾಮಚಂದ್ರಪ್ಪ ಆರೋಪಿಸಿದ್ದಾರೆ. ಇತ್ತೀಚೆಗೆ ಹಾಸನದಲ್ಲಿ ಮಾವಳ್ಳಿ ಶಂಕರ್, ಬಿ.ಶ್ರೀಪಾದ್ ಭಟ್ ಮತ್ತು ವಿಕಾಸ್ ಆರ್.ಮೌರ್ಯ ಸಂಪಾದಿಸಿರುವ ಇಡಬ್ಲ್ಯೂಎಸ್ 10% ಮಹಾವಾಂಚನೆ ಪುಸ್ತಕವನ್ನು ಬಿಡುಗಡೆ ಮಾಡಿದರು.
"ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆಯಿಲ್ಲದೆ ಈ ಮೀಸಲಾತಿಯನ್ನು ಜಾರಿಗೊಳಿಸಿದೆ. ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಕೇವಲ ಶೇಕಡಾ 4 ರಷ್ಟಿರುವ ಈ ಜಾತಿಗಳು 10% ಮೀಸಲಾತಿಯನ್ನು ಅನುಭವಿಸುತ್ತವೆ. ಯಾರೂ ಕೇಳದಿದ್ದರೂ ಸರ್ಕಾರ ಈ ಮೀಸಲಾತಿಯನ್ನು ಘೋಷಿಸಿದೆ. ಮೀಸಲಾತಿಯ ಮೂಲ ಕಲ್ಪನೆಯು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಯುಗಯುಗಾಂತರಗಳಿಂದ ಹಿಂದುಳಿದವರಿಗೆ ಅನುಕೂಲ ಮಾಡುವುದು. ಆದರೆ, ಈಗಿನ ಆಡಳಿತವು ಮೀಸಲಾತಿಯ ಕಲ್ಪನೆಯನ್ನೇ ತಿರುಚಿದೆ" ಎಂದು ಆರೋಪಿಸಿದ್ದಾರೆ.

"ಈಗಾಗಲೇ ಈ ವಿಷಯದ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯಬೇಕಿತ್ತು. ಈ ಮೀಸಲಾತಿ ಕೋಟಾವು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಕರಡು ರಚಿಸುವಾಗ ಕಲ್ಪಿಸಿಕೊಂಡಿದ್ದಕ್ಕೆ ವಿರುದ್ಧವಾಗಿದೆ. ಈ ಕೋಟಾ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಅಲ್ಲ" ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ದಶಕಗಳಿಂದ ಮೀಸಲಾತಿಯನ್ನು ವಿರೋಧಿಸಿದ ಜನರು ಈಗ ಇಡಬ್ಲ್ಯೂಎಸ್ ಕೋಟಾದ ಅಡಿಯಲ್ಲಿ ಅದರ ಲಾಭವನ್ನು ಪಡೆಯುತ್ತಿದ್ದಾರೆ. 95% ಜನಸಂಖ್ಯೆಯು ಕೇವಲ 50% ಮೀಸಲಾತಿಯನ್ನು ಪಡೆಯುತ್ತಿದ್ದರೆ, ಜನಸಂಖ್ಯೆಯ ಕೇವಲ 4% ರಷ್ಟಿರುವ ಈ ಮೇಲ್ಜಾತಿಗಳು 10% ಕೋಟಾವನ್ನು ಅನುಭವಿಸುತ್ತಿವೆ. ಇದು ಸಾಮಾಜಿಕ ನ್ಯಾಯದ ಮೂಲ ಕಲ್ಪನೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಅಧ್ಯಕ್ಷ ಮಾವಳ್ಳಿ ಶಂಕರ್, ಸಾಹಿತಿ ಶ್ರೀಪಾದ್ ಭಟ್, ಮಾನವ ಬಂಧುತ್ವ ವೇದಿಕೆಯ ಕೆ.ಎಸ್. ಸತೀಶ್ಕುಮಾರ್, ಡಿಎಸ್ಎಸ್ನ ಅಂಬುಗ ಮಲ್ಲೇಶ್, ಕವಿವಿ ಶಾಂತಾ ಅತ್ನಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ 2016 ರಲ್ಲಿ ಹೈದರಾಬಾದ್ನಲ್ಲಿ ಸಾವಿಗೆ ಶರಣಾದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಅವರನ್ನು ಆಧರಿಸಿದ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications