Pen Drive Case: ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಮೇ 30ಕ್ಕೆ ಹಾಸನ ಚಲೋ ಹೋರಾಟ!
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 30ಕ್ಕೆ ಹಾಸನ ಚಲೋ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಈ ಹೋರಾಟ ನಡೆಯಲಿದೆ.
ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್ನ್ನೊಂದಿಗೆ ಬೃಹತ್ ಹೋರಾಟ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಪೋಸ್ಟರ್ಗಳನ್ನೂ ಬಿಡುಗಡೆ ಮಾಡಲಾಗಿದೆ. ಸಂಘಟನೆಯ ಮುಖಂಡ ದರ್ಮೇಶ್ ಇಂದು ಹಾಸನ ಚಲೋ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ಮೇ 30ಕ್ಕೆ ಬೃಹತ್ ಹೋರಾಟ ನಡೆಯಲಿದೆ. ಇದರಲ್ಲಿ ಅನೇಕ ಹೋರಾಟಗಾರರು, ಸಾಹಿತಿಗಳು, ಚಿಂತಕರು ಹಾಗೂ ಪ್ರಗತಿಪರರು ಸೇರಿ ಸಹಸ್ರಾರು ಜನರು ಭಾಗಿಯಾಗಲಿದ್ದಾರೆ ಎಂದರು.

ಅಲ್ಲದೆ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು. ವೀಡಿಯೋ ಹಂಚಿಕೆಯ ಷಡ್ಯಂತ್ರ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಈ ಹೋರಾಟ ನಡೆಯಲಿದೆ ಎಂದು ಅವರು ಹೇಳಿದರು. ಪೆನ್ಡ್ರೈವ್ ವಿಚಾರ ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶದಲ್ಲೂ ವ್ಯಾಪಕವಾಗಿ ಹರಿದಾಡುತ್ತಿದೆ. ಇದರಿಂದ ಹಾಸನದ ಗೌರವ ಹಾಳಾಗಿದೆ. ಇದನ್ನು ಉಳಿಸಲು ನಮ್ಮ ಹೋರಾಟ ನಡೆಯಲಿದೆ ಎಂದು ಅವರು ಹೇಳಿದರು.
ಅಲ್ಲದೆ ಈ ಹೋರಾಟದಲ್ಲಿ ಅಂಗನವಾಡಿ, ಬಿಡಿಯೂಟ, ಆಶಾ ಕಾರ್ಯಕರ್ತೆಯರು ಭಾಗವಹಿಸುವುದಾಗಿ ಹೇಳಿದ್ದಾರೆ. ಆದರೆ ಕೆಲವರು ಈ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ದರ್ಮೇಶ್ ಕಿಡಿ ಕಾರಿದರು.
ಹೆಚ್ಡಿ ಕುಮಾರಸ್ವಾಮಿ ಅವರು ಇದು ಸರ್ಕಾರಿ ಪ್ರಯೋಜಿತ ಹೋರಾಟ ಎಂದು ಹೇಳಿದ್ದಾರೆ. ಇದು ಬೇಜವಬ್ದಾರಿ ಹೇಳಿಕೆ. ಅವರು ಹಾಗಿದ್ದರೆ ಮಹಿಳೆಯರ ಪರವಾಗಿ ಇಲ್ಲವೇ? ಇಷ್ಟೊಂದು ಹಗರಣ ಆಗಿರುವಾಗ ಅವರು ಈ ಹೇಳಿಕೆಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ ಎಂದು ದರ್ಮೇಶ್ ಅವರು ಆಕ್ರೋಶಗೊಂಡರು.

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದು, ಈ ವಿಡಿಯೋಗಳಲ್ಲಿ ಪ್ರಜ್ವಲ್ ಅವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಅವರನ್ನು ಬಂಧಿಸಬೇಕು ಎನ್ನುವ ಒತ್ತಡ ಹೆಚ್ಚಾಗಿದೆ. ಇದರಿಂದಾಗಿ ಸರ್ಕಾರ ಎಸ್ಐಟಿ ತಮಡವನ್ನು ರಚನೆ ಮಾಡಿದೆ.
ಆದರೆ ಪನ್ಡ್ರೈವ್ ವಿಚಾರ ಹೊರಬೀಳುತ್ತಿದ್ದಂತೆ ಅಂದರೆ ಹಾಸನ ಲೋಕಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಪ್ರಜ್ವಲ್ ಅವರ ವಿರುದ್ಧ ದೂರು ನೀಡಿದ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೀಗ ಅವರು ಹೊರಬಂದಿದ್ದಾರೆ.
ಆದರೆ ಪ್ರಕರಣದ ಮುಖ್ಯ ಆರೋಪ ಪ್ರಜ್ವಲ್ ಜರ್ಮನ್ಗೆ ತೆರಳಿದ್ದಾರೆ ಎನ್ನುವ ಮಾಹಿತಿ ಇದೆ. ಪ್ರಜ್ವಲ್ಗೆ ನೋಟೀಸ್ ಜಾರಿ ಮಾಡಿದರೂ ಅವರು ವಾಪಾಸ್ಸಾಗದ ಕಾರಣ ಅವರ ಮೇಲಿರುವ ಅನುಮಾನ ಹೆಚ್ಚಾಗಿದೆ. ಹೀಗಾಗಿ ಅವರನ್ನು ತಕ್ಷಣ ಕರೆಸಬೇಕು ವಿಚಾರಣೆ ನಡೆಸಬೇಕು ಎನ್ನುವ ಒತ್ತಡಗಳು ಹೆಚ್ಚಾಗಿವೆ.
ಮತ್ತೊಂದೆಡೆ ಹಾಸನ ಲೋಕಸಬಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ವಿದೇಶದಿಂದ ವಾಪಸ್ ಆಗುತ್ತಾರೆನ್ನುವ ಮಾತುಗಳು ಕೇಳಿ ಬಂದಿವೆ. ಇಲ್ಲದಿದ್ದರೆ ಅವರು ತಡವಾಗಬಹುದು ಎನ್ನುವ ಗುಮಾನಿಗಳೂ ಹಬ್ಬಿ. ಒಟ್ಟಿನಲ್ಲಿ ಪ್ರಕರಣ ತೀವ್ರತೆ ಪಡೆದುಕೊಂಡಿದ್ದು ಎಸ್ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಕರೆಸುವ ಸಾಧ್ಯತೆಗಳು ಇವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications