ಹಾಸನ : ಗ್ರಹಣ ನೋಡುತ್ತಾ ಉಪ್ಪಿಟ್ಟು, ಪುರಿ ಸವಿದ ಜನರು
ಹಾಸನ, ಡಿಸೆಂಬರ್ 26 : ಹಾಸನ ಜಿಲ್ಲೆಯಲ್ಲಿ ಸೂರ್ಯಗ್ರಹಣ ವೀಕ್ಷಣೆ ಚಟುವಟಿಕೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡರು. ನಗರದಲ್ಲಿ ಶೇ. 91.6 ರಷ್ಟು ಗ್ರಹಣ ಗೋಚರವಾಯಿತು. ಕಂಕಣಸೂರ್ಯ ಗ್ರಹಣವನ್ನು ಜನರು ಕಣ್ತುಂಬಿಕೊಂಡರು.
ಗುರುವಾರ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ರಹಣ ವೀಕ್ಷಣೆಗೆ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಹಲವು ವಿಜ್ಞಾನ ಮಾದರಿಗಳು, ಬ್ಯಾನರ್ಗಳ ಮೂಲಕ ಗ್ರಹಣದ ಮಹತ್ವವನ್ನು ವೈಜ್ಞಾನಿಕ ವಿಶ್ಲೇಷಣೆ ಮಾಡಿ ಜನವರಿಗೆ ವಿವರಿಸಲಾಯಿತು.
ಗ್ರಹಣ ವೀಕ್ಷಣೆಗೆ ಬಂದಿದ್ದ ಜನರಿಗೆ ಉಪ್ಪಿಟ್ಟು, ಪುರಿ ವಿತರಿಸುವ ಮೂಲಕ ಗ್ರಹಣ ಕಾಲದಲ್ಲಿ ಉಟೋಪಚಾರ ಮಾಡುವುದರಿಂದ ಆಹಾರದಲ್ಲಿ ಯಾವುದೇ ವಿಷಾಂಶ ಉತ್ಪತ್ತಿಯಾಗುವುದಿಲ್ಲ, ಆರೋಗ್ಯದಲ್ಲಿ ವ್ಯತ್ಯಾಸ ಆಗುವುದಿಲ್ಲ ಎಂದು ಜಾಗೃತಿ ಮೂಡಿಸಲಾಯಿತು.

ನೂರಾರು ಜನರು, ಮಕ್ಕಳು ಅತ್ಯುತ್ಸಾಹದಿಂದ ಗ್ರಹಣ ವೀಕ್ಷಿಸಿದರು. ಮೊಡ ಆಗಾಗ ಕಣ್ಣಾ ಮುಚ್ಚಾಲೆ ಆಡುತ್ತಿದ್ದರೂ ಹಾಸನದಲ್ಲಿ ಶೇ.91.6 ರಷ್ಟು ಗ್ರಹಣ ಗೋಚರವಾಯಿತು.
ಭಾರತ ಜ್ಞಾನ ವಿಜ್ಞಾನ ಸಮಿತಿ ಒಂದು ವಾರದಿಂದ ಜಿಲ್ಲೆಯಾದ್ಯಾಂತ ಗ್ರಹಣ ಪಯಣ ಜಾಗೃತಿ ವಾಹನ ಜಾಥಾ ನಡೆಸಿ ಸಾರ್ವಜನಿಕರಿಗೆ ಮೂಡನಂಬಿಕೆಗಳಿಂದ ದೂರ ಉಳಿಯುವಂತೆ ಅರಿವು ಮೂಡಿಸಿತ್ತು.
ಜಿಲ್ಲೆಯ ಸುಮಾರು 100 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರಹಣದ ಬಗ್ಗೆ ಅರಿವು ಮೂಡಿಸಲಾಯಿತು. ಅಲ್ಲದೆ ಜಿಲ್ಲೆಯಲ್ಲಿ ಗ್ರಹಣ ವೀಕ್ಷಣೆಗೆ ಸುಮಾರು 15,000 ಸೋಲಾರ್ ಫಿಲ್ಟರ್ ಕನ್ನಡಕಗಳನ್ನು ಮಾರಾಟ ಮಾಡಲಾಗಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications