ಹಾಸನ : ಗ್ರಹಣ ನೋಡುತ್ತಾ ಉಪ್ಪಿಟ್ಟು, ಪುರಿ ಸವಿದ ಜನರು
ಹಾಸನ, ಡಿಸೆಂಬರ್ 26 : ಹಾಸನ ಜಿಲ್ಲೆಯಲ್ಲಿ ಸೂರ್ಯಗ್ರಹಣ ವೀಕ್ಷಣೆ ಚಟುವಟಿಕೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡರು. ನಗರದಲ್ಲಿ ಶೇ. 91.6 ರಷ್ಟು ಗ್ರಹಣ ಗೋಚರವಾಯಿತು. ಕಂಕಣಸೂರ್ಯ ಗ್ರಹಣವನ್ನು ಜನರು ಕಣ್ತುಂಬಿಕೊಂಡರು.
ಗುರುವಾರ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ರಹಣ ವೀಕ್ಷಣೆಗೆ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಹಲವು ವಿಜ್ಞಾನ ಮಾದರಿಗಳು, ಬ್ಯಾನರ್ಗಳ ಮೂಲಕ ಗ್ರಹಣದ ಮಹತ್ವವನ್ನು ವೈಜ್ಞಾನಿಕ ವಿಶ್ಲೇಷಣೆ ಮಾಡಿ ಜನವರಿಗೆ ವಿವರಿಸಲಾಯಿತು.
ಗ್ರಹಣ ವೀಕ್ಷಣೆಗೆ ಬಂದಿದ್ದ ಜನರಿಗೆ ಉಪ್ಪಿಟ್ಟು, ಪುರಿ ವಿತರಿಸುವ ಮೂಲಕ ಗ್ರಹಣ ಕಾಲದಲ್ಲಿ ಉಟೋಪಚಾರ ಮಾಡುವುದರಿಂದ ಆಹಾರದಲ್ಲಿ ಯಾವುದೇ ವಿಷಾಂಶ ಉತ್ಪತ್ತಿಯಾಗುವುದಿಲ್ಲ, ಆರೋಗ್ಯದಲ್ಲಿ ವ್ಯತ್ಯಾಸ ಆಗುವುದಿಲ್ಲ ಎಂದು ಜಾಗೃತಿ ಮೂಡಿಸಲಾಯಿತು.

ನೂರಾರು ಜನರು, ಮಕ್ಕಳು ಅತ್ಯುತ್ಸಾಹದಿಂದ ಗ್ರಹಣ ವೀಕ್ಷಿಸಿದರು. ಮೊಡ ಆಗಾಗ ಕಣ್ಣಾ ಮುಚ್ಚಾಲೆ ಆಡುತ್ತಿದ್ದರೂ ಹಾಸನದಲ್ಲಿ ಶೇ.91.6 ರಷ್ಟು ಗ್ರಹಣ ಗೋಚರವಾಯಿತು.
ಭಾರತ ಜ್ಞಾನ ವಿಜ್ಞಾನ ಸಮಿತಿ ಒಂದು ವಾರದಿಂದ ಜಿಲ್ಲೆಯಾದ್ಯಾಂತ ಗ್ರಹಣ ಪಯಣ ಜಾಗೃತಿ ವಾಹನ ಜಾಥಾ ನಡೆಸಿ ಸಾರ್ವಜನಿಕರಿಗೆ ಮೂಡನಂಬಿಕೆಗಳಿಂದ ದೂರ ಉಳಿಯುವಂತೆ ಅರಿವು ಮೂಡಿಸಿತ್ತು.
ಜಿಲ್ಲೆಯ ಸುಮಾರು 100 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರಹಣದ ಬಗ್ಗೆ ಅರಿವು ಮೂಡಿಸಲಾಯಿತು. ಅಲ್ಲದೆ ಜಿಲ್ಲೆಯಲ್ಲಿ ಗ್ರಹಣ ವೀಕ್ಷಣೆಗೆ ಸುಮಾರು 15,000 ಸೋಲಾರ್ ಫಿಲ್ಟರ್ ಕನ್ನಡಕಗಳನ್ನು ಮಾರಾಟ ಮಾಡಲಾಗಿತ್ತು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications