ಕೊಡಗು, ಹಾಸನ, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಈಶ್ವರ ಖಂಡ್ರೆ
ಹಾಸನ, ಮಾರ್ಚ್ 04: ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ ಅರಣ್ಯದ ಹೊರಗೆ ನೆಲೆಸಿರುವ 200 ಆನೆಗಳನ್ನು ಹಿಡಿದು, ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲುದ್ದೇಶಿಸಿರುವ ಆನೆ ಧಾಮಕ್ಕೆ ಕಳುಹಿಸಿದಲ್ಲಿ ಈ ಮೂರು ಜಿಲ್ಲೆಗಳ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ತಿಳಿಸಿದ್ದಾರೆ.
ಬೇಲೂರು ಪಟ್ಟಣದ ಆರ್.ವಿ. ಕಲ್ಯಾಣ ಮಂಟಪದಲ್ಲಿಂದು ಆನೆ -ಮಾನವ ಸಂಘರ್ಷ ಇರುವ ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಕಾಫಿ ಬೆಳೆಗಾರರು, ತೋಟದ ಬೆಳೆಗಾರರು, ರೈತರು ಮತ್ತು ಗ್ರಾಮಸ್ಥರ ಮುಕ್ತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಆಯವ್ಯಯದಲ್ಲಿ ಆನೆ ಧಾಮದ ಘೋಷಣೆಯನ್ನು ಮುಖ್ಯಮಂತ್ರಿಯವರು ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವನ್ಯಜೀವಿಗಳಿಂದ ಅದರಲ್ಲೂ ಆನೆಗಳಿಂದ ಮಾನವರ ಜೀವ ಮತ್ತು ರೈತರ ಬೆಳೆಗೆ ಆಗುತ್ತಿರುವ ಹಾನಿ ತಡೆಗೆ ಅಂತರ ಜಿಲ್ಲಾ ಸಮನ್ವಯತೆ ಮತ್ತು ತಂತ್ರಜ್ಞಾನದ ಸಮರ್ಥ ಬಳಕೆ ಅಗತ್ಯವಾಗಿದೆ ಎಂದು ಹೇಳಿದರು.
ವನ್ಯಜೀವಿ ದಾಳಿಯಿಂದ ಗಾಯಗೊಂಡು ವಿಕಲಾಂಗರಾಗುವವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಬೇಡಿಕೆ ಇದೆ, ಈ ಬಗ್ಗೆ ಪರಿಶೀಲಿಸಲಾಗುವುದು. ಅದೇ ರೀತಿ ಬೆಳೆ ಹಾನಿಗೆ ಶೀಘ್ರ ಪರಿಹಾರ ಪಾವತಿಸುವ ವ್ಯವಸ್ಥೆ ಜಾರಿಗೆ ತರಲು ವ್ಯವಸ್ಥೆ ರೂಪಿಸಲಾಗುವುದು ಎಂದರು.
ಇಂದು ವಿಶ್ವ ವನ್ಯಜೀವಿ ದಿನವಾಗಿದ್ದು, ಕಾಡು ಪ್ರಾಣಿಗಳ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ದಿನವಾಗಿದೆ. ಅದೇ ದಿನ ವನ್ಯಜೀವಿಗಳಿಂದ ಮಾನವರ ಅಮೂಲ್ಯ ಜೀವ ರಕ್ಷಿಸಲು ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವ ಸಲುವಾಗಿ ಈ ಸಭೆ ನಡೆಸಲಾಗುತ್ತಿದೆ. ವನ್ಯಜೀವಿ ಸಂರಕ್ಷಣಾ ಕಾಯಿದೆ ಬಂದ ನಂತರ ಪ್ರಾಣಿಬೇಟೆ ನಿಷೇಧಿಸಲಾಗಿದೆ. ವನ್ಯ ಜೀವಿಗಳ ಸಂರಕ್ಷಣೆ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ ಎಂದರು.
ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವನಪ್ರದೇಶ ವಿಭಜನೆಯಾಗಿರುವುದು ಕೂಡ ಆನೆ, ಮಾನವ ಸಂಘರ್ಷ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಒಟ್ಟಾರೆ ವನ್ಯ ಜೀವಿಗಳಿಂದ ಅಮೂಲ್ಯವಾದ ಮಾನವ ಜೀವಕ್ಕೆ ಹಾನಿ ಆಗುವುದನ್ನು ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ ಕಳೆದ 2 ವರ್ಷದಲ್ಲಿ 7 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಸಾಮಾನ್ಯವಾಗಿ ಗುಂಪಿನ ನೇತತ್ವ ವಹಿಸುವ ಹೆಣ್ಣಾನೆ ಗುರುತಿಸಿ ರೇಡಿಯೋ ಕಾಲರ್ ಅಳವಡಿಸಿದರೆ, ಆನೆಗಳ ಚಲನವಲನದ ಬಗ್ಗೆ ನಿಗಾ ಇಡಲು ಅನುಕೂಲವಾಗುತ್ತದೆ. ಪ್ರಸ್ತುತ ದೇಶೀಯವಾಗಿ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಿದ್ದು, ಹೆಚ್ಚಿನ ರೇಡಿಯೋ ಕಾಲರ್ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದರು.
ಆನೆಗಳ ಚಲನವಲನದ ಬಗ್ಗೆ ಜಿಲ್ಲಾಡಳಿತ, ಪಂಚಾಯಿತಿ ಮತ್ತು ಸಂಬಂಧಿತ ಗ್ರಾಮದ ಜನರಿಗೆ ಮಾಹಿತಿ ನೀಡಲು ವಾಟ್ಸ್ ಅಪ್ ಗ್ರೂಪ್ ರಚಿಸಲು ಕೂಡ ಸೂಚಿಸಲಾಗಿದೆ. ಈ ಮೂಲಕ ಜನರನ್ನು ಎಚ್ಚರಿಸಿದರೆ ಸಾವಿನ ಸಂಖ್ಯೆ ತಡೆಯಬಹುದು ಎಂದು ಈಶ್ವರ ಖಂಡ್ರೆ ಹೇಳಿದರು.ಆನೆಗಳ ಸಂಸತಿ ನಿಯಂತ್ರಿಸಲು ಸಂತಾನಹರಣ ಪ್ರಕ್ರಿಯೆ ನಡೆಸಬೇಕು ಎಂಬ ಸಲಹೆ ಬಂದಿದೆ. ಈ ನಿಟ್ಟಿನಲ್ಲಿ ಭಾರತೀಯ ವಿಜ್ಞಾನ ಮಂದಿರ (ಐಐಎಸ್.ಸಿ)ಕ್ಕೆ ಜಾಗತಿಕವಾಗಿ ಆನೆಗಳ ಸಂತಾನ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಅಧ್ಯಯನ ನಡೆಸುವ ಹೊಣೆ ನೀಡಲಾಗಿದೆ. ಅಧ್ಯಯನ ವರದಿ ಬಂದ ಬಳಿಕ ಸುಪ್ರೀಂಕೋರ್ಟ್ ತೀರ್ಪು, ವನ್ಯ ಜೀವಿ ಸಂರಕ್ಷಣಾ ಕಾಯಿದೆ ನಿಯಮಾವಳಿಗಳ ರೀತ್ಯ ಕ್ರಮ ವಹಿಸಲಾಗುವುದು ಎಂದರು.
ಇದರ ಜೊತೆಗೆ ಆನೆಗಳಿಗೆ ಕಾಡಿನಲ್ಲಿ ಆಹಾರ ಮತ್ತು ನೀರಿನ ವ್ಯವಸ್ಥೆ ಆದಲ್ಲಿ, ಅವು ನಾಡಿಗೆ ಬರುವುದಿಲ್ಲ ಎಂಬ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಕಾಡಿನಲ್ಲಿ ಹಂತ ಹಂತವಾಗಿ ನೀಲಗಿರಿ ಮತ್ತು ಅಕೇಶಿಯಾ ಮರಗಳನ್ನು ತೆರವು ಮಾಡಿ, ಆನೆಗಳಿಗೆ ಪ್ರಿಯವಾದ ಬಿದಿರು, ಬೈನೆ, ವಾಟೆ, ಹಲಸು, ಹುಲ್ಲು ಇತ್ಯಾದಿ ಮರ ಬೆಳೆಸಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕರುಗಳಾದ ರಾಜೇಗೌಡ, ಎಚ್.ಕೆ. ಸುರೇಶ್, ಸಿಮೆಂಟ್ ಮಂಜು, ಮಾಜಿ ಸಚಿವ ಬಿ. ಶಿವರಾಂ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications