ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕಕ್ಕೆ ಜರ್ಮನ್ ಅಟ್ಟಣಿಗೆ ಬಳಕೆ
Recommended Video

ಶ್ರವಣ ಬೆಳಗೊಳ, ಜನವರಿ 23: ಮುಂದಿನ ತಿಂಗಳು ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿರುವ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ಮಹಾಮಜ್ಜನಕ್ಕೆ ಇದೇ ಮೊದಲ ಬಾರಿಗೆ ಜರ್ಮನ್ ತಂತ್ರಜ್ಞಾನ ಬಳಸಿ ಅಟ್ಟಣಿಗೆಯನ್ನು ನಿರ್ಮಿಸುತ್ತಿರುವುದು ವಿಶೇಷವಾಗಿದೆ.
ದೂರದಿಂದ ಬರುವ ಯಾತ್ರಾರ್ಥಿಗಳ ವಸತಿಗೆ ಸಂಬಂಧಿಸಿದಂತೆ ತ್ಯಾಗಿ ನಗರ, ಕಳಶ ನಗರ 1 ಮತ್ತು 2, ಪಂಚ ಕಲ್ಯಾಣ ನಗರ, ಯಾತ್ರಿ ನಗರ, ಸ್ವಯಂ ಸೇವಕರ ನಗರ ಹೀಗೆ ಎಲ್ಲಾ ಕ್ಷೇತ್ರದವರನ್ನೊಳಗೊಂಡ 12 ಉಪ ನಗರಗಳನ್ನು ನಿರ್ಮಾಣ ಮಾಡಲಾಗಿದೆ. ಈ ನಗರಗಳು ಸಕಲ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು, 600 ಎಕರೆಗಿಂತ ಹೆಚ್ಚಿನ ಪ್ರದೇಶದಲ್ಲಿ ಇವು ನಿರ್ಮಾಣವಾಗಿವೆ.

ಸಕಲ ಸೌಲಭ್ಯಗಳ 12 ಉಪನಗರ
ಈ ಉಪ ನಗರಗಳಲ್ಲಿ ಯಾತ್ರಾರ್ಥಿಗಳಿಗೆ ಅಗತ್ಯ ಶೌಚಾಲಯ, ಸ್ನಾನಗೃಹ, ಆಸ್ಪತ್ರೆ, ಪೊಲೀಸ್ ಠಾಣೆ, ಕುಡಿಯುವ ನೀರಿನ ಕೇಂದ್ರ ಸೇರಿದಂತೆ ಊಟದ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ.

ಜರ್ಮನ್ ತಂತ್ರಜ್ಞಾನ ಬಳಸಿ ಅಟ್ಟಣಿಗೆ ನಿರ್ಮಾಣ
ವಿಂಧ್ಯಗಿರಿ ಬೆಟ್ಟದ ಮೇಲೆ ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕಕ್ಕೆ ಜರ್ಮನ್ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿರುವ ಅಟ್ಟಣಿಗೆಯಲ್ಲಿ ಸುಮಾರು 5,500 ಜನ ಕುಳಿತು ಬಾಹುಬಲಿ ಮೂರ್ತಿಯ ಅಭಿಷೇಕದ ದೃಶ್ಯವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಈ ಅಟ್ಟಣಿಗೆ ನಿರ್ಮಾಣದ ಜತೆಗೆ ಮೂರು ನವೀನ ರೀತಿಯ ಲಿಫ್ಟ್ ಗಳನ್ನು ಕೂಡ ನಿರ್ಮಿಸಲಾಗಿದೆ.

ನೂರಾರು ಕೋಟಿ ಖರ್ಚು
ಮಹಾಮಸ್ತಕಾಭಿಷೇಕದ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರ 175 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದು, ಇದರ ಜತೆಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳಿಗೆ 89 ಕೋಟಿ ರೂ. ಖರ್ಚು ಮಾಡಲಾಗಿದೆ.
ಶ್ರವಣಬೆಳಗೊಳಕ್ಕೆ ಹತ್ತಿರವಿರುವ ಜನಿವಾರ ಕೆರೆಯಲ್ಲಿ ದೋಣಿ ವಿಹಾರ ಕೇಂದ್ರ ಅಭಿವೃದ್ಧಿಪಡಿಸಲಾಗಿದೆ. ಯಾತ್ರಾರ್ಥಿಗಳ ಸಾರಿಗೆ ಸಂಪರ್ಕಕ್ಕಾಗಿ 200 ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಜತೆಗೆ 23 ರೈಲುಗಳನ್ನು ಈ ಸಂದರ್ಭದಲ್ಲಿ ಓಡಿಸಲು ರೈಲ್ವೇ ಇಲಾಖೆಗೆ ಮನವಿ ಮಾಡಲಾಗಿದೆ.

1081-2018
ಶ್ರವಣಬೆಳಗೊಳದಲ್ಲಿ ಬಾಹುಬಲಿ ಮೂರ್ತಿಗೆ ಮಹಾಮಸ್ತಕಾಭಿಷೇಕ ಕ್ರಿ.ಶ 1081 ರಲ್ಲಿ ಪ್ರಾರಂಭವಾಗಿದ್ದು ಈಗ ನಡೆಯುತ್ತಿರುವುದು 88ನೇ ಮಹಾಮಸ್ತಕಾಭಿಷೇಕವಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications