ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕಕ್ಕೆ ಜರ್ಮನ್ ಅಟ್ಟಣಿಗೆ ಬಳಕೆ
Recommended Video

ಶ್ರವಣ ಬೆಳಗೊಳ, ಜನವರಿ 23: ಮುಂದಿನ ತಿಂಗಳು ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿರುವ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ಮಹಾಮಜ್ಜನಕ್ಕೆ ಇದೇ ಮೊದಲ ಬಾರಿಗೆ ಜರ್ಮನ್ ತಂತ್ರಜ್ಞಾನ ಬಳಸಿ ಅಟ್ಟಣಿಗೆಯನ್ನು ನಿರ್ಮಿಸುತ್ತಿರುವುದು ವಿಶೇಷವಾಗಿದೆ.
ದೂರದಿಂದ ಬರುವ ಯಾತ್ರಾರ್ಥಿಗಳ ವಸತಿಗೆ ಸಂಬಂಧಿಸಿದಂತೆ ತ್ಯಾಗಿ ನಗರ, ಕಳಶ ನಗರ 1 ಮತ್ತು 2, ಪಂಚ ಕಲ್ಯಾಣ ನಗರ, ಯಾತ್ರಿ ನಗರ, ಸ್ವಯಂ ಸೇವಕರ ನಗರ ಹೀಗೆ ಎಲ್ಲಾ ಕ್ಷೇತ್ರದವರನ್ನೊಳಗೊಂಡ 12 ಉಪ ನಗರಗಳನ್ನು ನಿರ್ಮಾಣ ಮಾಡಲಾಗಿದೆ. ಈ ನಗರಗಳು ಸಕಲ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು, 600 ಎಕರೆಗಿಂತ ಹೆಚ್ಚಿನ ಪ್ರದೇಶದಲ್ಲಿ ಇವು ನಿರ್ಮಾಣವಾಗಿವೆ.

ಸಕಲ ಸೌಲಭ್ಯಗಳ 12 ಉಪನಗರ
ಈ ಉಪ ನಗರಗಳಲ್ಲಿ ಯಾತ್ರಾರ್ಥಿಗಳಿಗೆ ಅಗತ್ಯ ಶೌಚಾಲಯ, ಸ್ನಾನಗೃಹ, ಆಸ್ಪತ್ರೆ, ಪೊಲೀಸ್ ಠಾಣೆ, ಕುಡಿಯುವ ನೀರಿನ ಕೇಂದ್ರ ಸೇರಿದಂತೆ ಊಟದ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ.

ಜರ್ಮನ್ ತಂತ್ರಜ್ಞಾನ ಬಳಸಿ ಅಟ್ಟಣಿಗೆ ನಿರ್ಮಾಣ
ವಿಂಧ್ಯಗಿರಿ ಬೆಟ್ಟದ ಮೇಲೆ ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕಕ್ಕೆ ಜರ್ಮನ್ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿರುವ ಅಟ್ಟಣಿಗೆಯಲ್ಲಿ ಸುಮಾರು 5,500 ಜನ ಕುಳಿತು ಬಾಹುಬಲಿ ಮೂರ್ತಿಯ ಅಭಿಷೇಕದ ದೃಶ್ಯವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಈ ಅಟ್ಟಣಿಗೆ ನಿರ್ಮಾಣದ ಜತೆಗೆ ಮೂರು ನವೀನ ರೀತಿಯ ಲಿಫ್ಟ್ ಗಳನ್ನು ಕೂಡ ನಿರ್ಮಿಸಲಾಗಿದೆ.

ನೂರಾರು ಕೋಟಿ ಖರ್ಚು
ಮಹಾಮಸ್ತಕಾಭಿಷೇಕದ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರ 175 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದು, ಇದರ ಜತೆಗೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಹಾಗೂ ದುರಸ್ತಿ ಕಾರ್ಯಗಳಿಗೆ 89 ಕೋಟಿ ರೂ. ಖರ್ಚು ಮಾಡಲಾಗಿದೆ.
ಶ್ರವಣಬೆಳಗೊಳಕ್ಕೆ ಹತ್ತಿರವಿರುವ ಜನಿವಾರ ಕೆರೆಯಲ್ಲಿ ದೋಣಿ ವಿಹಾರ ಕೇಂದ್ರ ಅಭಿವೃದ್ಧಿಪಡಿಸಲಾಗಿದೆ. ಯಾತ್ರಾರ್ಥಿಗಳ ಸಾರಿಗೆ ಸಂಪರ್ಕಕ್ಕಾಗಿ 200 ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಜತೆಗೆ 23 ರೈಲುಗಳನ್ನು ಈ ಸಂದರ್ಭದಲ್ಲಿ ಓಡಿಸಲು ರೈಲ್ವೇ ಇಲಾಖೆಗೆ ಮನವಿ ಮಾಡಲಾಗಿದೆ.

1081-2018
ಶ್ರವಣಬೆಳಗೊಳದಲ್ಲಿ ಬಾಹುಬಲಿ ಮೂರ್ತಿಗೆ ಮಹಾಮಸ್ತಕಾಭಿಷೇಕ ಕ್ರಿ.ಶ 1081 ರಲ್ಲಿ ಪ್ರಾರಂಭವಾಗಿದ್ದು ಈಗ ನಡೆಯುತ್ತಿರುವುದು 88ನೇ ಮಹಾಮಸ್ತಕಾಭಿಷೇಕವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications