ಬಾಹುಬಲಿ ನೆಪದಲ್ಲಿ ಕೇಂದ್ರ ಬಜೆಟ್ ಸ್ಮರಿಸಿದ ಮೋದಿ
Recommended Video

ಶ್ರವಣಬೆಳಗೊಳ, ಫೆಬ್ರವರಿ 19: ನಾವು ಬಜೆಟ್ನಲ್ಲಿ ಘೋಷಿಸಿರುವ 'ಆಯುಷ್ಮಾನ್ ಭಾರತ' ವಿಮಾ ಯೋಜನೆ ಇಡೀಯ ವಿಶ್ವದಲ್ಲೇ ದೊಡ್ಡ ಯೋಜನೆ, ಸ್ವತಂತ್ರ ಭಾರತದ ನಂತರ ಭಾರತದಲ್ಲಿ ಇಡಲಾಗುತ್ತಿರುವ ಅತಿ ದೊಡ್ಡ ಹೆಜ್ಜೆ ಇದು ಎಂದು ಪ್ರಧಾನಿ ಮೋದಿ ಹೇಳಿದರು.
ಮಹಾಮಸ್ತಕಾಭಿಷೇಕ ಸಂದರ್ಭ ವಿಂದ್ಯಾಗಿರಿ ಬೆಟ್ಟಕ್ಕೆ ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ಇಂದ ನಿರ್ಮಿಸಿದ 630 ಮೆಟ್ಟಿಲುಗಳು ಹಾಗೂ ಬಾಹುಬಲಿ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.
In Pics: ಮುಗಿಲೆತ್ತರಕ್ಕೆ ನಿಂತ ವಿರಾಗಿಗೆ ಮಹಾಮಸ್ತಕಾಭಿಷೇಕ
'ಒಬ್ಬ ವ್ಯಕ್ತಿಗೆ ಖಾಯಿಲೆ ಬಂದರೆ ಅದು ಆತನ ಕುಟುಂಬವನ್ನೇ ಸಾಲಗಳ ಕೂಪಕ್ಕೆ ತಳ್ಳಿಬಿಡುತ್ತದೆ. ಆ ಕುಟುಂಬದ ನಾಲ್ಕೈದು ತಲೆಮಾರಿನ ಮೇಲೆ ಖಾಯಿಲೆಯಿಂದಾಗುವ ನಷ್ಟ ಪ್ರಭಾವ ಬೀರುತ್ತದೆ ಹಾಗಾಗಿ ನಾವು ಅಂತಹಾ ಬಡ, ಮಧ್ಯಮವರ್ಗದ ಜನರನ್ನು ಅವರ ಕಷ್ಟದ ಸಮಯದಲ್ಲಿ ಕೈ ಹಿಡಿಯಲು ಮುಂದಾಗಿದ್ದೇವೆ ಎಂದರು.

ಧಾರ್ಮಿಕ, ಸಾಮಾಜಿಕ ಎರಡೂ ಇವೆ
ಭಾರತದಲ್ಲಿ ಸಾಮಾಜಿಕ ಕಾರ್ಯಗಳಿಗಿಂತಲೂ ಧಾರ್ಮಿಕ ಕಾರ್ಯಗಳಿಗೆ ಹೆಚ್ಚು ಪ್ರಾಧಾನ್ಯತೆ ಎನ್ನುವ ವಾದ ಸರಿಯಲ್ಲ, ಅವೆರಡೂ ಜೊತೆ ಜೊತೆಯಾಗೇ ಸಾಗುತ್ತವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.

ಶಿಕ್ಷಣ, ಆರೋಗ್ಯದ ಅಭಿವೃದ್ಧಿ
ದೇಶದಲ್ಲಿ ಪುರಾತನ ಕಾಲದಿಂದಲೂ ಮುನಿಗಳು, ಋಷಿಗಳು, ಸಂತರು ಧಾರ್ಮಿಕ ಕಾರ್ಯದ ಜೊತೆಗೆ ಸಾಮಾಜಿಕ ಕಾರ್ಯಗಳನ್ನೂ ಮಾಡುತ್ತಲೇ ಬಂದಿದ್ದಾರೆ. ಶಿಕ್ಷಣ, ಆರೋಗ್ಯದ ಕ್ಷೇತ್ರಗಳಲ್ಲಿ ಅವರ ಸೇವೆ ಅಪಾರ ಎಂದು ಅವರು ಸಂತಮುನಿಗಳ ಸೇವೆಯನ್ನು ಮೋದಿ ಸ್ಮರಿಸಿದರು.

ಕೇಂದ್ರದ ಸಹಾಯಕ್ಕೆ ಸಂತಸ
ಶ್ರವಣಬೆಳಗೊಳಕ್ಕೆ ಆಗಮಿಸಲು ಪುಣ್ಯ ಮಾಡಿದ್ದೇನೆ ಎಂದ ಅವರು, ಮಸ್ತಕಾಭಿಷೇಕದಲ್ಲಿ ಕೇಂದ್ರ ತನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದೆ ಅದಕ್ಕೆ ನಾನು ಸಂತೋಷಿತನಾಗಿದ್ದೇನೆ ಎಂದರು. ಬಾಹುಬಲಿಯ ಬಗೆಗಿನ ಶ್ಲೋಕವೊಂದನ್ನು ಹೇಳಿ ಚಪ್ಪಾಳೆ ಗಿಟ್ಟಿಸಿದ ಅವರು ಅದರ ತಾತ್ಪರ್ಯವನ್ನೂ ತಿಳಿಸಿದರು.

630 ಮೆಟ್ಟಿಲುಗಳ ಲೋಕಾರ್ಪಣೆ
ವಿಂದ್ಯಗಿರಿ ಬೆಟ್ಟಕ್ಕೆ ಕೇಂದ್ರದ ಅನುದಾನದಲ್ಲಿ ನಿರ್ಮಿಸಿರುವ 630 ಮೆಟ್ಟಿಲುಗಳು ಹಾಗೂ ಬಾಹುಬಲಿ ಸಾರ್ವಜನಿಕ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications